ಬೆಂಗಳೂರು: “ಮಹಿಳಾ ಯಕ್ಷೋತ್ಸವ 2022”, ಭರತನಾಟ್ಯ ಪ್ರದರ್ಶನ
Team Udayavani, Dec 21, 2022, 10:40 AM IST
ಬೆಂಗಳೂರು: ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು ಇವರಿಂದ “ಮಹಿಳಾ ಯಕ್ಷೋತ್ಸವ 2022” ಎನ್ನುವ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಕೆಂಪೆಗೌಡ ನಗರದ ಉದಯಬಾನು ಕಲಾ ಸಂಘದಲ್ಲಿ ನಡೆಯಿತು.
ಯಕ್ಷಗಾನದ ಕುರಿತು ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ‘ಯಕ್ಷಗಾನ ರಸಪ್ರಶ್ನೆ’ ಕಾರ್ಯಕ್ರಮವನ್ನು ಪ್ರೇಕ್ಷಕರಿಗಾಗಿ ನಡೆಸಲಾಯಿತು. ಯಕ್ಷಗಾನದ ಪೂರ್ವ ರಂಗ ಬಾಲಗೋಪಾಲ – ಪೀಠಿಕೆ ಸ್ತ್ರೀ ವೇಷದ ಜೊತೆಗೆ ಡಾ. ಸುಪ್ರೀತ ಗೌತಮ್ ಇವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು.
“ಶಿವ ಪಂಚಾಕ್ಷರಿ ಮಹಿಮೆ” ಎನ್ನುವ ಪ್ರಸಂಗ ಯಕ್ಷಗಾನ ಗುರು – ಕಲಾವಿದರಾದ ಕೆ ಗೌರಿ ಇವರ ನಿರ್ದೇಶನದಲ್ಲಿ ಸೊಗಸಾಗಿ ಮೂಡಿಬಂತು. ಭಾಗವತರಾಗಿ ಸುಬ್ರಹ್ಮಣ್ಯ ನಾವಡ, ಮೃದಂಗದಲ್ಲಿ ಅಜಿತ್ ಕುಮಾರ್, ಚಂಡೆಯಲ್ಲಿ ಸುಬ್ರಹ್ಮಣ್ಯ ಹಿಮ್ಮೇಳದಲ್ಲಿ ಸಹಕರಿಸಿದರು.
ಮುಮ್ಮೇಳದಲ್ಲಿ ಕಲಾವಿದರಾಗಿ ಕೆ. ಗೌರಿ, ಆಶಾ ರಾಘವೇಂದ್ರ, ಲತಾ ಕೃಷ್ಣಮೂರ್ತಿ, ಅಂಬಿಕ, ಶಶಿಕಲಾ, ಅನ್ನಪೂರ್ಣೇಶ್ವರಿ, ಸುಮಾ ಅನಿಲ್ ಕುಮಾರ್, ಚೈತ್ರ ರಾಜೇಶ್, ಚೈತ್ರ ಭಟ್, ಶರ್ವಾಣಿ ಹೆಗಡೆ, ಸೌಜನ್ಯ ನಾವಡ, ಸರಯು, ಧೃತಿ ಅಮ್ಮೆಂಬಳ, ಚಿನ್ಮಯ್ ನಾವಡ ತಮ್ಮ ಪಾತ್ರವನ್ನು ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ