ಚಾಲಕರಿಗೆ ಪರಿಹಾರ: ಷರತ್ತು ಸಡಿಲಿಕೆ
Team Udayavani, Jul 10, 2021, 5:13 PM IST
ಬೆಂಗಳೂರು: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯ ಷರತ್ತುಗಳನ್ನುಸಡಿಲಗೊಳಿಸುವಂತೆಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ್ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಕರ್ನಾಟಕ ರಾಜ್ಯಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ ಸಭೆಯಲ್ಲಿ, ಕರ್ನಾಟಕರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತಪರಿಹಾರ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದಸಚಿವರು, ಚಾಲಕರು ಪರಿಹಾರ ಪಡೆಯುವುದಕ್ಕೆ ಈಗಿರುವ ಷರತ್ತುಗಳನ್ನು ಸಡಿಲಿಸುವಂತೆ ಮತ್ತು ಅದರಮಾಹಿತಿ ನೀಡಲು ವಿಶೇಷ ಪ್ರಚಾರ ಕಾರ್ಯಕ್ರಮಗಳನ್ನುಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದಲ್ಲದೆ ಸಭೆಯಲ್ಲಿ ರಾಜ್ಯದ ಅಸಂಘಟಿತಕಾರ್ಮಿಕರಆರ್ಥಿಕ ಭದ್ರತೆಗಾಗಿ ನೀಡಬಹುದಾದಂತ ಕಾರ್ಯಕ್ರಮಗಳ ಬಗ್ಗೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳುಹಾಗೂ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನವಾಗಿ ಪ್ರಾರಂಭಿಸಬಹುದಾದ ಮಂಡಳಿ ಮತ್ತು ಅವುಗಳ ನಿರ್ವಹಣೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಪ್ರಶಸ್ತಿ ಮೊತ್ತ ಹೆಚ್ಚಳ: ಅಸಂಘಟಿತ ಕಾರ್ಮಿಕರಿಗೆನೀಡುತ್ತಿರುವ ಪ್ರಶಸ್ತಿ ಮೊತ್ತವನ್ನು 15,000 ರಿಂದ20,000 ರೂ.ಗೆ ಹೆಚ್ಚಿಸಲಾಯಿತು. ದ್ವಿತೀಯಬಹುಮಾನ15,000, ಮೂರನೇ ಪ್ರಶಸ್ತಿ ಮೊತ್ತವನ್ನು10,000 ರೂ.ಗೆಹೆಚ್ಚಿಸಲಾಗಿದೆ. ಸಮಾಧಾನಕರ ಮೊತ್ತವನ್ನು 1 ಸಾವಿರದಿಂದ 5 ಸಾವಿರಗಳಿಗೆ ಹೆಚ್ಚಿಸಲಾಯಿತು.
ಈ ಸಂದರ್ಭದಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಡಾ.ಜಿ.ಕಲ್ಪನಾ, ಕಾರ್ಮಿಕ ಆಯುಕ್ತ ಅಕ್ರಂ ಪಾಷಾಹಾಗೂ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿಯನಿರ್ದೇಶಕರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ