ಅಪಾಯದ ಸ್ಥಿತಿಯಲ್ಲಿ ಬೆಂಗಳೂರು: ಯೋಗೇಶ್ ರಂಗನಾಥ್
Team Udayavani, May 19, 2019, 3:08 AM IST
ಬೆಂಗಳೂರು: “ರಾಜ್ಯ ರಾಜಧಾನಿಯ ಕೆಲವು ಪ್ರದೇಶಗಳು ಈಗಾಗಲೇ ದೆಹಲಿಯ ಸ್ಥಿತಿಯನ್ನು ಎದುರಿಸುತ್ತಿವೆ’ ಎಂದು ಕ್ಲೀನ್ಏರ್ ಪ್ಲಾಟ್ಫಾರಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಶ್ ರಂಗನಾಥ್ ಆತಂಕ ವ್ಯಕ್ತಪಡಿಸಿದರು.
ಉಸಿರಾಡಲ್ಪಡುವಾಗ ದೇಹವನ್ನು ಸೇರುವ ಧೂಳಿನ ಕಣ “ಪಿಎಂ-2.5′ ಪ್ರಮಾಣ ನಗರದ ಸರ್ಜಾಪುರ, ಮಾನ್ಯತಾ ಟೆಕ್ಪಾರ್ಕ್, ಟಿನ್ಫ್ಯಾಕ್ಟರಿ ಸೇರಿದಂತೆ ಹಲವು ಕಡೆಗಳಲ್ಲಿ ಪೀಕ್ ಅವರ್ನಲ್ಲಿ 500ರಿಂದ 600ಕ್ಕೆ ಏರಿಕೆ ಆಗಿದ್ದು ಕಂಡುಬಂದಿದೆ. ಇದು ರಾಷ್ಟ್ರೀಯ ಮಟ್ಟಕ್ಕಿಂತ ಸುಮಾರು ಪಟ್ಟು ಅಧಿಕವಾಗಿದೆ. ಇದರಲ್ಲಿ ವಾಹನಗಳ ಕೊಡುಗೆ ಅತಿ ಹೆಚ್ಚು ಇದೆ ಎಂದು ಕಳವಳ ವ್ಯಕ್ತಪಡಿಸಿದರು.
ನಗರದಲ್ಲಿ ವಿವಿಧ ಮಾದರಿಯ ಸಾರಿಗೆ ವಾಹನಗಳಿಂದ ಶೇ. 40ರಿಂದ 50ರಷ್ಟು ಹಾಗೂ ರಸ್ತೆ ಧೂಳಿನಿಂದ ಶೇ. 15ರಿಂದ 20ರಷ್ಟು ವಾಯುಮಾಲಿನ್ಯ ಉಂಟಾಗುತ್ತಿದೆ. ಒಟ್ಟಾರೆಯಾಗಿ ಶೇ.50ರಿಂದ 70ರಷ್ಟು ವಾಯುಮಾಲಿನ್ಯ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದ ವಿವಿಧ ವಲಯದಿಂದ ಆಗುತ್ತಿದೆ. ಈ ಪಿಎಂ-2.5 ಧೂಳಿನ ಕಣಗಳು ನೇರವಾಗಿ ಶ್ವಾಸಕೋಶವನ್ನು ಪ್ರವೇಶಿಸಿ, ಆ ಮೂಲಕ ರಕ್ತದಲ್ಲಿ ಸೇರಲ್ಪಡುತ್ತವೆ. ಇದರಿಂದ ಹಲವು ರೀತಿಯ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದರು.
ಟ್ರಾಫಿಕ್ ಪೊಲೀಸರಿಂದಲೇ ಎಲ್ಲವೂ ಸಾಧ್ಯವಿಲ್ಲ. ನಾಲ್ಕೈದು ಇಲಾಖೆಗಳು, ಸಾರ್ವಜನಿಕರು ವಾಯುಮಾಲಿನ್ಯ ನಿಯಂತ್ರಣಕ್ಕೆ ಕೈಜೋಡಿಸಬೇಕು. ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಿದರೆ, ವಾಯುಮಾಲಿನ್ಯದ ಸಮಸ್ಯೆಯೂ ತಗ್ಗಲಿದೆ. ನಗರದಲ್ಲಿ ರಸ್ತೆ ಸುರಕ್ಷತಾ ವ್ಯವಸ್ಥೆ ಹೇಗಿದೆ ಎಂಬುದನ್ನು ಅರಿತು, ಅದಕ್ಕೆ ಸರಿಯಾದ ಕಾರ್ಯಯೋಜನೆ ರೂಪಿಸಬೇಕು. ಇದಕ್ಕೆ ಬಿಬಿಎಂಪಿಯಿಂದ ಯಾವ ರೀತಿಯ ನೀತಿ ಸಿದ್ಧಪಡಿಸಿದ್ದಾರೆ ಎನ್ನುವುದು ಇಲ್ಲಿ ಮುಖ್ಯವಾಗುತ್ತದೆ ಎಂದು ಹೇಳಿದರು.
“ಎಲ್ಲ ಇಲಾಖೆಗಳ ಸಮನ್ವಯ ಮತ್ತು ಸಾರ್ವಜನಿಕರ ಒಳಗೊಳ್ಳುವಿಕೆಯಿಂದ ಇದು ಸಾಕಾರವಾಗಬೇಕು. ಕ್ಲೀನ್ಏರ್ ಫ್ಲಾಟ್ಫಾರ್ಮ್ ವತಿಯಿಂದಲೂ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಕೆಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದಲ್ಲದೆ, ಇನ್ನೂ ಹಲವು ಕಾರ್ಪೋರೆಟ್ ಕಂಪನಿಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಉತ್ಸುಕವಾಗಿವೆ. ಸರ್ಕಾರ ಅವುಗಳ ನೆರವು ಪಡೆಯಬೇಕು’ ಎಂದು ಸಲಹೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ