ಅಕ್ರಮ ಸಂಬಂಧ, ಹಣಕಾಸು ವಿಚಾರವೇ ಕೊಲೆಗೆ ಕಾರಣ; ಸಾಲ ವಾಪಸ್‌ಗೆ ಸರೋಜಾಳನ್ನು ಪೀಡಿಸುತ್ತಿದ್ದ ಯುವಕ

ನೆಲಕ್ಕೆ ಕೆಡವಿ 20 ಬಾರಿ ಕಲ್ಲು ಎತ್ತಿ ಹಾಕಿ ಕೊಂದ ಪ್ರಕರಣ

Team Udayavani, Dec 8, 2022, 5:49 PM IST

12

ಬೆಂಗಳೂರು: ಇತ್ತೀಚೆಗೆ ಕೆ.ಪಿ.ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಾದಾಮಿ ತಾಲೂಕಿನ ಮಂಜುನಾಥ್‌ ಬಾಳಪ್ಪ ಜಮಖಂಡಿ ಎಂಬಾತನ ಭೀಕರ ಹತ್ಯೆಗೆ ಅಕ್ರಮ ಸಂಬಂಧ ಮಾತ್ರವಲ್ಲ, ಹಳೇ ದ್ವೇಷ, ಜಮೀನು ಹಾಗೂ ಹಣಕಾಸಿನ ವಿಚಾರ ಕೂಡ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ವಿಜಯಪುರ ಜಿಲ್ಲೆಯ ಪ್ರೇಮವ್ವ, ಆಕೆಯ ಅಕ್ಕ ಮಹಾದೇವಿ, ಈಕೆಯ ಪತಿ ಮಂಜುನಾಥ್‌, ಸಂಬಂಧಿ ಕಿರಣ್‌, ಕಾಶಿನಾಥ್‌, ಚಿನ್ನಪ್ಪ ಎಂಬುವರನ್ನು ಬಂಧಿಸಲಾಗಿದೆ.

ಪ್ರಮುಖ ಆರೋಪಿ ಸರೋಜಾ ಎಂಬಾಕೆಗಾಗಿ ಶೋಧ ನಡೆಸಲಾಗುತ್ತಿದೆ. ಡಿ.4ರಂದು ನಸುಕಿನ 1 ಗಂಟೆ ಸುಮಾರಿಗೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮಂಜುನಾಥ್‌ ಬಾಳಪ್ಪ ಜಮಖಂಡಿ(22) ಎಂಬಾತನ ಮೇಲೆ ಕೊಲೆಗೈದು ಪರಾರಿಯಾಗಿದ್ದರು.

ಬಾಗಲಕೋಟೆಯಲ್ಲೇ ಪರಿಚಯ: ಬಾಗಲಕೋಟೆಯ ಬಾದಾಮಿ ತಾಲೂಕಿನಲ್ಲಿ ಮಂಜುನಾಥ್‌ ಬಾಳಪ್ಪ ಜಮಖಂಡಿ ಖಾನಾವಳಿ ನಡೆಸುತ್ತಿದ್ದು, ಸರೋಜಾ ಪತಿ ದುಬೈನಲ್ಲಿದ್ದರು. ಹೀಗಾಗಿ ಈಕೆ ಇಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದಳು. ಈ ವೇಳೆ ಇಬ್ಬರ ನಡುವೆ ಪರಿಚಯವಾಗಿದ್ದು, ಲಿವಿಂಗ್‌ ಟುಗೇದರ್‌ನಲ್ಲಿ ವಾಸವಾಗಿದ್ದರು. ಈ ವಿಚಾರ ಆಕೆಯ ತಾಯಿ ಪ್ರೇಮವ್ವ, ಸಹೋದರಿ ಅಕ್ಕಮಹಾದೇವಿ ಹಾಗೂ ಕುಟುಂಬಕ್ಕೂ ಗೊತ್ತಿತ್ತು. ಮತ್ತೂಂದೆಡೆ ದುಬೈನಲ್ಲಿರುವ ಪತಿಗೆ ಗೊತ್ತಾಗಿ, ಆತ ಪ್ರೇಮವ್ವ ಜತೆ ಫೋನ್‌ನಲ್ಲಿ ಜಗಳ ಮಾಡಿದ್ದ. ಹೀಗಾಗಿ ಇಡೀ ಕುಟುಂಬ ಆಕ್ರೋಶಗೊಂಡಿತ್ತು.

ಆದರೆ, ಮಂಜುನಾಥ್‌, ಖಾನಾವಳಿ ಮಾರಾಟ ಮಾಡಿ, ಬಂದ ಹಣದಲ್ಲಿ ಒಂದಿಷ್ಟನ್ನು ಪ್ರೇಯಸಿ ಸರೋಜಾಗೂ ಕೊಟ್ಟಿದ್ದ. ಒಂದೂವರೆ ವರ್ಷದ ಬಳಿಕ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ದೂರವಾಗಿದ್ದರು. ಆಗಿನಿಂದಲೂ ಮಂಜುನಾಥ್‌ ಬಾಳಪ್ಪ ಹಣ ವಾಪಸ್‌ ಕೊಡುವಂತೆ ಪೀಡಿಸುತ್ತಿದ್ದ. ಈ ಸಂಬಂಧ ಸರೋಜಾ ಮತ್ತು ಆಕೆಯ ಕುಟುಂಬ ಸದಸ್ಯರು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಮಂಜುನಾಥ್‌ ವಿರುದ್ಧ ದೂರು ನೀಡಿದ್ದರು. ಬಳಿಕ ಆಕೆ ದಾವಣಗೆರೆಗೆ ಸ್ಥಳಾಂತರಗೊಂಡು ಅಲ್ಲಿಯೂ ಬಟ್ಟೆ ವ್ಯಾಪಾರ ಮಾಡುವಾಗ ಅಲ್ಲಿಗೂ ಬಂದ ಮಂಜುನಾಥ್‌, ಹಣಕ್ಕಾಗಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲಿನ ಸ್ಥಳೀಯ ಠಾಣೆಯಲ್ಲಿ ಮಂಜುನಾಥ್‌ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿತ್ತು.

ಒಂದು ವಾರದ ಹಿಂದೆ ಬಂದಿದ್ದ ಸರೋಜಾ: ಕೃತ್ಯಕ್ಕೂ ಒಂದು ವಾರದ ಹಿಂದಷ್ಟೇ ಸರೋಜಾ ಬೆಂಗಳೂರಿಗೆ ಬಂದಿದ್ದು, ಸಹೋದರಿ ಅಕ್ಕಮಹಾದೇವಿ ಮನೆಯಲ್ಲಿ ವಾಸವಾಗಿದ್ದಳು. ಒಂದೆರಡು ದಿನಗಳಲ್ಲಿ ಪ್ರತ್ಯೇಕ ಬಾಡಿಗೆ ಮನೆ ಮಾಡಿಕೊಂಡು, ಕೆಲಸ ಹುಡುಕುತ್ತಿದ್ದಳು.

ಆಕೆಯ ಬೆನ್ನತ್ತಿ ಬಂದಿದ್ದ ಮಂಜುನಾಥ್‌ ಆಕೆಗೆ ಕರೆ ಮಾಡಿ ಹಣ ಕೊಡುವಂತೆ ಪೀಡಿಸಿದ್ದ. ಅದರಿಂದ ಆಕ್ರೋಶಗೊಂಡಿದ್ದ ಇಡೀ ಕುಟುಂಬ ಕೊಲೆಗೆ ಸಂಚು ರೂಪಿಸಿತ್ತು. ನಂತರ ಆತನನ್ನು ಮಾತುಕತೆಗೆಂದು ಕರೆದು, ನಡು ರಸ್ತೆಯಲ್ಲಿ ವಾಗ್ವಾದ ನಡೆಸಿದ್ದರು. ಆದರೆ, ಇದ್ಯಾವುದಕ್ಕೂ ಒಪ್ಪದ ಮಂಜುನಾಥ್‌ ತನಗೆ ಹಣಬೇಕೆಂದು ಆಗ್ರಹಿಸಿದ್ದ. ಅದರಿಂದ ಆಕ್ರೋಶಗೊಂಡ ಆರೋಪಿಗಳು ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ. ಆಗ ಪ್ರೇಮವ್ವ ಈ ಹಿಂದಿನಿಂದಲೂ ತಮ್ಮ ಕುಟುಂಬಕ್ಕೆ ತೊಂದರೆ ಕೊಡುತ್ತಿದ್ದವನನ್ನು ಕೊಲೆಗೈಯಬೇಕೆಂದು ಕಲ್ಲು ಎತ್ತಿ ಹಾಕಿದ್ದಾಳೆ. ನಂತರ ಆಕೆಯ ಪುತ್ರಿ, ಅಕ್ಕಮಹಾದೇವಿ, ಸರೋಜಾ ಹಾಗೂ ಇತರೆ ಆರೋಪಿಗಳು 20 ಬಾರಿಕಲ್ಲು ಎತ್ತಿ ಹಾಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ಹೇಳಿದರು.

ತಾಯಿಗೆ ಮಾಹಿತಿ ನೀಡಿದ್ದ ಮಂಜುನಾಥ್‌

ತಾನೂ ಸರೋಜಾಳಿಂದ ಹಣ ಪಡೆಯಲು ಬೆಂಗಳೂರಿಗೆ ಹೋಗುತ್ತಿದ್ದಾಗಿ ತಾಯಿಗೆ ತಿಳಿಸಿದ್ದ. ಅಲ್ಲದೆ, ಬೆಂಗಳೂರಿಗೆ ಬಂದಾಗ ಕರೆ ಮಾಡಿ, ತನಗೆ ಏನಾದರೂ ತೊಂದರೆ ಉಂಟಾದರೆ, ಮಾಗಡಿ ರಸ್ತೆಯಲ್ಲಿರುವ ಸರೋಜಾಳ ವಿಳಾಸ ತಿಳಿಸಿದ್ದ. ಈತ ಮಂಜುನಾಥ್‌ ಬಾಳಪ್ಪನ ಗುರುತು ಪತ್ತೆ ಹಚ್ಚಿದ ಪೊಲೀಸರಿಗೆ ಆತ ತಾಯಿಗೆ ಕರೆ ಮಾಡಿರುವ ವಿಚಾರ ಗೊತ್ತಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದರು.

ಇದೊಂದು ಪೂರ್ವನಿಯೋಜಿತ ಕೊಲೆ. ಪ್ರಾಥಮಿಕ ವಿಚಾರಣೆಯಲ್ಲಿ ಹಣಕಾಸು ಹಾಗೂ ಇತರೆ ವಿಚಾರಗಳಿಗೆ ಕೃತ್ಯ ನಡಿದಿದೆ ಎಂಬುದು ಗೊತ್ತಾಗಿದೆ. ಸರೋಜಾ ಬಂಧಿಸಿದ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ.  –ಲಕ್ಷ್ಮಣ್‌ ನಿಂಬರಗಿ, ಪಶ್ಚಿಮ ವಿಭಾಗ ಡಿಸಿಪಿ

 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.