2ನೇ ಮದುವೆಗೆ ನಿರಾಕರಿಸಿದ ಸ್ನೇಹಿತೆಗೆ ಚಾಕು ಇರಿತ


Team Udayavani, Jan 17, 2023, 12:18 PM IST

2ನೇ ಮದುವೆಗೆ ನಿರಾಕರಿಸಿದ ಸ್ನೇಹಿತೆಗೆ ಚಾಕು ಇರಿತ

ಬೆಂಗಳೂರು: ಎರಡನೇ ಮದುವೆಗೆ ನಿರಾಕರಿಸಿದ ಸ್ನೇಹಿತೆಗೆ ಆಟೋ ಚಾಲಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಆರ್‌.ಟಿ.ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‌.ಟಿ.ನಗರ ನಿವಾಸಿ ಹಬೀಬ್‌ ತಾಜ್‌ (30) ಇರಿತಕ್ಕೊಳಗಾದ ಮಹಿಳೆ.

ಕೃತ್ಯ ಎಸಗಿದ ಆರೋಪಿ ಶೇಕ್‌ ಮೆಹಬೂಬ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಹಬೀಬ್‌ ತಾಜ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳು ಇದ್ದಾರೆ. ಈ ಮಧ್ಯೆ ಕೆಲ ವರ್ಷಗಳ ಹಿಂದೆ ಆಕೆಯ ಪತಿ ಮೃತಪಟ್ಟಿದ್ದರು. ಈ ವೇಳೆ ತನ್ನ ಶಾಲಾ ದಿನಗಳ ಸ್ನೇಹಿತ ಶೇಖ್‌ ಮೆಹಬೂಬ್‌ ಪರಿಚಯವಾಗಿದ್ದು, ಆತನ ಜತೆ ಆತ್ಮೀಯತೆ ಇತ್ತು. ಅದನ್ನೇ ದುರುಪಯೋಗ ಪಡಿಸಿಕೊಂಡ ಆರೋಪಿ, ಹಬೀಬ್‌ಳನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಆಕೆ, ತನಗೆ ಮದುವೆಯಾಗಿದ್ದು, ಈಗಾಗಲೇ ಇಬ್ಬರು ಮಕ್ಕಳು ಇದ್ದಾರೆ ಎಂದು ಹೇಳಿದ್ದರು. ಆದರೂ ಆರೋಪಿ ಮದುವೆಗೆ ಪೀಡಿಸುತ್ತಿದ್ದ. ಮತ್ತೂಂದೆಡೆ ಆತನಿಗೂ ಮದುವೆಯಾಗಿದ್ದು, ಇಬ್ಬರು ಮಕ್ಕಳು ಇದ್ದಾರೆ. ಆದರೂ ಹಬೀಬ್‌ ಜತೆ ಅಕ್ರಮ ಸಂಬಂಧ ಹೊಂದಲು ಮುಂದಾಗಿದ್ದ. ಅದಕ್ಕೆ ನಿರಾಕರಿಸಿದಾಗ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಮನೆಗೆ ಬಂದು ಹಬೀಬ್‌ ಜತೆ ಜಗಳ ತೆಗೆದು, ಆಕೆ ಸೊಂಟ ಹಾಗೂ ಅಂಗೈಗೆ ಇರಿದು ಪರಾರಿಯಾ ಗಿದ್ದ. ಅದನ್ನು ಗಮನಿಸಿದ ಮನೆ ಮಾಲೀಕರು ಕೂಡಲೇ ಆಕೆಯ ಸಹೋದರಿ ರಿಯಾಜ್‌ ಪಾಷಾಗೆ ಮಾಹಿತಿ ನೀಡಿದ್ದಾರೆ.

ಆತ ಸ್ಥಳೀಯ ನೆರವು ಪಡೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಹಬೀಬ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

ಐಐಎಸ್‌ಸಿಯಲ್ಲಿ ನಿರಂತರವಾಗಿ ಕದಿಯುತ್ತಿದ್ದ ಕಳ್ಳನ ಬಂಧನ  

ಐಐಎಸ್‌ಸಿಯಲ್ಲಿ ನಿರಂತರವಾಗಿ ಕದಿಯುತ್ತಿದ್ದ ಕಳ್ಳನ ಬಂಧನ  

tdy-9

ಅಪಾರ್ಟ್‌ಮೆಂಟ್‌ನಲ್ಲಿ ಕಲುಷಿತ ನೀರು ಸೇವಿಸಿ 132 ಮಕ್ಕಳು ಅಸ್ವಸ್ಥ  

1,344 ರೌಡಿಶೀಟರ್‌ ಮನೆಗಳ ಮೇಲೆ ದಾಳಿ

1,344 ರೌಡಿಶೀಟರ್‌ ಮನೆಗಳ ಮೇಲೆ ದಾಳಿ

tdy-5

ಮತ್ತು ಬರುವ ಜ್ಯೂಸ್‌ ಕುಡಿಸಿ ಅತ್ಯಾಚಾರ

MUST WATCH

udayavani youtube

ಆರೋಗ್ಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರಥಮ ಆದ್ಯತೆ: ಕಿರಣ್‌ ಕೊಡ್ಗಿ

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಹೊಸ ಸೇರ್ಪಡೆ

1-sadasd

Sirsi ಭಾರಿ ಮೌಲ್ಯದ ನಾಟಾ ಅಕ್ರಮ ಸಾಗಾಟ; ನಾಲ್ವರ ಬಂಧನ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್