16 ಸುಲಿಗೆಕೋರರ ಸೆರೆ, 64 ಲಕ್ಷ ರೂ. ಸ್ವತ್ತು ವಶ
Team Udayavani, Dec 2, 2022, 3:20 PM IST
ಬೆಂಗಳೂರು: ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆಯಲ್ಲಿ ಮನೆ ಕಳವು, ಮೊಬೈಲ್ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ 16 ಮಂದಿಯನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 64.21 ಲಕ್ಷ ರೂ. ಮೌಲ್ಯದ 619 ಗ್ರಾಂ ಚಿನ್ನಾಭರಣ 30 ಗ್ರಾಂ ಬೆಳ್ಳಿ, 210 ಮೊಬೈಲ್ಗಳು, 9 ಬೈಕ್, 3 ಸೈಕಲ್, 2 ವಾಚ್ಗಳು ಹಾಗೂ ಒಂದು ಆಟೋ ವಶಕ್ಕೆ ಪಡೆಯಲಾಗಿದೆ. ಮಾಗಡಿ ರಸ್ತೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, 18.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಗೋವಿಂದರಾಜನಗರ ಠಾಣೆ ಪೊಲೀಸರಿಂದ ಪ್ರಾವಿಜನ್ ಸ್ಟೋರ್ಗಳಲ್ಲಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೇಯೆ ಮತ್ತೂಂದು ಪ್ರಕರಣದಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
11.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ದರೋಡೆ, ಬೈಕ್ ಕಳವು ಹಾಗೂ ಸುಲಿಗೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 3.50 ಲಕ್ಷ ರೂ. ಮೌಲ್ಯದ ಮೊಬೈಲ್, ಚಿನ್ನಾಭರಣ, ಆಟೋ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ವಿಜಯನಗರ ಪೊಲೀಸರಿಂದ ಬೈಕ್ ಕಳವು, ಮೊಬೈಲ್ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿ ಗಳನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ 2 ಬೈಕ್, 1 ಆಟೋ, 204 ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀ ಸರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ಲಕ್ಷ್ಮಣ್ ನಿಂಬರಗಿ ಹಾಗೂ ಇತರೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ