ಕತ್ತು ಕೊಯ್ದುಕೊಂಡು ಆತ್ಮಹತ್ಯೆ
Team Udayavani, Dec 16, 2022, 12:52 PM IST
ಬೆಂಗಳೂರು: ಬನ್ನೇರುಘಟ್ಟ ಸಮೀಪದ ಎಎಮ್ಸಿ ಎಂಜಿನಿಯರಿಂಗ್ ಕಾಲೇಜಿಗೆ ಸೇರಿದ ಹಾಸ್ಟೆಲ್ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೇರಳ ಮೂಲದ ನಿತಿನ್ (19) ಆತ್ಮಹತ್ಯೆಗೆ ಶರಣಾದವನು.
ಸಿಎಸ್ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದ ನಿತಿನ್ ಡಿ.1ರಂದು ಕಾಲೇಜು ಸೇರಿದ್ದ. ಡಿ.14ರಂದು ಮಧ್ಯಾಹ್ನ ಹಾಸ್ಟೆಲ್ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇತ್ತ ನಿತಿನ್ ಹಲವು ಹೊತ್ತಿನ ಬಳಿಕವೂ ಶೌಚಾಲಯದಿಂದ ರೂಂಗೆ ಬಾರದ ಹಿನ್ನೆಲೆಯಲ್ಲಿ ಸಹಪಾಠಿಗಳು ವಾರ್ಡನ್ಗೆ ಮಾಹಿತಿ ನೀಡಿದ್ದರು.
ವಾರ್ಡನ್ ಶೌಚಾಲಯದ ಬಾಗಿಲು ಒಡೆದಾಗ ನಿತಿನ್ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿರುವುದು ಕಂಡು ಬಂದಿದೆ.
ಬನ್ನೆರುಘಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪಾಲಕರಿಂದ ದೂರವಿದ್ದ ಬಗ್ಗೆ ನಿತಿನ್ ಬೇಸರಿಸಿಕೊಂಡಿದ್ದ. ಡಿ.1ಕ್ಕೆ ಕಾಲೇಜು ಸೇರಿದ್ದ ನಿತಿನ್ ಆದಾದ ಬಳಿಕ ಪದೇ ಪದೆ ದುಬೈನಲ್ಲಿ ವಾಸವಿದ್ದ ತಂದೆ-ತಾಯಿಗೆ ಕರೆ ಮಾಡುತ್ತಿದ್ದ. ಪಾಲಕರ ಪ್ರೀತಿ ಸಿಗದೇ ಬೇಸರಗೊಂಡು ಚಾಕುವಿನಿಂದ ತಾನೇ ಚುಚ್ಚಿಕೊಂಡು, ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಅನುಮಾನ ವ್ಯಕ್ತಡಿಸಿದ್ದಾರೆ.
ನಿತಿನ್ ಕುಟುಂಬದವರು ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಪದಿನಿ ಜರಿಯಾ ವಿಲೇಜ್ ಮೂಲದವರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್