ಕ್ಷೇತ್ರದ ಅಭಿವೃದ್ಧಿಗೆ ಅವಿರತ ಶ್ರಮ


Team Udayavani, Jul 24, 2021, 4:54 PM IST

bangalore news

ಒಂದು ಕಡೆ ಶಾಸಕರಾಗಿ ಕ್ಷೇತ್ರದಸರ್ವತೋಮುಖ ಅಭಿವೃದ್ಧಿಯ ಕಾಳಜಿ ಜತೆಗೆಸಚಿವರಾಗಿ ರಾಜ್ಯದ ಹಿತ ಚಿಂತನೆ, ಇಲಾಖೆಯಯೋಜನೆಗಳ ಪರಿಣಾಮಕಾರಿ ಅನುಷ್ಠಾನಬದ್ಧತೆಯೊಂದಿಗೆ ಸಾಗಿ ಬಂದವರು ಬೃಹತ್‌ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶಶೆಟ್ಟರ.

ಹುಬ್ಬಳ್ಳಿ-ಧಾರವಾಡ ಮಹಾನಗರ ಅಭಿವೃದ್ಧಿನಿಟ್ಟಿನಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ರಾಜ್ಯಸರಕಾರದಿಂದ ಹತ್ತು ಹಲವು ಯೋಜನೆಗಳನ್ನುಹೊತ್ತು ತಂದಿದ್ದಾರೆ. ಕೇಂದ್ರ ಸರಕಾರದಿಂದಲೂಅಭಿವೃದ್ಧಿ ಯೋಜನೆಗಳ ಲಾಭ ಪಡೆಯುವನಿಟ್ಟಿನಲ್ಲಿ ತಮ್ಮದೇ ಶ್ರಮ ಹಾಕಿದ್ದಾರೆ. ರಸ್ತೆ,ಉದ್ಯಾನವನ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲ ಸೌಲಭ್ಯಕಲ್ಪಿಸುವಲ್ಲಿ ಪ್ರಾಮಾಣಿಕಯತ್ನ ತೋರಿದ್ದಾರೆ.

ಕೋವಿಡ್‌ ನಿರ್ವಹಣೆಗೆ ಅವಿರತ ಶ್ರಮ:ಕೋವಿಡ್‌ ಮೊದಲ-ಎರಡನೇ ಅಲೆ ನಿರ್ವಹಣೆನಿಟ್ಟಿನಲ್ಲಿ ಶಾಸಕರಾಗಿ ಕ್ಷೇತ್ರದಲ್ಲಿ, ಸಚಿವರಾಗಿರಾಜ್ಯದಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ ಆಮ್ಲಜನಕದ ಕೊರತೆ ಎದುರಾದಾಗ ಅದರ ನಿರ್ವಹಣೆ ಹೊಣೆಯನ್ನುಮುಖ್ಯಮಂತ್ರಿಬಿ.ಎಸ್‌.ಯಡಿಯೂರಪ್ಪ ಅವರು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದಜಗದೀಶ ಶೆಟ್ಟರ ಅವರಿಗೆ ವಹಿಸಿದ್ದರು.ಆಮ್ಲಜನಕ ಉತ್ಪಾದನೆ ಹೆಚ್ಚಿಸಲು ಹಾಗೂ ಕೈಗಾರಿಕಾ ಬಳಕೆಗೆಂದು ಇದ್ದ ಆಮ್ಲಜನಕವನ್ನು ಆಸ್ಪತ್ರೆ ಬಳಕೆಗೆ ವಿನಿಯೋಗಿಸುವ ನಿಟ್ಟಿನಲ್ಲಿಸಾಕಷ್ಟು ಶ್ರಮಿಸಿದ್ದರು.

ಸ್ಥಗಿತಗೊಂಡಿದ್ದ ಭದ್ರಾವತಿಯ ವಿಐಎಸ್‌ಎಲ್‌ ಆಮ್ಲಜನಕ ಘಟಕ ಪುನರಾರಂಭಗೊಳ್ಳುವಂತೆ ಮಾಡಿದ್ದರು. ಧಾರವಾಡಜಿಲ್ಲೆಯ ಸತ್ತೂರಿನಲ್ಲಿರುವ ಆಮ್ಲಜನಕ ವಿತರಣೆ ಘಟಕಕ್ಕೂ ಭೇಟಿನೀಡಿ ಪರಿಶೀಲಿಸಿದ್ದರು. ಧಾರವಾಡ ಜಿಲ್ಲೆಯಲ್ಲಿ ಆಮ್ಲಜನಕ ಕೊರತೆಆಗದಂತೆ ಅಗತ್ಯ ಕ್ರಮ ಕೈಗೊಂಡಿದ್ದರು.ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೋವಿಡ್‌ ನಿರ್ವಹಣೆನಿಟ್ಟಿನಲ್ಲಿ ನಿಗಾ ವಹಿಸುವುದು, ನಿರಂತರವಾಗಿ ಅಧಿಕಾರಿಗಳೊಂದಿಗೆಸಭೆ ನಡೆಸಿ ಮಾಹಿತಿ ಪಡೆಯುವ, ಅಗತ್ಯ ಸಲಹೆ-ಸೂಚನೆ ನೀಡುವಕಾರ್ಯ ಕೈಗೊಂಡಿದ್ದರು.

ಕಿಮ್ಸ್‌-ಜಿಲ್ಲಾಸ್ಪತ್ರೆಗಳಿಗೆ ಖುದ್ದಾಗಿ ಭೇಟಿನೀಡುವ ಮೂಲಕ ನಿರ್ವಹಣೆ ಹಾಗೂ ಚಿಕಿತ್ಸೆ ಕುರಿತು ವೀಕ್ಷಣೆಮಾಡುವ, ಮಾಹಿತಿ ಪಡೆಯುವ ಮೂಲಕ ಜನರಿಗೆ ಆತ್ಮಸ್ಥೆ çರ್ಯತುಂಬುವ ಕಾರ್ಯ ಮಾಡಿದ್ದರು.ಕೋವಿಡ್‌ ಲಸಿಕೆ ಬಗೆಗಿನ ವದಂತಿ, ಶಂಕೆ, ಗೊಂದಲ, ಅನುಮಾನನಿವಾರಣೆ ಹಾಗೂ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಜಗದೀಶಶೆಟ್ಟರ ಅವರು ಕಿಮ್ಸ್‌ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವ ಮೂಲಕಸಾರ್ವಜನಿಕರು ಲಸಿಕೆ ಪಡೆಯುವುದಕ್ಕೆ ಪ್ರೇರಣೆ ನೀಡಿದ್ದರು.ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ಕೊರತೆ ಆಗದಂತೆ ನೋಡಿಕೊಳ್ಳುವಲ್ಲಿಶ್ರಮಿಸಿದ್ದರು. ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ಅಸಂಘಟಿತ ಕಾರ್ಮಿಕರು, ಜನರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯಸರಕಾರದ ಕಾರ್ಮಿಕ ಇಲಾಖೆಯಿಂದ ಬಂದ ಆಹಾರಧಾನ್ಯಗಳ ಕಿಟ್‌ಗಳ ವಿತರಣೆ ಸಮರ್ಪಕವಾಗಿ ನಡೆಯುವಂತೆ ನೋಡಿ ಕೊಂಡಿದ್ದರು.

ತಮ್ಮದೇ ಕುಟುಂಬದ ಎಸ್‌.ಎಸ್‌.ಶೆಟ್ಟರ ಫೌಂಡೇಶನ್‌ನಿಂದಸಾವಿರಾರು ಜನರಿಗೆ ಆಹಾರಧಾನ್ಯಗಳ ಕಿಟ್‌ಗಳನ್ನು ವಿತರಿಸಿದ್ದಲ್ಲದೆ,ಇನ್ಫೋಸಿಸ್‌ ಪ್ರತಿಷ್ಠಾನ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು,ಕಂಪನಿಗಳು ನೀಡಿದ ಆಹಾರಧಾನ್ಯಗಳ ಕಿಟ್‌, ಔಷಧ ಕಿಟ್‌ಗಳವಿತರಣೆಯಲ್ಲೂ ಪಾಲ್ಗೊಂಡಿದ್ದರು.ಲಾಕ್‌ಡೌನ್‌ ನಡುವೆಯೇ ಕೃಷಿ ಕಾರ್ಯಕ್ಕೆ ತೊಂದರೆಯಾಗದಂತೆಅಗತ್ಯ ಕ್ರಮ ಕೈಗೊಂಡಿದ್ದಲ್ಲದೆ ಕಂದಾಯ, ಕೃಷಿ,ತೋಟಗಾರಿಕಾ ಇಲಾಖೆ ಅಧಿಕಾರಿಗಳೊಂದಿಗೆಸಭೆ ನಡೆಸಿ, ಕೃಷಿ ಚಟುವಟಿಕೆಗೆ ಯಾವುದೇತೊಂದರೆಯಾಗದಂತೆ ರೈತರಿಗೆ ಸಕಾಲಕ್ಕೆ ಬಿತ್ತನೆಬೀಜ, ರಸಗೊಬ್ಬರ ವಿತರಣೆಗೆ ತೊಂದರೆ-ಕೊರತೆ ಆಗದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನಸೂಚನೆ ನೀಡಿದ್ದರು.

ಜಿಲ್ಲೆಯಲ್ಲಿ ಸುಮಾರು 28ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆನೆರವಾಗುವಂತೆ ಸಂಬಂಧಿಸಿದ ಅಧಿಕಾರಿಗಳಿಗೆಸೂಚಿಸಿದ್ದರು.ಅಭಿವೃದ್ಧಿಯ ಹರಿಕಾರ: ಹುಬ್ಬಳ್ಳಿ-ಧಾರವಾಡಮಹಾನಗರದಲ್ಲಿ ಮೂಲಸೌಕರ್ಯ ಸೇರಿದಂತೆವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆನೀಡುವ, ಉದ್ಘಾಟನೆಗೊಳಿಸುವ ಮೂಲಕಸಚಿವ ಜಗದೀಶ ಶೆಟ್ಟರ ಅವರು ಅಭಿವೃದ್ಧಿಹರಿಕಾರ ಎನಿಸಿದ್ದಾರೆ.

ಅವಳಿನಗರದಲ್ಲಿ 24/7ನೀರು ಪೂರೈಕೆ ಯೋಜನೆ ವಿಸ್ತರಣೆ, ಮಲಪ್ರಭಾನದಿಯಿಂದ ಅವಳಿನಗರಕ್ಕೆ ಸಗಟು ನೀರುತರುವ, ಹುಬ್ಬಳ್ಳಿ-ಧಾರವಾಡದ ಎಲ್ಲ ವಾರ್ಡ್‌ಗಳಿಗೆ 24/7 ನೀರು ಪೂರೈಕೆ ಯೋಜನೆ ವಿಸ್ತರಣೆ, ಕಾಮಗಾರಿಟೆಂಡರ್‌ ಪಡೆದ ಎಲ್‌ ಆ್ಯಂಡ್‌ ಟಿ ಕಂಪನಿಯೊಂದಿಗೆ ಚರ್ಚೆ,ಜೀವಜಲ ಯೋಜನೆಯಡಿ ಧಾರವಾಡ ಜಿಲ್ಲೆಯ ಪ್ರತಿ ಮನೆಗೂಶುದ್ಧ ಕುಡಿಯುವ ನೀರು ತಲುಪಿಸುವ ಅಂದಾಜು 1,032 ಕೋಟಿರೂ.ಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಾಜ್ಯಸಚಿವ ಸಂಪುಟದಲ್ಲಿ ಆಡಳಿತಾತ್ಮಕ ಮಂಜೂರಾತಿ ಪಡೆಯುವಲ್ಲಿತೋರಿದ ಮುತುವರ್ಜಿ ಅಪಾರ.

ಅವಳಿನಗರದ ಮಧ್ಯದ ಬಿಆರ್‌ಟಿಎಸ್‌ ಯೋಜನೆ, ಕೇಂದ್ರಸರಕಾರದ ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಮಾರುಕಟ್ಟೆಗಳಅಭಿವೃದ್ಧಿ, ಸಿಆರ್‌ಎಫ್‌ ನಿಧಿಯಡಿ ರಸ್ತೆಗಳ ದುರಸ್ತಿ, ಟೆಂಡರ್‌ಶ್ಯುರ್‌ ರಸ್ತೆ, ತೋಳನಕರೆ, ಇಂದಿರಾ ಗಾಜಿನ ಮನೆ-ಮಹಾತ್ಮಗಾಂಧಿಉದ್ಯಾನವನ, ಕೆಲಗೇರಿ ಕೆರೆ, ಕೋಳಿಕೆರೆ, ಉಣಕಲ್ಲ ಕೆರೆ, ನೆಹರುಮೈದಾನ ಅಭಿವೃದ್ಧಿ, ಗೋಕುಲ ಬಳಿ ಕ್ರೀಡಾ ಸಮುತ್ಛಯನಿರ್ಮಾಣ, ಚನ್ನಮ್ಮ ವೃತ್ತದ ಬಳಿ ಕೇಂದ್ರ ನೆರವಿನ ಫ್ಲೆ ç ಓವರ್‌ನಿರ್ಮಾಣ ಶ್ರೀಕಾರ ಹೀಗೆ ವಿವಿಧ ಅಭಿವೃದ್ಧಿ ಕಾರ್ಯಗಳ ಹಿಂದೆಶೆಟ್ಟರ ಅವರ ದೂರದೃಷ್ಟಿ, ಶ್ರಮ ಗೋಚರಿಸುತ್ತದೆ. ಬೃಹತ್‌ ಮತ್ತುಕೈಗಾರಿಕಾ ಸಚಿವರಾಗಿ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್‌ ಕರ್ನಾಟಕ ಕೈಗೊಳ್ಳುವಮೂಲಕ ಸ್ಥಳೀಯ ಉದ್ಯಮ ವಲಯಕ್ಕೆ ಚೇತನ ನೀಡುವ,ಹೊರಗಿನ ಉದ್ಯಮಿಗಳನ್ನು ಹೂಡಿಕೆಗೆ ಆಕರ್ಷಿಸುವ ಮಹತ್ವದಯತ್ನ ತೋರಿದ್ದರು.

ಅದರ ಫಲವಾಗಿ ಏಕಸ್‌ ಸೇರಿದಂತೆ ವಿವಿಧಕಂಪನಿಗಳು ಹುಬ್ಬಳ್ಳಿ-ಧಾರವಾಡದಲ್ಲಿ ಹೂಡಿಕೆಗೆ ಮುಂದಾಗಿವೆ.ಸಾವಿರಾರು ಕೋಟಿ ರೂ.ಗಳ ಹೂಡಿಕೆ ಜತೆಗೆ, 25-30 ಸಾವಿರಉದ್ಯೋಗ ಸೃಷ್ಟಿ ಆಗಲಿದೆ. ಉದ್ಯಮಕ್ಕೆ ಪೂರಕವಾಗಿ ಮಮ್ಮಿಗಟ್ಟಿಯಲ್ಲಿಕೈಗಾರಿಕಾ ಪ್ರದೇಶಕ್ಕೆ ಚಾಲನೆ ನೀಡಲಾಗಿದೆ. ಹೀಗೆ ಸಚಿವ ಜಗದೀಶಶೆಟ್ಟರ ಅವರ ಪ್ರಯತ್ನದ ಫಲವಾಗಿ ಅನೇಕ ಅಭಿವೃದ್ಧಿ ಯೋಜನೆಗಳುಅವಳಿನಗರಕ್ಕಾಗಮಿಸಿವೆ, ಇನ್ನಷ್ಟು ಹರಿದು ಬರುತ್ತಿವೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.