ಸಾಲ ಪಡೆದು ಬ್ಯಾಂಕ್ಗೆ ವಂಚನೆ: ಇಡಿ ದಾಳಿ
Team Udayavani, Jun 8, 2023, 2:47 PM IST
ಬೆಂಗಳೂರು: ವಂಚನೆ ಆರೋಪದ ಮೇಲೆ ಭಾರತ್ ಇನ್ಫ್ರಾ ಎಕ್ಸ್ಪೋರ್ಟ್ ಆ್ಯಂಡ್ ಇಂಪೋರ್ಟ್ಸ್ ಲಿಮಿಟೆಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಂಪನಿಗೆ ಸಂಬಂಧಿಸಿದ ಬೆಂಗಳೂರು ಮತ್ತು ದಾವಣಗೆರೆ 7 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಇದೇ ವೇಳೆ 100 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳು ಪತ್ತೆಯಾಗಿದ್ದು, ಸಂಸ್ಥೆ ಹೊಂದಿರುವ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಭಾರತ್ ಇನ್ಫ್ರಾ ಎಕ್ಸ್ಪೋರ್ಟ್ ಆ್ಯಂಡ್ ಇಂಪೋರ್ಟ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್ವೊಂದರಲ್ಲಿ ವಿವಿಧ ರೂಪದಲ್ಲಿ 113.38 ಕೋಟಿಗೂ ಅಧಿಕ ಸಾಲ ಪಡೆದುಕೊಂಡಿತ್ತು. ಆದರೆ, ಸಕಾಲದಲ್ಲಿ ಮರು ಪಾವತಿಸದ ಕಾರಣ 2017ರಲ್ಲಿ ಕಂಪನಿಯ ಖಾತೆಯನ್ನು ಅನುತ್ಪಾದಕ ಆಸ್ತಿ(ಎನ್ಪಿಎ) ಘೋಷಣೆ ಮಾಡಲಾಗಿತ್ತು. ಈ ವೇಳೆ 113.38 ಕೋಟಿಬಾಕಿ ಉಳಿಸಿಕೊಂಡಿತ್ತು ಎಂಬುದು ಪತ್ತೆಯಾಗಿದೆ.
ಈ ಸಂಬಂಧ ಬ್ಯಾಂಕ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ವೇಳೆ ವಂಚಿಸಿದ ಕಂಪನಿ ಬ್ಯಾಂಕ್ನಿಂದ ಪಡೆದ ಸಾಲವನ್ನು ದುರುಪಯೋಗ ಪಡಿಸಿಕೊಂಡಿದ್ದು, ಈ ಹಣವನ್ನು ಬೇರೆಡೆ ಹೂಡಿಕೆ ಮಾಡಿದೆ. ಅದನ್ನು ಮರೆಮಾಚಲು ಕಂಪನಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್ಗೆ ಸಲ್ಲಿಸಿರುವುದು ಗೊತ್ತಾಗಿದೆ.
ಇಡಿ ತನಿಖೆ ವೇಳೆ 101.18 ಕೋಟಿ ರೂ. ಅನ್ನು ಆರಾಧ್ಯ ವೈರ್ ರೋಪ್ಸ್ ಪ್ರೈ.ಲಿಗೆ 10 ಸಾಲದ ಪತ್ರದ ಮೂಲಕ ನೀಡಿದೆ. ಹಲವು ಬ್ಯಾಂಕ್ ಖಾತೆ ಮೂಲಕ ಹಣ ವಹಿವಾಟು ನಡೆಸಿರುವುದು ಗೊತ್ತಾಗಿದೆ. ಜತೆಗೆ ಕೆಲ ಸಂದರ್ಭದಲ್ಲಿ ಈ 2 ಕಂಪನಿಗಳಿಗೆ ನಕಲಿ ವಾಹನಗಳ ವಿವರ ಮತ್ತು ಇನ್ವಾಯ್ಸ ಗಳನ್ನು ನೀಡಿದ ಸಾರಿಗೆ ಗುತ್ತಿಗೆದಾರ ಮತ್ತು ಮಧ್ಯವರ್ತಿಗಳ ಪರವಾಗಿ ಪಾವತಿ ಮಾಡಲಾಗಿದೆ ಎಂದು ಇ.ಡಿ. ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು