ಬೆಂಗಳೂರಿನ ನೆರೆಗೆ ಬಿಡಿಎ ಕಾರಣ; ಕುಮಾರಸ್ವಾಮಿ ವಾಗ್ಧಾಳಿ

ಒಂದು ಕಾಲದಲ್ಲಿ ಬೆಂಗಳೂರನ್ನು ಸಿಂಗಾಪುರ ಮಾಡಲು ಹೊರಟಿದ್ದರು

Team Udayavani, Sep 15, 2022, 12:27 PM IST

ಬೆಂಗಳೂರಿನ ನೆರೆಗೆ ಬಿಡಿಎ ಕಾರಣ; ಕುಮಾರಸ್ವಾಮಿ ವಾಗ್ಧಾಳಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ಇಂದಿನ ಎಲ್ಲ ಕರ್ಮಕಾಂಡಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ನಿಯಮ 69ರ ಅಡಿ ಅತಿವೃಷ್ಟಿ ಬಗ್ಗೆ ವಿಧಾನಸಭೆಯಲ್ಲಿ ಸುದೀರ್ಘ‌ವಾಗಿ ಮಾತನಾಡಿದ ಅವರು, ಇದ್ದ ಎಲ್ಲಾ ಕೆರೆಗಳನ್ನು ಮುಚ್ಚಿ ಬಡಾವಣೆಗಳನ್ನು ಮಾಡಿ, ಕಾಲುವೆಗಳನ್ನು ಮುಚ್ಚಿ ಬೆಂಗಳೂರು ಸೌಂದರ್ಯವನ್ನು ನಾಶ ಮಾಡಿತು. ನಾನಂತೂ ಅಧಿಕಾರದಲ್ಲಿ ಇದ್ದಾಗ ನಗರಕ್ಕೆ ಮಾರಕವಾಗುವ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

ಮಳೆ ಅನಾಹುತ ಈಗಿನಿಂದ ಆಗಿದ್ದಲ್ಲ. 1999 ಈಚೆಗೆ ಐಟಿ ಕ್ಷೇತ್ರ ವೇಗವಾಗಿ ಬೆಳೆಯಲು ತೊಡಗಿತು. ಆಗ ಬೆಂಗಳೂರಿನ ಅಭಿವೃದ್ಧಿ ಬೇಕಾಬಿಟ್ಟಿ ದೊಡ್ಡ ಮಟ್ಟಿಗೆ ಆಯಿತು. ಮುಂದಾಗಬಹುದಾದ ಅನಾಹುತದ ಬಗ್ಗೆ ಯಾರೂ ಗಮನ ಕೊಟ್ಟಿಲ್ಲ ಎಂದು ಅವರು ಹೇಳಿದರು. ಯಾವತ್ತು ಬಿಡಿಎ ಹುಟ್ಟಿಕೊಂಡಿತೋ ಆಗಲೇ ಬೆಂಗಳೂರಿಗೆ ಗಂಡಾಂತರ ಪ್ರಾರಂಭವಾಯಿತು. ಕೆರೆಗಳಿದ್ದಿದ್ದರೆ ಈ ರೀತಿ ನೆರೆ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಕೆರೆ ಅಭಿವೃದ್ಧಿಪಡಿಸಿದ್ದರೇ ನೀರಿನ ಸಮಸ್ಯೆನೇ ಆಗುತ್ತಿರಲಿಲ್ಲ. ಮೇಕೆದಾಟುಗೆ ಪಾದಯಾತ್ರೆ ಬೇಕಾಗಿತ್ತಾ? ಮೇಕೆದಾಟಿಗಾಗಿ ಪಾದಯಾತ್ರೆ ಮಾಡುವ ಅವಶ್ಯಕತೆನೇ ಇರಲಿಲ್ಲ ಎಂದು ವಿವರಿಸಿದರು.

ಕೆರೆ ಮುಚ್ಚಿ ನಿರ್ಮಿಸಲಾದ ಜೆಪಿ ನಗರ, ಡಾಲರ್ಸ್‌ ಕಾಲೋನಿಯಲ್ಲಿ ಬಡವರಿಗೆ ನಿವೇಶನ ಕೊಟ್ಟಿದ್ದೀರಾ? ಅಲ್ಲಿ ಎಲ್ಲ ಐಎಎಸ್‌ ಅಧಿಕಾರಿಗಳು, ಶ್ರೀಮಂತರಿಗೆ ನಿವೇಶನ ಕೊಟ್ಟಿದ್ದೀರಿ. ಹಲವು ಕೆರೆಯನ್ನು ಮುಚ್ಚಿ ಹಾಕಿದ್ದಾರೆ. ಇದಕ್ಕೆಲ್ಲ ಕಾರಣ ಬಿಡಿಎ. ಬಿಡಿಎ 4 ಸಾವಿರ ಎಕರೆ ಬಡಾವಣೆಗಾಗಿ ಭೂಮಿ ನೋಟಿಫೈ ಮಾಡುತ್ತದೆ. ಮತ್ತೆ ಯಾರಾದರೂ ಪ್ರಭಾವ ಬೀರಿದರೆ ಡಿನೋಟಿಫೈ ಮಾಡುತ್ತದೆ. ಆ ಪ್ರಾಧಿಕಾರಕ್ಕೆ ಒಂದು ಸ್ಪಷ್ಟತೆ ಇಲ್ಲ. ಒಂದು ನಿರ್ದಿಷ್ಟ ನೀಲನಕ್ಷೆ ಇಲ್ಲ ಎಂದು ವಾಗ್ಧಾಳಿ ನಡೆಸಿದರು. ಒಂದು ಕಾಲದಲ್ಲಿ ಬೆಂಗಳೂರನ್ನು ಸಿಂಗಾಪುರ ಮಾಡಲು ಹೊರಟಿದ್ದರು. ಸಿಂಗಾಪುರ ಮಾಡಲು ಹೋಗಿಯೇ ಈ ತರ ಆಗಿದೆ ಎಂದು ಹಿಂದಿನ ಸರ್ಕಾರಗಳಿಗೆ ಪರೋಕ್ಷವಾಗಿ ಕುಮಾರಸ್ವಾಮಿ ಟಾಂಗ್‌ ನೀಡಿದರು.

ಅಶ್ವತ್ಥನಾರಾಯಣ ವಿರುದ್ಧ ಟೀಕಾ ಪ್ರಹಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಯೋಜನೆಯಿಂದ ಕೆಲ ಸಮಸ್ಯೆ ಎದುರಾಗಿದೆ. ಅವೈಜ್ಞಾನಿಕ ಕಾಮಗಾರಿ ರಸ್ತೆಯಲ್ಲಿ ಪ್ರವಾಹಕ್ಕೆ ಕಾರಣ. ಅಲ್ಲದೆ ರಾಮನಗರ ನಗರ ಪ್ರದೇಶದಲ್ಲಿ ನೆರೆ ಉಂಟಾಗಲು ರಾಮನಗರ ಪಕ್ಕದ ಕೆರೆ ಕೋಡಿ ಒಡೆದಿರುವುದೇ ಕಾರಣ. ಘಟಾನುಘಟಿ ನಾಯಕರು ಇರುವ ಜಿಲ್ಲೆಯಲ್ಲಿ ಯಾರೂ ಏನೂ ಮಾಡಲು ಆಗಿಲ್ಲ. ಮೂರು ವರ್ಷದಲ್ಲಿ ನಾವು ಬಂದು ಎಲ್ಲವನ್ನೂ ಮಾಡಿದ್ದೇವು ಎಂದು ಉಸ್ತುವಾರಿ ಸಚಿವರು ವೀರಾವೇಶದಿಂದ ಮಾತನಾಡಿದ್ದರು. ಅವರು ಏನು ಮಾಡಿದ್ದಾರೆ ಎಂಬುದು ಸದನದ ಮುಂದೆ ಇಡುವುದು ಸೂಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿಎನ್‌ ಅಶ್ವತ್ಥನಾರಾಯಣ ವಿರುದ್ಧ ಟೀಕಾ ಪ್ರಹಾರ ನಡೆಸಿದರು. 10 ವರ್ಷದಿಂದ ರಾಮನಗರದ ಅಭಿವೃದ್ಧಿ ಏನಾಗಿದೆ? ಕಳೆದ 3 ವರ್ಷದಿಂದ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬ ಬಗ್ಗೆ ಸದನದ ಮುಂದೆ ಇಡಲಿ. ನನ್ನಿಂದ ಏನಾದರು ಲೋಪ ಆಗಿದೆಯಾ ಎಂಬ ಬಗ್ಗೆಯೂ ನನಗೂ ತಿಳಿಯುತ್ತದೆ ಎಂದು ಸಚಿವ ಅಶ್ವತ್ಥನಾರಾಯಣಗೆ ತಿರುಗೇಟು ನೀಡಿದರು ಅವರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.