ತ್ಯಾಜ್ಯ ವಿಂಗಡಣೆಗೆ ದೇಶಕ್ಕೆ ಬೆಂಗಳೂರೇ ಮಾದರಿ!


Team Udayavani, Apr 21, 2017, 12:06 PM IST

bbmp.jpg

ಬೆಂಗಳೂರು: ಮೂಲದಲ್ಲೇ ತ್ಯಾಜ್ಯ ವಿಂಗಡಣೆಯಲ್ಲಿ ಶೇ.50ರಷ್ಟು ಸಾಧಿಸಿದ ದೇಶದ ಮೊದಲ ನಗರ ಎಂಬ ಖ್ಯಾತಿಗೆ ಬೆಂಗಳೂರು ಪಾತ್ರವಾಗಿದ್ದು, ತ್ಯಾಜ್ಯ ವಿಂಗಡಣೆಯಲ್ಲಿ ಬಿಬಿಎಂಪಿ ಕ್ರಮಗಳನ್ನು ದೇಶಾದ್ಯಂತ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಅವರು ಏ.5ರಂದು ದೇಶದ ಸ್ಥಳೀಯ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ದೇಶಾದ್ಯಂತ ಎಲ್ಲ ನಗರಗಳಲ್ಲೂ ಘನ ತ್ಯಾಜ್ಯ ವಿಲೇವಾರಿ ದೊಡ್ಡ ಸವಾಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವೈಜ್ಞಾನಿಕ ವಿಲೇವಾರಿಯಿಂದ ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ದೇಶದಲ್ಲಿನ 4,041 ನಗರಗಳಲ್ಲಿ ಮೂಲದಲ್ಲಿಯೇ ತ್ಯಾಜ್ಯ ವಿಂಗಡಿಸಿ ಪ್ರತ್ಯೇಕವಾಗಿ ಸಂಗ್ರಹಿಸಬೇಕು ಮತ್ತು ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಆದೇಶ ನೀಡಿದ್ದಾರೆ. 

ಕೇಂದ್ರ ಸರ್ಕಾರ 2014ರ ಅಕ್ಟೋಬರ್‌ನಲ್ಲಿ  ಸ್ವತ್ಛ ಭಾರತ್‌ ಅಭಿಯಾನ ಆರಂಭಿ ಸಿದ್ದು, ದೇಶದ 4,041 ನಗರಗಳಲ್ಲಿ 2019ರ ಅ.2ರ ವೇಳೆಗೆ ಶೇ.100ರಷ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ನಿಯಮಗಳನ್ನು ಅನುಷ್ಠಾ ನಗೊಳಿಸುವ ಗುರಿ ಹೊಂದಲಾಗಿದೆ. ಮೂಲ ದಲ್ಲೇ ಹಸಿ, ಒಣ ಹಾಗೂ ಅಪಾಯಕಾರಿ ತ್ಯಾಜ್ಯ ಪ್ರತ್ಯೇಕಿಸಿ ಸಂಗ್ರಹಿಸಬೇಕು. ಇದರಿಂದ ತ್ಯಾಜ್ಯ ಮರು ಬಳಕೆ, ವೈಜ್ಞಾನಿಕ ವಿಲೇವಾರಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆಯಿಂದ ಜೂ.5ರಂದು ದೇಶದ ಎಲ್ಲ ಸ್ಥಳೀಯ ಸಂಸ್ಥೆಗಳನ್ನು ಸೇರಿಸಿಕೊಂಡು ವಿಶ್ವ ಪರಿಸರ ದಿನಾಚರಣೆ ಆಚರಿಸಲಿದೆ. ಈ ವೇಳೆಗೆ 4,041 ನಗರಗಳು ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ ಆರಂಭಿಸಬೇಕಿದೆ. 2017ರ ಅ.2ರ ವೇಳೆಗೆ ಎಲ್ಲ ಸ್ಥಳೀಯ ಸಂಸ್ಥೆಗಳು ಶೇ.100ರಷ್ಟು ಮೂಲದಲ್ಲಿಯೇ ಕಸ ವಿಂಗಡಣೆ ಗುರಿ ಸಾಧಿಸಬೇಕು ಎಂದಿರುವ ಅವರು, ತ್ಯಾಜ್ಯ ವಿಲೇವಾರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಶೇ.35ರಷ್ಟು ಅನುದಾನ ನೀಡಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತಿ ಮನೆಯಲ್ಲೂ ಮೂಲದಲ್ಲಿಯೇ ಕಸ ವಿಂಗಡಿಸಬೇಕು. ಅಕ್ಟೋಬರ್‌ 2ರ ವೇಳೆಗೆ ಶೇ.100 ರಷ್ಟು ಕಸ ವಿಂಗಡಣೆ ಸಾಧಿಸಬೇಕು ಎಂದಿದ್ದಾರೆ. ಕೇಂದ್ರ ಸೂಚಿಸಿರುವ ದಿನಾಂಕಕ್ಕೂ ಮೊದಲೇ ಆ ಸಾಧನೆ ಮಾಡಲಿದ್ದು, ತ್ಯಾಜ್ಯ ವಿಂಗಡಣೆಯಲ್ಲಿ ಬಿಬಿಎಂಪಿ ದೇಶಕ್ಕೆ ಮಾದರಿಯಾಗಲಿದೆ. 
-ಎನ್‌. ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.