Bangalore Traffic: ಟ್ರಾಫಿಕ್‌:ನಂ.2 ಸ್ಥಾನದಿಂದ 6ಕ್ಕಿಳಿದ ಬೆಂಗಳೂರು


Team Udayavani, Feb 7, 2024, 10:53 AM IST

2

ಬೆಂಗಳೂರು: ಎರಡು ವರ್ಷಗಳ ಹಿಂದೆ ವಿಶ್ವದಲ್ಲೇ 2ನೇ ಅತೀ ಹೆಚ್ಚು ಸಂಚಾರ ದಟ್ಟಣೆ ನಗರ ಎಂಬ ಅಪಖ್ಯಾತಿಗೆ ಒಳಗಾಗಿದ್ದ ಸಿಲಿಕಾನ್‌ ಸಿಟಿ ಬೆಂಗಳೂರು 2023ರಲ್ಲಿ ಸುಧಾರಣೆ ಕಂಡಿದ್ದು, 6ನೇ ಸ್ಥಾನಕ್ಕೆ ಇಳಿದಿದೆ.

ಡಚ್‌ ಲೋಕೇಷನ್‌ ಟೆಕ್ನಾಲಜಿ ಸಂಸ್ಥೆಯಾದ ‌ ಟಾಮ್‌ ಇತ್ತೀಚೆಗೆ 2023ರ ವಿಶ್ವ ಸಂಚಾರ ಸೂಚ್ಯಂಕವನ್ನು ಬಿಡು ಗಡೆ ಮಾಡಿದ್ದು, ಬೆಂಗಳೂರು ನಗರ ಸಂಚಾರ ವ್ಯವಸ್ಥೆ ಸೂಚ್ಯಂಕದಲ್ಲಿ ಗಣನೀಯ ಬದಲಾವಣೆ ಆಗಿದೆ. 2022ನೇ ಸಾಲಿನಲ್ಲಿ ಬೆಂಗಳೂರು ವಿಶ್ವದಲ್ಲೇ 2ನೇ ಅತೀ ಹೆಚ್ಚು ಸಂಚಾರ ದಟ್ಟಣೆಯ ನಗರವಾಗಿದ್ದು, 2023 ರಲ್ಲಿ 6ನೇ ಸ್ಥಾನಕ್ಕೆ ಇಳಿದಿದೆ. ಅದನ್ನು ಇನ್ನಷ್ಟು ಸುಧಾರಣೆಗೆ ತರಲು ಕೆಲ ಯೋಜನೆಗಳನ್ನು ರೂಪಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಮಂಗಳವಾರ  ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಟಾಮ್‌ ಸಂಸ್ಥೆ ಪ್ರಕಾರ, ಮೊದಲ ಸ್ಥಾನದಲ್ಲಿ ಲಂಡನ್‌, ಎರಡು ಹಾಗೂ ಮೂರನೇ ಸ್ಥಾನದಲ್ಲಿ ಅನುಕ್ರಮವಾಗಿ ಐರ್ಲೆಂಡ್‌ ರಾಜಧಾನಿ ಡಬ್ಲೀನ್‌, ಕೆನಡಾದ ಟೊರೊಂಟೊ ನಗರವಿದ್ದರೆ, ಆರನೇ ಸ್ಥಾನದಲ್ಲಿ ಬೆಂಗಳೂರು ಹಾಗೂ ಪುಣೆ ಏಳನೇ ಸ್ಥಾನದಲ್ಲಿದೆ ಎಂದು ಸಂಸ್ಥೆಯ ಅಧ್ಯಯನದ ವರದಿ ತಿಳಿಸಿದೆ. ಇನ್ನು 2022ರಲ್ಲಿ ಪ್ರತಿ ಗಂಟೆಗೆ ಸರಾಸರಿ ವೇಗ 14 ಕಿ.ಮೀಟರ್‌ ಇದ್ದರೆ 2023ರಲ್ಲಿ 18 ಕಿ.ಮೀಟರ್‌ಗೆ ಏರಿಕೆಯಾಗಿದೆ. ಅಲ್ಲದೆ ಪ್ರಯಾಣ ಸಮಯ ಒಂದು ನಿಮಿಷ ತಗ್ಗಿರುವುದು ಕಂಡುಬಂದಿದೆ.

2022ರಲ್ಲಿ ನಗರದಲ್ಲಿ ಪ್ರತಿ 10 ಕಿ.ಮೀ. ಕ್ರಮಿಸಲು 28 ನಿಮಿಷ 11 ಸೆಕೆಂಡ್‌ ತಗುಲುತಿತ್ತು. 2023ರಲ್ಲಿ 27 ನಿಮಿಷ 11 ಸೆಕೆಂಡ್‌ಗೆ ತಗ್ಗಿದೆ. ವಿಶ್ವದ 10 ನಗರಗಳ ಪೈಕಿ ಬೆಂಗಳೂರು ನಗರ ಮಾತ್ರವೇ ಪ್ರಯಾಣ ಸಮಯದಲ್ಲಿ 1 ನಿಮಿಷ ಕಡಿಮೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖೀಸಿದೆ. ಈ ನಡುವೆ 2023ರಲ್ಲಿ 10 ಲಕ್ಷ ವಾಹನಗಳ ನೋಂದಣಿಗಳ ಹೊರತಾಗಿಯೂ ಸುಧಾರಣೆ ಕಂಡಿದೆ ಎಂದು ತಿಳಿಸಿದ್ದಾರೆ.

ಸುಧಾರಣೆಗೆ ಪ್ರಮುಖ ಕಾರಣಗಳೇನು?: ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರ ಪೊಲೀಸರು ಹಲವು ಸುಧಾರಣ ಕ್ರಮಕೈಗೊಂಡಿದ್ದಾರೆ. ಹೆಬ್ಟಾಳ ಜಂಕ್ಷನ್‌, ಟಿನ್‌ ಫ್ಯಾಕ್ಟರಿ, ಗೊರಗುಂಟೆಪಾಳ್ಯ ಹಾಗೂ ಸಾರಕ್ಕಿ ಜಂಕ್ಷನ್‌ ಸೇರಿ ಹಲವಾರು ದಟ್ಟಣೆಯ ಜಂಕ್ಷನ್‌ಗಳಲ್ಲಿ ದಟ್ಟಣೆ ನಿವಾರಣೆಗೆ ಕ್ರಮಕೈಗೊಂಡಿದ್ದಾರೆ. ವಾಹನ ದಟ್ಟಣೆಯಾಗುತ್ತಿದ್ದ ರಸ್ತೆ ವಿಭಜಕಗಳನ್ನ ಮುಚ್ಚಿಸಲಾಗಿದೆ. ಅನಗತ್ಯ ಬಸ್‌ ನಿಲ್ದಾಣಗಳ ತೆರವು, ಅವೈಜ್ಞಾನಿಕ ಯುಟರ್ನ್ ಬಂದ್‌, ಫ್ರೀ ಸಿಗ್ನಲ್‌ಗೆ ಒತ್ತು ನೀಡಿದ್ದರಿಂದ ಸುಗಮವಾಗಿ ವಾಹನ ಸಂಚಾರಕ್ಕೆ ಕಾರಣವಾಗಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸುವುದಕ್ಕಿಂತ ವಾಹನಗಳ ಸುಗಮ ಸಂಚಾರಕ್ಕೆ ಆದ್ಯತೆ ನೀಡಲಾಗಿದೆ. ಪೀಕ್‌ ಅವರ್‌ ನಿರ್ವಹಣೆಗೆ ಭಾರೀ ಗಾತ್ರದ ವಾಹನಗಳ ನಿಷೇಧ ಮತ್ತು ಮಾರ್ಗ ಬದಲಾವಣೆ ಹಾಗೂ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ, ಟ್ರಾಫಿಕ್‌ ಎಂಜಿನಿಯರಿಂಗ್‌, ಸುಧಾರಿತ ಮೆಟ್ರೋ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಬಿ.ದಯಾನಂದ್‌ ಮಾಹಿತಿ ನೀಡಿದರು.

ಭವಿಷ್ಯದ ಯೋಜನೆಗಳೇನು?:

ಕೃತಕ ಬುದ್ಧಿಮತ್ತೆ ಆಧಾರಿತ ಟ್ರಾಫಿಕ್‌ ಸಿಗ್ನಲ್‌ಗ‌ಳು. ಮೂಲಕ ಅತ್ಯುತ್ತಮ ಸಿಗ್ನಲಿಂಗ್‌ಗೆ ವ್ಯವಸ್ಥೆ ನೀಡುವುದು.  

ಎ1 ಮತ್ತು ಇತರೆ ಅತ್ಯಾಧುನಿಕ ತಂತ್ರಜ್ಞಾನಗಳ ಆಧಾರಿತ ವ್ಯವಸ್ಥೆಗಳ ಬಳಕೆ.

ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಟ್ರಾಫಿಕ್‌ ಅರಿವನ್ನು ಸುಧಾರಿಸಲು ವಿವಿಧ ಏಜೆನ್ಸಿಗಳು, ಪ್ರಮುಖ ಸಂಶೋಧನಾ ಸಂಸ್ಥೆಗಳು, ಎನ್‌ಜಿಒಗಳೊಂದಿಗೆ ಸಹಯೋಗ.

 

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.