ಪ್ರಿಯಕರನ ಮೇಲೆ ಬಿಸಿ ನೀರು ಎರಚಿದ ನರ್ಸ್‌! 


Team Udayavani, May 31, 2023, 3:49 PM IST

ಪ್ರಿಯಕರನ ಮೇಲೆ ಬಿಸಿ ನೀರು ಎರಚಿದ ನರ್ಸ್‌! 

ಬೆಂಗಳೂರು: ಅಕ್ರಮ ಸಂಬಂಧ ಮುಂದುವರಿಸಲು ನಿರಾಕರಿಸಿದ ಪ್ರಿಯಕರನ ಮುಖದ ಮೇಲೆ ನರ್ಸ್‌ವೊಬ್ಬಳು ಬಿಸಿ ನೀರು ಎರಚಿ ಪರಾರಿಯಾಗಿದ್ದಾಳೆ. ಈ ಸಂಬಂಧ ಕಲಬುರಗಿ ಮೂಲದ ವಿಜಯ್‌ ಶಂಕರ್‌ ಎಂಬಾತ ಅಫ್ಜಲ್ ಪುರ ಮೂಲದ ಜ್ಯೋತಿ ದೊಡ್ಡಮನಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಜಯ್‌ ಶಂಕರ್‌ ಮತ್ತು ಜ್ಯೋತಿ ಅಫ್ಜಲ್ಪುರದ ಅಕ್ಕ-ಪಕ್ಕದ ಗ್ರಾಮದವರಾಗಿದ್ದು, ನಾಲ್ಕೈದು ವರ್ಷಗಳಿಂದ ಪರಸ್ಪರ ಆತ್ಮೀಯರಾಗಿದ್ದರು. ಎರಡೂವರೆ ವರ್ಷಗಳ ಹಿಂದೆ ವಿಜಯ್‌ ಕುಮಾರ್‌ ಬೆಂಗಳೂರಿಗೆ ಬಂದಿದ್ದು, ಸ್ಟುಡಿಯೋವೊಂದರಲ್ಲಿ ಫೋಟೋ ಎಡಿಟಿಂಗ್‌ ಕೆಲಸ ಮಾಡಿಕೊಂಡಿದ್ದ. ಚಾಮರಾಜಪೇಟೆಯ ಎಂಡಿ ಬ್ಲಾಕ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಬಳಿಕ ಆಕೆ ಕೂಡ ಬೆಂಗಳೂರಿಗೆ ಬಂದಿದ್ದು, ಹನುಮಂತನಗರದಲ್ಲಿರುವ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದಳು. ವಿಜಯ್‌ ಆಕೆಗೆ ತನ್ನ ಕೋಣೆಯನ್ನು ಬಿಟ್ಟುಕೊಟ್ಟು, ಈತ ಬೇರೆಡೆ ವಾಸವಾಗಿದ್ದ. ಅದರ ಬಾಡಿಗೆ ಈತನೇ ಪಾವತಿಸುತ್ತಿದ್ದ ಕಾರಣ ಆಗಾಗ ಬಂದು ಹೋಗುತ್ತಿದ್ದು, ಸಲುಗೆ ಹೊಂದಿದ್ದ ಎಂದು ಪೊಲೀಸರು ಹೇಳಿದರು.

ಮದುವೆ ವಿಚಾರ ತಿಳಿದು ದೂರ: ಈ ನಡುವೆ ಆರೇಳು ತಿಂಗಳ ಹಿಂದೆ ಜ್ಯೋತಿಗೆ ಮದುವೆಯಾಗಿದೆ ಎಂಬ ವಿಚಾರ ತಿಳಿದ ವಿಜಯ್‌ ಕುಮಾರ್‌ ಆಕೆ ಯಿಂದ ಅಂತರ ಕಾಯ್ದುಕೊಂಡಿದ್ದ. ಅಲ್ಲದೆ, ತಮ್ಮ ಅಕ್ರಮ ಸಂಬಂಧ ಇಲ್ಲಿಗೆ ನಿಲ್ಲಿಸೋಣ. ಮುಂದುವರಿಸುವುದು ಬೇಡ ಎಂದು ಹೇಳಿದ್ದ. ಆದರೆ, ಆಕೆ ನಿರಾಕರಿಸಿದ್ದಳು. ಇತ್ತ ಪೋಷಕರು ನಿಶ್ಚಿಯಿಸಿದ್ದ ರೇಖಾ ಎಂಬಾಕೆ ಜತೆ ಮೇ 11ರಂದು ಮದುವೆಯಾಗಿ ಮೇ 23ರಂದು ಬೆಂಗಳೂರಿಗೆ ಬಂದಿದ್ದ ವಿಜಯ್‌ಗೆ ಕರೆ ಮಾಡಿದ್ದ ಜ್ಯೋತಿ, ಜೂನ್‌ 5ರಂದು ತನ್ನ ಹುಟ್ಟು ಹಬ್ಬವಿದ್ದು, ಎಲ್ಲಾದರೂ ಹೊರಗಡೆ ಹೋಗಲು ಫ್ಲ್ಯಾನ್‌ ಮಾಡೋಣ ಎಂದು ಮನೆಗೆ ಬರುವಂತೆ ಹೇಳಿದ್ದಾಳೆ. ಹೀಗಾಗಿ ಮೇ 25ರಂದು ರಾತ್ರಿ ಜ್ಯೋತಿ ಮನೆಗೆ ಬಂದಿದ್ದ ವಿಜಯ್‌, ಮದುವೆ ಸಂಭ್ರಮ, ಪ್ರಯಾಣದಿಂದ ಆಯಾಸಗೊಂಡಿದ್ದೇನೆ ಎಂದು ಆಕೆಯ ಬಳಿಯೇ ಡ್ರಿಪ್ಸ್‌ ಹಾಕಿಸಿಕೊಂಡ. ಅಲ್ಲಿಂದಲೇ ತಾಯಿ ಹಾಗೂ ಪತ್ನಿಗೆ ಕರೆ ಮಾಡಿ ಮಾತಾಡಿದ್ದ. ಆಗಲೂ ಜ್ಯೋತಿ ತಮ್ಮ ಸಂಬಂಧ ಮುಂದುವರಿಸೋಣ ಎಂದು ಪೀಡಿಸಿದಳು. ಅದಕ್ಕೆ ವಿಜಯ್‌, ಇಬ್ಬರಿಗೂ ಮದುವೆಯಾಗಿದ್ದು, ಬೇಡ ಎಂದು ತಿಳಿ ಹೇಳಿದ್ದ. ಇದರಿಂದ ಕೋಪಗೊಂಡ ಆಕೆ, ಮೇ 26ರಂದು ಮುಂಜಾನೆ 5 ಗಂಟೆ ಸುಮಾರಿಗೆ ಬಿಸಿ ನೀರನ್ನು ವಿಜಯ್‌ ಮುಖಕ್ಕೆ ಎರಚಿದ್ದಾಳೆ. ಆತ ಜೋರಾಗಿ ಕೂಗಿಕೊಂಡಾಗ ಬಾಟಲಿಯಿಂದ ಮುಖಕ್ಕೆ ಹೊಡೆದು ಹೊರಭಾಗದಿಂದ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಳು. ವಿಜಯ್‌ನ ಕಿರುಚಾಟ ಕೇಳಿ ಮನೆ ಮಾಲೀಕರು ಬಂದು ಬಾಗಿಲು ತೆರೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಚಿಕಿತ್ಸೆ ಪಡೆದ ವಿಜಯ್‌, ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾನೆ. ಜ್ಯೋತಿ ಪರಾರಿಯಾಗಿದ್ದು, ಆಕೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

9-bangalore

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ

8-bangalore

Crime: ಹಣಕಾಸಿನ ವಿಚಾರಕ್ಕೆ ಸಹೋದ್ಯೋಗಿ ಕೊಲೆ ಮಾಡಿದ್ದ ಆರೋಪಿ ಬಂಧನ

7-bangalore

Bangalore: ಹೋಟೆಲ್‌ ಧ್ವಂಸ ಮಾಡಿದವರ ಸೆರೆ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.