ಮದ್ಯದ ಅಮಲಿನಲ್ಲಿ ಸ್ನೇಹಿತನ ಕೊಲೆ
Team Udayavani, May 29, 2023, 2:31 PM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಾದಮಂಗಲ ಕಾರ್ಮಿಕ ಶೆಡ್ ನಿವಾಸಿ ವೀರೇಂದ್ರ ಕುಮಾರ್(38) ಕೊಲೆಯಾದವ. ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.
ಈ ಸಂಬಂಧ ಆರೋಪಿ ಮನೋಹರ್ ವರ್ಮಾ(28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ವೀರೇಂದ್ರ ಕುಮಾರ್ ಮತ್ತು ಆರೋಪಿ ಮನೋಹರ್ ವರ್ಮಾ, ನಗರದಲ್ಲಿ ಪೇಂಟರ್ ಕೆಲಸ ಮಾಡುತ್ತಿದ್ದರು. ಕಾಡುಗೋಡಿಯ ಸಾದಮಂಗಲದಲ್ಲಿ ಕಾರ್ಮಿಕ ಶೆಡ್ನಲ್ಲಿ ವಾಸವಾಗಿದ್ದರು. ಇಬ್ಬರು ಮದ್ಯ ವ್ಯಸನಿಯಾಗಿದ್ದರು. ಶುಕ್ರವಾರ ರಾತ್ರಿ ಇಬ್ಬರು ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ. ಮದ್ಯದ ಅಮಲಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಪರಸ್ಪರ ಅವಾಚ್ಯಶಬ್ಧಗಳಿಂದ ಬೈದುಕೊಂಡಿದ್ದಾರೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮನೋಹರ್ ವರ್ಮಾ ಏಕಾಏಕಿ ವೀರೇಂದ್ರ ಕುಮಾರ್ಗೆ ಹಲ್ಲೆ ಮಾಡಿದ್ದಾನೆ. ನೆಲಕ್ಕೆ ಬಿದ್ದ ಆತನ ಕುತ್ತಿಗೆ ಮೇಲೆ ಕಾಲು ಇರಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ತನಗೂ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಕಾರ್ಮಿಕರ ಶೆಡ್ನಲ್ಲಿ ಮಲಗಿದ್ದ ಎಂದು ಪೊಲೀಸರು ಹೇಳಿದರು.
ಶನಿವಾರ ಬೆಳಗ್ಗೆ ವೀರೇಂದ್ರ ಕುಮಾರ್ ಎಚ್ಚರಗೊಂಡಿರಲಿಲ್ಲ. ಈ ಬಗ್ಗೆ ಅನುಮಾನಗೊಂಡ ಪಕ್ಕದ ಶೆಡ್ನ ಕಾರ್ಮಿಕರು ಬಂದ ಎಚ್ಚರಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ, ವೀರೇಂದ್ರ ಕುಮಾರ್ ಎಚ್ಚರವಾಗಿಲ್ಲ. ಈ ವೇಳೆ ಆತಂಕಗೊಂಡ ಕಾರ್ಮಿಕರು ಗುತ್ತಿಗೆದಾರರನಿಗೆ ಮಾಹಿತಿ ನೀಡಿದ್ದಾರೆ. ಗುತ್ತಿಗೆದಾರ ಕಾರ್ಮಿಕರ ಶೆಡ್ ಬಳಿ ನೋಡಿದಾಗ ವೀರೇಂದ್ರ ಕುಮಾರ್ ಮೃತಪಟ್ಟಿರುವುದು ಗೊತ್ತಾಗಿದೆ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾಡುಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ತಾಂತ್ರಿಕ ತನಿಖೆ ನಡೆಸಿ ಆರೋಪಿ ಮನೋಹರ್ ವರ್ಮಾನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.
ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ