ಸ್ನೇಹಿತನ ಕೈಕಾಲು ಕಟ್ಟಿ ಬಾಯಿಗೆ ಟೇಪ್ ಸುತ್ತಿ ಹತ್ಯೆ
Team Udayavani, Apr 1, 2023, 11:20 AM IST
ಬೆಂಗಳೂರು: ಬೈಕ್ ನಿಲುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಕೈಕಾಲುಗಳನ್ನು ವೈಯರ್ ನಿಂದ ಕಟ್ಟಿದ ಆರೋಪಿಗಳು ಬಾಯಿಗೆ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಪ್ರಕರಣ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉಡುಪಿ ಮೂಲದ ಯಲಹಂಕದ ಶ್ರೀನಿವಾಸ ಪುರ ನಿವಾಸಿ ಜನಾರ್ದನ್ ಭಟ್ಟ (29) ಕೊಲೆಯಾದ ಯುವಕ. ಆರೋಪಿಗಳಾದ ಸುಲೇಮಾನ್, ರಿಜ್ವಾನ್ ತಲೆಮರೆಸಿಕೊಂಡಿದ್ದಾರೆ.
ಒಂದೂವರೆ ವರ್ಷಗಳಿಂದ ಶ್ರೀನಿವಾಸಪುರದಲ್ಲಿ ವಾಸಿಸುತ್ತಿದ್ದ ಜನಾರ್ದನ್ ಖಾಸಗಿ ಕಂಪನಿಯೊಂದರಲ್ಲಿ ಟಿ.ವಿ ರಿಪೇರಿ ಕೆಲಸ ಮಾಡಿಕೊಂಡಿದ್ದರು. ಅದೇ ಕಂಪೆನಿಯಲ್ಲಿ ಫ್ರಿಡ್ಜ್ , ಎಸಿ ರಿಪೇರಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ರಿಜ್ವಾನ್ ಹಾಗೂಸುಲೆಮಾನ್ ಕೆಲ ತಿಂಗಳಿಂದ ಜನಾರ್ದನ್ ವಾಸವಾಗಿರುವ ಸಾಯಿ ಸಮೃದ್ದಿ ಅಪಾರ್ಟ್ಮೆಂಟ್ನ ಸಮೀಪದ ರೂಮಿನಲ್ಲಿ ವಾಸಿಸುತ್ತಿದ್ದರು.
ಈ ಮಧ್ಯೆ, ಮಾ.29 ರಂದು ರಾತ್ರಿ ಯಲಹಂಕ ಸಮೀಪದಲ್ಲಿ ಬೈಕ್ ನಿಲ್ಲಿಸುವ ವಿಚಾರದಲ್ಲಿ ಜನಾರ್ದನ್ ಭಟ್ ಜತೆಗೆ ಸ್ನೇಹಿತರಾದ ಸುಲೇಮನ್ ಹಾಗೂ ರಿಜ್ವಾನ್ ಜಗಳ ಮಾಡಿದ್ದರು. ಜಗಳ ತಾರಕಕ್ಕೇ ಏರಿದಾಗ ವೈಯರ್ನಿಂದ ಜನಾರ್ದನ್ ಭಟ್ ಅವರ ಕೈಕಾಲು ಕಟ್ಟಿ ಬಾಯಿಗೆ ಟೇಪ್ ಸುತ್ತಿ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.
ಮರುದಿನ ಬೆಳಗ್ಗೆ ಪಕ್ಕದ ಮನೆಯವರು ಬಂದು ನೋಡಿದಾಗ ಕೊಲೆಯಾದ ಸ್ಥಿತಿಯಲ್ಲಿ ಜನಾರ್ದನ್ ಶವ ಪತ್ತೆಯಾಗಿತ್ತು. ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ