Crime: ಕಾಲು ಟಚ್ ಆಗಿದ್ದಕ್ಕೆ ಮರ್ಡರ್!
Team Udayavani, Mar 10, 2024, 11:36 AM IST
ಬೆಂಗಳೂರು: ನೃತ್ಯ ಮಾಡುವ ಸಂದರ್ಭದಲ್ಲಿ ಮೈ, ಕಾಲು ತಗುಲಿದ ವಿಚಾರಕ್ಕೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿ ರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಿರಿನಗರ ನಿವಾಸಿ ಯೋಗೇಶ್(24) ಕೊಲೆಯಾದವ. ಕೃತ್ಯ ಎಸಗಿದ ಆರೋಪಿ ಗಳ ಬಗ್ಗೆ ಮಾಹಿತಿಯಿದ್ದು ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಬೈಕ್ಗಳ ಸ್ವಚ್ಚಗೊಳಿಸುವ ಕೆಲಸ ಮಾಡಿಕೊಂಡಿರುವ ಯೋಗೇಶ್, ಶುಕ್ರವಾರ ರಾತ್ರಿ ಗಿರಿನಗರ ಬಳಿಯ ದೇವಸ್ಥಾನದಲ್ಲಿ ನಡೆದ ಶಿವರಾತ್ರಿ ಜಾಗರಣೆ ಪೂಜೆಗೆ ಹೋಗಿದ್ದ. ಈ ವೇಳೆ ಸ್ಥಳೀಯ ಯುವಕರು ನೃತ್ಯ ಮಾಡುತ್ತಿದ್ದರು. ಅವರೊಂದಿಗೆ ಈತ ಕೂಡ ನೃತ್ಯ ಮಾಡಿದ್ದಾನೆ. ಆ ವೇಳೆ ಆರೋಪಿಯೊಬ್ಬನಿಗೆ ಯೋಗೇಶ್ನ ಮೈ ಮತ್ತು ಕಾಲು ತಗುಲಿದೆ.
ಇದೇ ಕಾರಣಕ್ಕೆ ಆರೋಪಿಗಳು ಮತ್ತು ಯೋಗೇಶ್ ನಡುವೆ ಜಗಳ ಶುರುವಾಗಿದ್ದು ಅದು ವಿಕೋಪಕ್ಕೆ ಹೋದಾಗ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಳಿಕ ಸ್ಥಳೀಯರು ಜಗಳ ಬಿಡಿಸಿ ಎಲ್ಲರನ್ನೂ ಸ್ಥಳದಿಂದ ಕಳುಹಿಸಿದ್ದರು. ಇತ್ತ ಯೋಗೇಶ್, ಬೈಕ್ನಲ್ಲಿ ಮನೆ ಕಡೆ ಹೋಗುವಾಗ ಬ್ಯಾಟರಾಯನಪುರ ಬಳಿ ಅಡ್ಡಗಟ್ಟಿದ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರ ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಆಗ ಪ್ರಾಣ ಉಳಿಸಿ ಕೊಳ್ಳಲು ಬೈಕ್ ಬಿಟ್ಟು ಯೋಗೇಶ್, ಮನೆಯೊಂದರ ಕಾಂಪೌಂಡ್ ಜಿಗಿದಿದ್ದಾನೆ. ಆದರೂ ಬಿಡದ ಆರೋಪಿಗಳು ಚಾಕುವಿನಿಂದ ಯೋಗೇಶ್ನನ್ನು ಇರಿದು ಕೊಲೆಗೈದು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ