ಸ್ನೇಹಿತನನ್ನೇ ಕೊಂದಿದ್ದ ಬಾಂಗ್ಲಾದವರ ಸೆರೆ


Team Udayavani, Jun 23, 2017, 12:17 PM IST

arrest.jpg

ಬೆಂಗಳೂರು: ಹಣದ ವಿಚಾರವಾಗಿ ಕಳೆದ ವರ್ಷ ಸ್ನೇಹಿತನನ್ನೇ ಕೊಲೆಗೈದು ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶದ ನಾಲ್ವರು ಆರೋಪಿಗಳು  ಹೆಣ್ಣೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಾದನಾಯಕನಹಳ್ಳಿಯಲ್ಲಿ ವಾಸವಿರುವ  ಓಬೀಮುಲ್ಲಾ (26), ಕೋರಮಂಗಲದ ನಿವಾಸಿಗಳಾದ ಮೊಯಿನ್‌ ಖಾನ್‌ (26) ಮತ್ತು ರಕೀಮುಲ್ಲಾ (33), ಗೊಲ್ಲರಹಳ್ಳಿ ನಿವಾಸಿ ಮಹಮ್ಮದ್‌ ಕಿಸು (35) ಬಂಧಿತ ಆರೋಪಿಗಳು. 

ಕಳೆದ ರಾತ್ರಿ 1.30ರ ಸುಮಾರಿಗೆ ಹೆಣ್ಣೂರು ಠಾಣೆಯ ಇನ್ಸಪೆಕ್ಟರ್‌  ಶ್ರೀನಿವಾಸ್‌  ಹಾಗೂ ಸಿಬ್ಬಂದಿಗೆ ಅಗರ ಕೆರೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ನಾಲ್ವರು ಕಂಡಿದ್ದತು. ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ, ಆರೋಪಿಗಳ ಬಳಿ ಚಾಕು ಪತ್ತೆಯಾಗಿವೆ. ಜೊತೆಗೆ  ಓಬೀಬುಲ್ಲಾನ ಬಳಿ ಜಾಮೀನು ಪತ್ರವೂ ಇತ್ತು. ಹೀಗಾಗಿ ಠಾಣೆಗೆ ಕರೆತಂದು ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ, ಕಳೆದ ವರ್ಷ ತಮ್ಮ ಸ್ನೇಹಿತ ಇಮ್ರುಲ್‌ ಚೌಧರಿಯನ್ನು ಕೊಲೆಗೈದ ಸಂಗತಿಯನ್ನು ಬಾಯ್ಬಿಟ್ಟಿದ್ದಾರೆ.

ಹಲವು ವರ್ಷಗಳ ಹಿಂದೆಯೇ ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ ಬಂದಿದ್ದ ಆರೋಪಿಗಳು, ನಗರದ ವಿವಿಧೆಡೆ ನೆಲೆಸಿ ಬಾಂಗ್ಲಾ ಯುವತಿಯರನ್ನು ಬಳಸಿಕೊಂಡು  ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು. ಕೊಲೆಯಾಗಿದ್ದ ಇಮ್ರುಲ್‌ ಚೌಧರಿಯೂ ಇವರ ಸ್ನೇಹಿತನಾಗಿದ್ದು, ಆತ  ನೆಲಮಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ಹನುಮಂತರಾಯಪ್ಪ ಎಂಬುವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ.

ವೇಶ್ಯಾವಾಟಿಕೆ ದಂಧೆಯಲ್ಲಿ ಬಂದ ಹಣದ ಹಂಚಿಕೆ ವಿಚಾರದಲ್ಲಿ ಆರೋಪಿಗಳಿಗೂ ಹಾಗೂ ಇಮ್ರುಲ್‌ಗೆ ಜಗಳವಾಗಿತ್ತು. ಈ ಹಿನ್ನೆಲೆಯಲ್ಲಿ 2016ರ ಜುಲೈ 11 ರಂದು, ಆತನ ಮನೆಯಲ್ಲಿಯೇ  ಇಮ್ರುನ್‌ನನ್ನು ಉಸಿರುಗಟ್ಟಿಸಿ ಕೊಲೆಗೈದಿದ್ದ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಈ ಪೈಕಿ ಓಬೀಬುಲ್ಲಾ ಮಾತ್ರ ಬಂಧಿತನಾಗಿದ್ದ. ಆದರೆ  ಜಾಮೀನಿನ ಆಧಾರದಲ್ಲಿ ಬಿಡುಗೆಯಾಗಿ ಪುನ: ಹಳೆ ಕಸುಬನ್ನು ಮುಂದುವರಿಸಿದ್ದ ಎಂದು ಪೊಲೀಸರು ತಿಳಿಸಿದರು.

ಆಧಾರ್‌ ಕಾರ್ಡ್‌, ವೋಟರ್‌ ಐಡಿ ಪತ್ತೆ: ಈ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳ ಬಳಿಯೂ ಇಲ್ಲಿನ  ಆಧಾರ್‌ಕಾರ್ಡ್‌, ವೋಟರ್‌ ಐಡಿ, ಪಾನ್‌  ಕಾರ್ಡ್‌ಗಳು ದೊರೆತಿವೆ. ಅಕ್ರಮವಾಗಿ ನುಸುಳಿ ಬಂದಿರುವ ಆರೋಪಿಗಳು ಆರ್‌.ಟಿ.ನಗರ ನಿವಾಸಿಯಾದ ಜನಾರ್ದನ ರೆಡ್ಡಿ ಎಂಬಾತನ ಮೂಲಕ ಆಧಾರ್‌ ಮಾಡಿಸಿಕೊಂಡಿದ್ದಾರೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. 

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.