ಬಾರ್ ಆಂಡ್ ರೆಸ್ಟೋರೆಂಟ್ಗೆ ಬೀಗ
Team Udayavani, Jul 16, 2019, 3:04 AM IST
ಬೆಂಗಳೂರು: ಮಿತಿ ಮೀರಿದ ಶಬ್ದ ಮಾಲಿನ್ಯ ಉಂಟು ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ಇಂದಿರಾನಗರ 100 ಅಡಿ ರಸ್ತೆಯಲ್ಲಿರುವ “ಟಿಪ್ಲರ್ ಬಾರ್ ಅಂಡ್ ರೆಸ್ಟೋರೆಂಟ್’ಗೆ ಬೀಗಮುದ್ರೆ ಹಾಕಲಾಗಿದೆ ಎಂದು ಬಿಬಿಎಂಪಿ ಸೋಮವಾರ ಹೈಕೋರ್ಟ್ಗೆ ಹೇಳಿದೆ.
ಇಂದಿರಾನಗರದಲ್ಲಿ ಪಬ್ ಹಾಗೂ ರೆಸ್ಟೋರೆಂಟ್ಗಳಿಂದ ಮಿತಿ ಮೀರಿದ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ದೂರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾ. ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಬಿಬಿಎಂಪಿ ಪರ ವಕೀಲರು ಈ ಕುರಿತು ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಹೈಕೋರ್ಟ್ ನಿರ್ದೇಶನದಂತೆ ಟಿಪ್ಲರ್ ಬಾರ್ ಆಂಡ್ ರೆಸ್ಟೋರೆಂಟ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಕರ್ನಾಟಕ ಪೌರ ನಿಗಮ ಕಾಯ್ದೆಯನ್ವಯ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೆ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. ಈ ಪ್ರಮಾಣಪತ್ರವನ್ನು ದಾಖಲಿಸಿಕೊಂಡ ನ್ಯಾಯಪೀಠ, ಕ್ರಮ ಕೈಗೊಂಡಿರುವ ಬಗ್ಗೆ ಆ.13ರಂದು ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ , ನ್ಯಾಯಾಲಯದ ನಿರ್ದೇಶನದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, 2017ರ ಜ.7, 2018ರ ಜ.12 ಮತ್ತು 2019ರ ಜು.3ರಂದು ಇಂದಿರಾನಗರದ 100 ಅಡಿ ರಸ್ತೆಯಲ್ಲಿರುವ ಟಿಪ್ಲರ್ ಬಾರ್ ಆಂಡ್ ರೆಸ್ಟೋರೆಂಟ್ ದಿಢೀರ್ ಭೇಟಿ ನೀಡಿ ಶಬ್ದ ಮಾಲಿನ್ಯದ ಪ್ರಮಾಣವನ್ನು ಅಳತೆ ಮಾಡಲಾಯಿತು ಎಂದು ಹೇಳಿದ್ದಾರೆ.
ಶಬ್ದ ಮಾಲಿನ್ಯದೊಂದಿಗೆ ಬಾರ್ ಮಾಲೀಕರು ಕಟ್ಟಡ ಬೈಲಾಗಳ ಉಲ್ಲಂಘನೆಯನ್ನೂ ಮಾಡಿದ್ದಾರೆ. ಹಾಗಾಗಿ ಜು.6ರಂದೇ ಕೆಎಂಸಿ ಕಾಯಿದೆ ಸೆಕ್ಷನ್ 321(1) ಮತ್ತು (2) ಪ್ರಕಾರ ನೋಟಿಸ್ ನೀಡಲಾಗಿದೆ. ನಂತರ ಜು.12ಕ್ಕೆ ಬಾರ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕೆಎಂಸಿ ಕಾಯಿದೆ ಅಡಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ