ಬೆಂಗಳೂರು ಈಗ ಸ್ಲಮ್‌ ಸಿಟಿ


Team Udayavani, Aug 27, 2018, 12:38 PM IST

bng-slum.jpg

ಬೆಂಗಳೂರು: ರಾಜ್ಯದಲ್ಲಿ ಸ್ಲಂ ನಿವಾಸಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಲೇ ಇದೆ. ಸದ್ಯ ಕರ್ನಾಟಕದಲ್ಲಿ ಸ್ಲಂ ಜನಸಂಖ್ಯೆ 40.50 ಲಕ್ಷ ಇದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ವಾಸ್ತವದಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಿದೆ. ಹೀಗಂತ ಸ್ವತಃ ಅಧಿಕಾರಿಗಳೇ ಹೇಳುತ್ತಾರೆ.

2011ರ ಸಮೀಕ್ಷೆ ಪ್ರಕಾರ ಸ್ಲಂ ನಿವಾಸಿಗಳ ಸಂಖ್ಯೆ 33 ಲಕ್ಷ ಇತ್ತು. ಕಳೆದ 6 ವರ್ಷಗಳಲ್ಲಿ 8 ಲಕ್ಷ ಹೆಚ್ಚಾಗಿದ್ದು, ಸದ್ಯ 40.50 ಲಕ್ಷ ಸ್ಲಂ ನಿವಾಸಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ನಿಖರ ಸಮೀಕ್ಷೆ ನಡೆದರೆ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಸ್ಲಂ ಜನಸಂಖ್ಯೆ ಬೆಳೆಯುತ್ತಿರುವ ಈಗಿನ ಗತಿ ಗಮನಿಸಿದರೆ ಒಂದೆರಡು ವರ್ಷಗಳಲ್ಲಿ ಸ್ಲಂ ನಿವಾಸಿಗಳ ಸಂಖ್ಯೆ ಅರ್ಧ ಕೋಟಿ ದಾಟಲಿದೆ.

2001ರಲ್ಲಿ 14.02 ಲಕ್ಷ ಇದ್ದ ಕೊಳೆಗೇರಿ ನಿವಾಸಿಗಳ ಸಂಖ್ಯೆ 2011ಕ್ಕೆ 32.92 ಲಕ್ಷ ಆಗಿತ್ತು. ಈಗ ಅದು 40.50 ಲಕ್ಷಕ್ಕೆ ಏರಿದೆ. ಈ ರೀತಿ ಕಳೆದ 15 ವರ್ಷಗಳಲ್ಲಿ ರಾಜ್ಯದ ಕೊಳೆಗೇರಿ ನಿವಾಸಿಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ರಾಜ್ಯದ ಒಟ್ಟು ನಗರ ಜನಸಂಖ್ಯೆ 1.79 ಕೋಟಿ ಇದ್ದು, ಇದರಲ್ಲಿ ಶೇ.22.56 ರಷ್ಟು ಕೊಳೆಗೇರಿ ನಿವಾಸಿಗಳಿದ್ದಾರೆ. 

ಬೆಂಗಳೂರಲ್ಲೇ ಹೆಚ್ಚು: ಬೆಂಗಳೂರು ಜಿಲ್ಲೆಯ ಒಟ್ಟು ಜನಸಂಖ್ಯೆಯಲ್ಲಿ ಶೇ.21.5ರಷ್ಟು ಕೊಳೆಗೇರಿ ನಿವಾಸಿಗಳಿದ್ದು, ಇದರಲ್ಲಿ ಪ್ರತಿ 5 ಜನರಲ್ಲಿ ಒಬ್ಬರು ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾರೆ. ಉಳಿದಂತೆ ಧಾರವಾಡದಲ್ಲಿ ಶೇ.6.21,  ಬಳ್ಳಾರಿಯಲ್ಲಿ ಶೇ.6.09, ಶಿವಮೊಗ್ಗದಲ್ಲಿ ಶೇ.5.19, ತುಮಕೂರು ಶೇ.4.99ರಂತೆ ಆಯಾ ಜಿಲ್ಲೆಗಳ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಅತಿ ಹೆಚ್ಚು ಕೊಳಚೆ ನಿವಾಸಿಗಳು ವಾಸ ಮಾಡುತ್ತಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಅಲ್ಲಿನ ಜನಸಂಖ್ಯೆ ಪೈಕಿ ಶೇ.1ರಷ್ಟು ಕೊಳಚೆ ನಿವಾಸಿಗಳಿದ್ದಾರೆ. ನಗರೀಕರಣಕ್ಕೆ ಆಕರ್ಷಿತರಾಗಿ ಗ್ರಾಮೀಣ ಜನರು ನಗರಗಳಿಗೆ ವಲಸೆ ಬರುತ್ತಾರೆ. ಈ ವಲಸೆ ಬೆಂಗಳೂರಿಗೆ ಮಾತ್ರ ಸಿಮೀತಗೊಂಡಿಲ್ಲ. ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿ ಇನ್ನಿತರ ದೊಡ್ಡ ನಗರಗಳಿಗೂ ವ್ಯಾಪಿಸಿದೆ. ವಲಸೆ ಬರುವ ಜನ ಒಂದೆಡೆ ನೆಲೆಸಿದರೆ ಅಲ್ಲಿ ಒಂದು ಸ್ಲಂ ತಲೆ ಎತ್ತುತ್ತದೆ.

ಅದೇ ರೀತಿ ಗುತ್ತಿಗೆದಾರರು ನಿರ್ಮಾಣ ಕಾಮಗಾರಿಗಳಿಗೆಂದು ಜನರನ್ನು ಕರೆತಂದು ತಾತ್ಕಾಲಿಕವಾಗಿ ಶೆಡ್‌ಗಳನ್ನು ನಿರ್ಮಿಸಿಕೊಡುತ್ತಾರೆ. ಅದೂ ಸಹ ಒಂದು ರೀತಿಯ ಅಘೋಷಿತ ಸ್ಲಂ ಆಗಿ ಬಿಡುತ್ತದೆ. ಹೀಗೆ ಸರ್ಕಾರ ಒಂದು ಕಡೆ ಸ್ಲಂಗಳ ತೆರವು, ಅಭಿವೃದ್ಧಿ ಮಾಡುತ್ತಿದ್ದರೆ, ಇನ್ನೊಂದು ಕಡೆ ಸ್ಲಂಗಳು ಹುಟ್ಟಿಕೊಳ್ಳುತ್ತಲ್ಲೇ ಇರುತ್ತವೆ ಎಂದು ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಹೇಳುತ್ತಾರೆ.

ಯೋಜನೆಗಳು ಆಮೆಗತಿ: 2022ಕ್ಕೆ ಕರ್ನಾಟಕವನ್ನು ಸ್ಲಂ ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಅದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿವೆ. ಆದರೆ, ಅವುಗಳ ಅನುಷ್ಠಾನ ಆಮೆಗತಿಯಲ್ಲಿ ಸಾಗಿದೆ. ರಾಜೀವ್‌ ಆವಾಸ್‌ ಯೋಜನೆಯಡಿ 36 ಸಾವಿರ ಮನೆಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ಆದರೆ, ಇಲ್ಲಿವರೆಗೆ 15 ಸಾವಿರ ಮನೆಗಳಷ್ಟೇ ನಿರ್ಮಾಣಗೊಂಡಿವೆ.

“ತಲೆಗೊಂದು ಸೂರು’ ಪರಿಕಲ್ಪನೆಯ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 85 ಸಾವಿರ ಮನೆಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದ್ದು, ಇನ್ನೂ ಕಾಮಗಾರಿ ಆರಂಭಗೊಂಡಿಲ್ಲ. ಈ ಯೋಜನೆಯಡಿ ವರ್ಷಕ್ಕೆ ಒಂದು ಲಕ್ಷ ಮನೆ ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. 

ನಗರದಲ್ಲೇ ಹೆಚ್ಚು ಕೊಳೆಗೇರಿ: ರಾಜ್ಯದಲ್ಲಿ 2,397 ಘೋಷಿತ ಹಾಗೂ  407 ಅನಧೀಕೃತ ಸೇರಿ ಒಟ್ಟು 2,804 ಕೊಳೆಗೇರಿಗಳಿವೆ. ಘೋಷಿತ ಸ್ಲಂಗಳ ಈ ಪೈಕಿ ಅತಿಹೆಚ್ಚು 597 ಕೊಳೆಗೇರಿಗಳು ಬೆಂಗಳೂರಿನಲ್ಲಿವೆ. ಉಳಿದಂತೆ ಬಳ್ಳಾರಿ 202, ಶಿವಮೊಗ್ಗ 181, ಮೈಸೂರು 134, ಬೆಳಗಾವಿ 127 ಅತಿಹೆಚ್ಚು ಕೊಳೆಗೇರಿಗಳು ಹೊಂದಿದ ಜಿಲ್ಲೆಗಳು.

ಅದೇ ರೀತಿ ಕೊಡಗು 11, ದಕ್ಷಿಣ ಕನ್ನಡ 18, ಉಡುಪಿ 26, ಉತ್ತರ ಕನ್ನಡ 33, ಯಾದಗಿರಿ-ರಾಮನಗರ ತಲಾ 39 ಅತಿಕಡಿಮೆ ಕೊಳೆಗೇರಿಗಳು ಹೊಂದಿದ ಜಿಲ್ಲೆಗಳು. ಜತೆಗೆ ಬೆಂಗಳೂರು ನಗರ ಜಿಲ್ಲೆ 210, ಬಳ್ಳಾರಿ 50, ಮೈಸೂರು 30, ಧಾರವಾಡ-ಬೆಳಗಾವಿ ಜಿಲ್ಲೆಯಲ್ಲಿ ತಲಾ 28 ಅತಿ ಹೆಚ್ಚು ಅನಧಿಕೃತ ಕೊಳೆಗೇರಿಗಳಿವೆ.

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.