ಕಮಿಷನ್‌ ಆಸೆಗೆ ಬ್ಯಾಂಕನ್ನೇ ದೋಚಿದ ವ್ಯವಸ್ಥಾಪಕಿ ಸೆರೆ


Team Udayavani, Jan 30, 2023, 1:24 PM IST

ಕಮಿಷನ್‌ ಆಸೆಗೆ ಬ್ಯಾಂಕನ್ನೇ ದೋಚಿದ ವ್ಯವಸ್ಥಾಪಕಿ ಸೆರೆ

ಬೆಂಗಳೂರು: ವಿಮಾ ಬಾಂಡ್‌ ಮಾಡಲು ಗ್ರಾಹಕರ ಖಾತೆಯಲ್ಲಿದ್ದ ಹಣವನ್ನು ಬೇರೆ ಖಾತೆಗಳಿಗೆ ವರ್ಗಾವಣೆಮಾಡಿ ವಂಚಿಸಿದ ಖಾಸಗಿ ಬ್ಯಾಂಕೊಂದರ ರಿಲೇಶನ್‌ಶಿಪ್‌ ಮ್ಯಾನೇಜರ್‌ನನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಣಸೆಮಾರೇನಹಳ್ಳಿ ನಿವಾಸಿ ಸಜೀಲಾ ಗುರುಮೂರ್ತಿ(34) ಬಂಧಿತೆ. ಈಕೆಯಿಂದಶಾಖೆಯ ಒಂದು ಕಂಪ್ಯೂಟರ್‌, 23 ಲಕ್ಷರೂ. ಮೌಲ್ಯದ ವಿಮಾ ಬಾಂಡ್‌ ವಶಕ್ಕೆಪಡೆಯಲಾಗಿದೆ. ಈಕೆ, ನಗರದ ಖಾಸಗಿಬ್ಯಾಂಕ್‌ನಲ್ಲಿ ರಿಲೇಶಿಪ್‌ ಮ್ಯಾನೇಜರ್‌ಆಗಿದ್ದು, ಗ್ರಾಹಕರಿಗೆ ಮಾಹಿತಿ ನೀಡದೆ 4.92ಲಕ್ಷ ರೂ. ಅನ್ನು ಬೇರೆ ಗ್ರಾಹಕರ ಖಾತೆಗಳಿಗೆ ವರ್ಗಾವಣೆ ಮಾಡಿ, ಬಳಿಕ ವಿಮಾ ಬಾಂಡ್‌ ಮಾಡಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಮಿಷನ್‌ ರೋಡ್‌ನ‌ಲ್ಲಿರುವ ಬ್ಯಾಂಕ್‌ ಮ್ಯಾನೇಜರ್‌ ಎಸ್‌.ಎನ್‌.ಸಂಗಮೇಶ್ವರ್‌ ದೂರಿನ ಮೇರೆಗೆಆರೋಪಿತೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಈ ಖಾಸಗಿ ಬ್ಯಾಂಕ್‌ಅನ್ನು ಎಲ್‌ಐಸಿ ಜತೆ ವಿಲೀನ ಮಾಡಲಾಗಿದ್ದು, ಹೀಗಾಗಿ ಬ್ಯಾಂಕ್‌ನ ರಿಲೇಶನ್‌ಶಿಪ್‌ ಮ್ಯಾನೇಜರ್‌ಗೆ ಮಾಸಿಕ ಇಂತಿಷ್ಟು ವಿಮಾ ಮಾಡಿಸಲುಟಾರ್ಗೆಟ್‌ ಕೊಡಲಾಗಿತ್ತು. ಹೀಗಾಗಿ ಸಜೀಲಾ ಬ್ಯಾಂಕ್‌ನಲ್ಲಿ ನಿಶ್ಚಿತ ಠೇವಣಿ ಇಡುವ ಗ್ರಾಹಕರಖಾತೆಗಳನ್ನು ಟಾರ್ಗೆಟ್‌ ಮಾಡಿಕೊಂಡು ಆಯ್ಕೆಮಾಡಿಕೊಳ್ಳುತ್ತಿದ್ದಳು. ಬಳಿಕ ನಿರ್ದಿಷ್ಟ ಗ್ರಾಹಕನಖಾತೆಯಲ್ಲಿರುವ ಹಣವನ್ನು ಬೇರೆ ಖಾತೆಗೆ ವರ್ಗಾವಣೆಮಾಡಿಕೊಂಡು ವಿಮಾ ಬಾಂಡ್‌ ಮಾಡಿಸುತ್ತಿದ್ದಳು. ಬಳಿಕ ಈ ವಿಮಾ ಬಾಂಡ್‌ಗಳನ್ನು ಅಡಮಾನ ಇಟ್ಟು ನಿಶ್ಚಿತ ಠೇವಣಿ ಖಾತೆಗೆವರ್ಗಾವಣೆ ಮಾಡುತ್ತಿದ್ದಳು. ಅದು ಸರಿದೂಗದಿದ್ದಾಗ ಇನ್ನಷ್ಟು ಖಾತೆಗಳ ಹಣವರ್ಗಾವಣೆ ಮಾಡುತ್ತಿದ್ದಳು ಎಂದು ಪೊಲೀಸರು ಹೇಳಿದರು.

ಒಂದೇ ದಿನ 4.92 ಕೋಟಿ ವರ್ಗಾವಣೆ: ತಮಿಳುನಾಡು ಮೂಲದ ಸಜೀಲಾ ಗುರುಮೂರ್ತಿ,ಮಿಷನ್‌ ರೋಡ್‌ ಶಾಖೆಯಲ್ಲಿ 2022ರ ಜೂ. 13ರಿಂದಡಿ. 31ರ ಅವಧಿಯಲ್ಲಿ ಈ ವೇಳೆಯಲ್ಲಿ ಬ್ಯಾಂಕ್‌ನಪ್ರತಿಷ್ಠಿತ ಗ್ರಾಹಕರ ಖಾತೆಗಳಿಂದ ಅವರ ಗಮನಕ್ಕೆ ಬಾರದೆ, ಖಾತೆಯಿಂದ ಹಣ ತೆಗೆದು ಎಲ್‌ಐಸಿ ಬಾಂಡ್‌ ಗಳಲ್ಲಿ ತೊಡಗಿಸಿ ಒಟ್ಟು 1,44 ಕೋಟಿ ರೂ. ಅನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದರು. ಈ ಹಿಂದೆ ಗಾಂಧಿನಗರದಲ್ಲಿರುವ ಶಾಖೆಯಲ್ಲಿ ಕೆಲಸ ಮಾಡುವಾಗಲೂ ಇದೇ ರೀತಿ ಎಲ್‌ಐಸಿ ಬಾಂಡ್‌ಗಳನ್ನು ಮಾಡಿಸಲು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದರು. ಅದನ್ನು ಸರಿದೂಗಿಸಲು ಡಿ.23ರಂದುಒಂದೇ ದಿನ 4,92,50 ರೂ. ಅನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಈ ಮೂಲಕ ಗ್ರಾಹಕರು ಮತ್ತು ಬ್ಯಾಂಕ್‌ಗೆ ವಂಚಿಸುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಇತ್ತೀಚೆಗೆ ಶಾಖೆಯಮ್ಯಾನೇಜರ್‌ ಸಂಗಮೇಶ್ವರ ಬ್ಯಾಂಕ್‌ ಖಾತೆಗಳ ಪರಿಶೀಲನೆ ವೇಳೆ ಈ ವಿಚಾರ ಗೊತ್ತಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹಲಸೂರು ಗೇಟ್‌ ಎಸಿಪಿ ವಿ.ನಾರಾಯಣಸ್ವಾಮಿನೇತೃತ್ವದಲ್ಲಿ ಸಂಪಂಗಿರಾಮ ನಗರ ಠಾಣಾಧಿಕಾರಿಎಂ.ಎ.ಹರೀಶ್‌ ಕುಮಾರ್‌ ಮತ್ತು ಪಿಎಸ್‌ಐ ಶಿವಕುಮಾರ್‌ ತಂಡ ಕಾರ್ಯಾಚರಣೆ ನಡೆಸಿದೆ.

ಟಾರ್ಗೆಟ್‌, ಕಮಿಷನ್‌ ಆಸೆಗಾಗಿ ಕೃತ್ಯ :  ಸಜೀಲಾ ಗುರುಮೂರ್ತಿಗೆ ವಿಮಾ ಮಾಡಿಸಲುಇಂತಿಷ್ಟು ಟಾರ್ಗೆಟ್‌ ಕೊಡಲಾಗಿತ್ತು. ಆದರೆ,ನಿಗದಿತ ಸಮಯಕ್ಕೆ ತಲುಪಲು ಸಾಧ್ಯವಾಗಿರಲಿಲ್ಲ.ಹೀಗಾಗಿ ಈ ಮಾರ್ಗಕಂಡುಕೊಂಡಿದ್ದರು. ಅದರಿಂದ ತನಗೆ ಸಿಗುವ ಕಮಿಷನ್‌ ಪಡೆದುಕೊಳ್ಳುತ್ತಿದ್ದರು. ಜತೆಗೆ ಬ್ಯಾಂಕ್‌ಗೂ ಲಾಭ ಕೊಡಿಸುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.