ತಾಯಿ ಹತ್ಯೆಗೆ ಯತ್ನಿಸಿದ ನಿವೃತ್ತ ಸೇನಾಧಿಕಾರಿ

ಮೂರು ವರ್ಷದ ಹಿಂದೆಯೂ ಕೊಲೆಗೆ ಯತ್ನಿಸಿ ಜೈಲು ಸೇರಿದ್ದ ಆರೋಪಿ

Team Udayavani, Oct 6, 2022, 12:53 PM IST

14

ಬೆಂಗಳೂರು: ಕೋಟ್ಯಂತರ ರೂ. ಆಸ್ತಿಗಾಗಿ ಹೆತ್ತ ತಾಯಿಯ ʼಕೃತಕ ಉಸಿರಾಟ’ ನಿಲ್ಲಿಸಿ ಕೊಲ್ಲಲು ಯತ್ನಿಸಿದ ನಿವೃತ್ತ ಸೇನಾಧಿಕಾರಿಯೊಬ್ಬ ಜೈಲು ಸೇರಿದ್ದಾನೆ.

ಆರ್‌.ಟಿ.ನಗರ ನಿವಾಸಿ ಜಾನ್‌ ಡಿ ಕ್ರೂಸ್‌ (64) ಜೈಲು ಸೇರಿದ ಸೇನಾಧಿಕಾರಿ.

ಈತ ತನ್ನ ತಾಯಿ ಕ್ಯಾಥರಿನ್‌ ಡಿ ಕ್ರೂಸ್‌(88) ಎಂಬುವರನ್ನು ಕೊಲೆಗೈಯಲು ಯತ್ನಿಸಿದ್ದ. ಈ ಸಂಬಂಧ ವೃದ್ಧೆಯ ಕೇರ್‌ ಟೇಕರ್‌ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಕ್ಯಾಥರಿನ್‌ ಡಿ ಕ್ರೂಸ್‌ಗೆ ಮೂವರು ಪುತ್ರರು ಮತ್ತು ಓರ್ವ ಪುತ್ರಿ ಸೇರಿ ದಂತೆ ನಾಲ್ವರು ಮಕ್ಕಳಿದ್ದು, ಇಬ್ಬರು ಅಮೆರಿಕದಲ್ಲಿದ್ದಾರೆ. ತಾಯಿ ಜತೆ ಆರೋಪಿ ನಿವೃತ್ತ ಸೇನಾಧಿಕಾರಿ ಇಲ್ಲಿಯೇ ವಾಸವಾಗಿದ್ದಾನೆ. ಇನ್ನು ಪುತ್ರಿ ಅವಿವಾಹಿತೆಯಾಗಿದ್ದು, ಅನಾಥಶ್ರಮದಲ್ಲಿ ವಾಸವಾಗಿದ್ದಾರೆ. ಆರೋಪಿ ಜಾನ್‌ ಪುತ್ರ ಕೂಡ ಅಮೆರಿಕದಲ್ಲಿ ವಾಸವಾಗಿದ್ದಾನೆ. ಆದರೂ ಈತನಿಗೆ ಆಸ್ತಿ ಮಹಾದಾಸೆ. ಈತನ ವರ್ತನೆಗೆ ಪತ್ನಿ, ಪುತ್ರ ಕೂಡ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ತಾಯಿ ಮೇಲೆ ದೌರ್ಜನ್ಯ ಎಸಗದಂತೆ ಬುದ್ಧಿವಾದ ಹೇಳಿದ್ದರು. ಆದರೂ ಈತನ ತಾಯಿಯನ್ನು ಕೊಲೆಗೈಯಲು ಯತ್ನಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ನಾಲ್ಕು ವರ್ಷಗಳ ಹಿಂದೆಯೇ ಅನಾರೋಗ್ಯಕ್ಕೆ ತುತ್ತಾತ ಕ್ಯಾಥರಿನ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಮನೆಗೆ ಬಂದಾಗ ಆಕೆಯ ನೋಡಿಕೊಳ್ಳಲು ಅಮೆರಿಕದಲ್ಲಿರುವ ಪುತ್ರ ಕೇರ್‌ ಟೇಕರ್‌ವೊಬ್ಬರನ್ನು ನೇಮಿಸಿದ್ದರು. ನಿತ್ಯ ಕೇರ್‌ ಟೇಕರ್‌ ಬಂದು ನೋಡಿಕೊಳ್ಳುತ್ತಿದ್ದರು. ಆದರೆ, ಆರೋಪಿ ತಾಯಿಗೆ ಅಳವಡಿಸಿದ್ದ ಕೃತಕ ಉಸಿರಾಟ ಆಕ್ಸಿಜನ್‌ ಮಾಸ್ಕ್ ತೆಗೆದು ಹತ್ಯೆಗೆ ಯತ್ನಿಸಿದ್ದಾನೆ. ಅದನ್ನು ಗಮನಿಸಿದ ಕೇರ್‌ ಟೇಕರ್‌, ಪ್ರಶ್ನಿಸಿದ್ದಾರೆ. ಆಗ ಆರೋಪಿ ಆಕೆ ಸಾಯಲಿ ಎಂದು ಆಕ್ಸಿಜನ್‌ ಮಾಸ್ಕ್ ತೆಗೆದರೆ, ನೀವು ಹಾಕುತ್ತಿದ್ದಿರಾ ಎಂದೆಲ್ಲ ಪ್ರಶ್ನಿಸಿದ್ದಾನೆ.

ಹೀಗಾಗಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆದರಿಂದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ 2019 ಡಿಸೆಂಬರ್‌ನಲ್ಲಿಯೂ ಇದೇ ರೀತಿ ತಾಯಿಯ ಕೊಲೆಗೆ ಯತ್ನಿಸಿದ್ದ. ಆಗ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ. ಇದೀಗ ಜಾಮೀನು ಪಡೆದು ಬಿಡುಗಡೆಯಾಗಿದ್ದು, ಮತ್ತೆ ಅದೇ ಕೃತ್ಯದಲ್ಲಿ ತೊಡಗಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.