Crime: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೆ ಚಾಕು ಇರಿತ; ಬಂಧನ


Team Udayavani, Aug 28, 2023, 11:38 AM IST

Crime: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೆ ಚಾಕು ಇರಿತ; ಬಂಧನ

ಬೆಂಗಳೂರು: ಗಣಪತಿ ಹಬ್ಬದ ವಿಚಾರ ಚರ್ಚಿಸುವ ವೇಳೆ ವೈಯಕ್ತಿಕ ವಿಚಾರಕ್ಕೆ ಯುವಕನೊಬ್ಬ ಆತನ ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಹಲಸೂರು ಗೇಟ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಬ್ಬನ್‌ಪೇಟೆ ನಿವಾಸಿ ಅಜಿತ್‌ (24) ಚಾಕು ಇರಿತಕ್ಕೊಳಗಾದವ. ಕೃತ್ಯ ಎಸಗಿದ ಆತನ ಸ್ನೇಹಿತ ಸುಮನ್‌ (24) ಎಂಬಾತನನ್ನು ಬಂಧಿಸಲಾಗಿದೆ.

ಶನಿವಾರ ತಡರಾತ್ರಿ ಕಬ್ಬನ್‌ಪೇಟೆಯ ಮೂರನೇ ಕ್ರಾಸ್‌ನಲ್ಲಿ ಘಟನೆ ನಡೆದಿದೆ. ಸುಮನ್‌ ಮತ್ತು ಅಜಿತ್‌ ಬಾಲ್ಯ ಸ್ನೇಹಿತರಾಗಿದ್ದು, ಅಜಿತ್‌ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಸುಮನ್‌ ಕಂಠೀರವ ಸ್ಟೇಡಿಯಂನಲ್ಲಿ ಕರಾಟೆ ತರಬೇತಿ ನೀಡುತ್ತಿದ್ದ. ಇಬ್ಬರು ಮಾದಕ ವಸ್ತು ಹಾಗೂ ಮದ್ಯ ವ್ಯಸನಿಯಾಗಿದ್ದಾರೆ. ಗಣಪತಿ ಕೂರಿಸುವ ಸಲುವಾಗಿ ಸುಮನ್‌, ಧರ್ಮರಾಯ ಸ್ವಾಮಿ ದೇಗುಲದ ಬಳಿ ಇತರೆ ಸ್ನೇಹಿತರ ಬಳಿ ಚರ್ಚಿಸುತ್ತಿದ್ದ. ಅದೇ ವೇಳೆ ಮದ್ಯ ಸೇವಿಸಿ ಬಂದ ಅಜಿತ್‌, ಸುಮನ್‌ ಕಡೆ ಗುರಾಯಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಅಲ್ಲದೆ, “ಸದ್ಯದಲ್ಲೇ ನಿನಗೆ ಇದೆ ಕಣೋ’ ಎಂದಿದ್ದಾನೆ. ಆಗ ಸುಮನ್‌, ‘ಈಗ ಬೇಡ, ಬೆಳಗ್ಗೆ ಮಾತಾಡೋಣ ಹೋಗು’ ಎಂದು ಹೇಳಿದ್ದಾನೆ. ಆದರೂ, ಅಜಿತ್‌ ನಿಂದಿಸುವುದನ್ನು ಮುಂದುವರಿಸಿದ್ದ. ಅದು ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಸುಮನ್‌, ಚಾಕು ತಂದು ಅಜಿತ್‌ನ ಎದೆ, ಕುತ್ತಿಗೆ, ಬೆನ್ನು ಸೇರಿ ಐದಾರು ಕಡೆಗಳಲ್ಲಿ ಮನ ಬಂದಂತೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಅಜಿತ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರಾಣಪಾಯದಿಂದ ಪಾರಾಗಿದ್ದಾನೆ. ಕೃತ್ಯ ಎಸಗಿದ ಸುಮನ್‌ನನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ, ಹಲಸೂರು ಗೇಟ್‌ ಉಪವಿಭಾಗದ ಎಸಿಪಿ ಶಿವಾನಂದ ಛಲವಾದಿ ಹಾಗೂ ಹಲಸೂರು ಗೇಟ್‌ ಠಾಣಾಧಿಕಾರಿ ಹನುಮಂತ ಕೆ.ಭಜಂತ್ರಿ ಹಾಗೂ ತಂಡ ಭೇಟಿ ನೀಡಿ ಪರಿಶೀಲಿಸಿದೆ.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.