“ಬಿ’ ಖಾತಾ ಆಸ್ತಿಗಳಿಗೆ “ಎ’ ಖಾತಾ?


Team Udayavani, Feb 24, 2021, 11:36 AM IST

“ಬಿ’ ಖಾತಾ ಆಸ್ತಿ ಗಳಿಗೆ “ಎ’ ಖಾತಾ?

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡುವ ಪ್ರಸ್ತಾವನೆಗೆ ಸರ್ಕಾರ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ.

ಕೋವಿಡ್ ಸೋಂಕು ಸೃಷ್ಟಿಸಿರುವ ಆರ್ಥಿಕ ಸಂಕಷ್ಟದಿಂದಾಗಿ ಪಾಲಿಕೆ ಮತ್ತು ಸರ್ಕಾರದ ಆದಾಯ ಕುಸಿದಿದ್ದು, ವಿವಿಧ ಆದಾಯ ಮೂಲಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಪಾಲಿಕೆ ಆದಾಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯ ನಿರ್ದಿಷ್ಟ ಪ್ರದೇಶದಲ್ಲಿ ಜಾಹೀರಾತು ನೀಡುವ ಬಗ್ಗೆ ಸಹ ಚರ್ಚೆ ನಡೆದಿದೆ. ಇದೇ ಸಂದರ್ಭದಲ್ಲಿ ಬಿ ಖಾತಾದಿಂದ ಎ ಖಾತಾ ವರ್ಗಾವಣೆಗೆ ಅವಕಾಶ ನೀಡುವ ನಿಟ್ಟಿನಲ್ಲೂ ನಗರಾಭಿವೃದ್ಧಿ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆದಿದೆ.  ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಅವರೊಂದಿಗೆ ಬಿ ಖಾತಾದಿಂದ ಎ ಖಾತಾ ನೀಡುವ ಬಗ್ಗೆ ವಿಸ್ತೃತವಾದ ಚರ್ಚೆ ಮಾಡಿದ್ದಾರೆ. ಈ ವಿಷಯವನ್ನು ಸರ್ಕಾರ ಈ ಬಾರಿ ಗಂಭೀರವಾಗಿ ಪರಿಗಣಿಸಿದೆ ಎಂದು ಮೂಲಗಳು “ಉದಯವಾಣಿಗೆ’ ತಿಳಿಸಿವೆ.

ಇತ್ತೀಚೆಗೆ ಪಾಲಿಕೆಯ 2021-22ನೇ ಸಾಲಿನ ಬಜೆಟ್‌ ಸಂಬಂಧ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ಗುಪ್ತ ಹಾಗೂ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಪಾಲಿಕೆಯ 13ಕ್ಕೂ ಹೆಚ್ಚು ಜನ ಮಾಜಿ ಮೇಯರ್‌ಗಳೊಂದಿಗೆ ಚರ್ಚೆ ನಡೆಸಿದ್ದರು. ಈ ವೇಳೆ ಹಲವು ಮಾಜಿ ಮೇಯರ್‌ಗಳು ಬಿ ಖಾತಾದಿಂದ ಎ ಖಾತಾ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಇದರಿಂದ ಪಾಲಿಕೆಗೆ ಆದಾಯ ಬರಲಿದೆ. ಈಗಾಗಲೇ ಪಾಲಿಕೆಯ ಕೌನ್ಸಿಲ್‌ ಸಭೆಯಲ್ಲೂ ಈ ವಿಷಯದ ಬಗ್ಗೆ ನಿರ್ಣಯ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಇದಕ್ಕೆ ಅನುಮೋದನೆ ಸಿಗುವುದಷ್ಟೇ ಬಾಕಿ ಇದೆ. ಈ ಪ್ರಸ್ತಾವನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಇದನ್ನು ಪಾಲಿಕೆ ಅಧಿಕಾರಿಗಳು ಸರ್ಕಾರದ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಬಿಬಿಎಂಪಿಯು “ಬಿ’ ಖಾತಾ ಆಸ್ತಿಗಳಿಗೆ “ಎ’ ಖಾತೆ ನೀಡಿದರೆ, ಮನೆ ಕಟ್ಟಲು ಬ್ಯಾಂಕ್‌ ಸಾಲ, ನಕ್ಷೆ ಮಂಜೂರಾತಿ, ವಾಸಯೋಗ್ಯ ಪ್ರಮಾಣಪತ್ರ ಪಡೆಯಲು ಅನುಕೂಲವಾಗಲಿದೆ.

ಅಂದಾಜು 1,500 ಕೋಟಿ ರೂ. ಆದಾಯ: ಬಿ ಖಾತಾ ವ್ಯಾಪ್ತಿಯಲ್ಲಿರುವ ಆಸ್ತಿಗೆ ಎ ಖಾತಾ ನೀಡುವುದಕ್ಕೆ ಅನುಮೋದನೆ ಸಿಕ್ಕರೆ, ಪಾಲಿಕೆಗೆ ಅಂದಾಜು 1,500 ಕೋಟಿ ರೂ.ಗೂ ಹೆಚ್ಚು ಆದಾಯ ಬರಲಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು. ಆದರೆ, ಬಿ ಖಾತಾ ದಿಂದ ಎ ಖಾತಾ ನೀಡುವ ಸಂದರ್ಭದಲ್ಲಿ ಯಾವ ರೀತಿಯಲ್ಲಿ ದರ ನಿಗದಿ ಮಾಡಲಾಗುತ್ತದೆ ಎನ್ನುವ ಆಧಾರದ ಮೇಲೆ ಆದಾಯ ಎಷ್ಟು ಎನ್ನುವುದು ಸ್ಪಷ್ಟವಾಗಲಿದೆ. ಆದರೆ, ಈ ನಿರ್ಣಯದಿಂದ ಪಾಲಿಕೆಗೆ ಆರ್ಥಿಕ ವಿಚಾರದಲ್ಲಿ ಹೊಸ ಆದಾಯ ಮೂಲ ಸೃಷ್ಟಿ ಆಗುವುದರ ಜೊತೆಗೆ ಲಾಭವೇ ಆಗಲಿದೆ ಎನ್ನುತ್ತಾರೆ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು.

ಏನಿದು ಬಿ ಖಾತಾ? :

ಪಾಲಿಕೆ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘನೆ ಮಾಡಿ ಹಾಗೂ ನಿರ್ದಿಷ್ಟ ಪ್ರಾಧಿಕಾರದಿಂದ ನಕ್ಷೆ ಮಂಜೂರಾತಿ ಪಡೆಯದೆ ಬಡಾವಣೆ ಹಾಗೂ ಕಟ್ಟಡಗಳನ್ನು ನಿರ್ಮಾಣ ಮಾಡಿರುವ ನಿರ್ದಿಷ್ಟ ಆಸ್ತಿಯನ್ನು ಬಿ ಖಾತಾ ಎಂದು ಪರಿಗಣಿಸಲಾಗುತ್ತದೆ.

ನಗರದಲ್ಲಿ ಅನುಮತಿ ಇಲ್ಲದೆ ನಿರ್ಮಿಸಲಾದ ಲೇಔಟ್‌ಗಳು, ಕಂದಾಯ ಭೂಮಿ ಹಾಗೂ ಭೂಪರಿವರ್ತನೆಯಾಗದ ಪ್ರದೇಶದಲ್ಲಿ ನಿರ್ಮಿಸಿದ ಕಟ್ಟಡಗಳ ಮಾಹಿತಿಯನ್ನು “ಬಿ’ ರಿಜಿಸ್ಟರ್‌ ಎಂದುಪ್ರತ್ಯೇಕಿಸಿ ಮಾಹಿತಿ ದಾಖಲಿಸಲಾಗುತ್ತಿದೆ. ತೆರಿಗೆಸಂಗ್ರಹ ಮಾಡುವ ಉದ್ದೇಶದಿಂದ ಈ ಪದ್ಧತಿ ಜಾರಿ ಮಾಡಲಾಗಿದ್ದು, ಕಾನೂನಿನಲ್ಲಿ ಮಾನ್ಯತೆ ನೀಡಿಲ್ಲ.ಪಾಲಿಕೆಯಿಂದ “ಬಿ’ ಖಾತಾ ಸ್ವತ್ತುಗಳಿಗೆ “ಎ’ ಖಾತೆ ನೀಡಿದರೆ, ಮಾಲೀಕರು ಪಾಲಿಕೆಗೆ ಸುಧಾರಣಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇದು ಪಾಲಿಕೆಯ ಆದಾಯ ಮೂಲ ಹೆಚ್ಚಾಗಲು ಸಹಕಾರಿ ಆಗಲಿದೆ. 2018ರ ಆ.ನಲ್ಲಿ ನಡೆದ ಪಾಲಿಕೆಯ ಕೌನ್ಸಿಲ್‌ ಸಭೆಯಲ್ಲಿ “ಎ’ ಖಾತೆ ನೀಡುವ ಸಂಬಂಧ ನಿರ್ಣಯ ತೆಗೆದುಕೊಂಡು ಸರ್ಕಾರಕ್ಕೆ ಪಾಲಿಕೆ ಪ್ರಸ್ತಾವನೆ ಸಲ್ಲಿಕೆ ಮಾಡಿತ್ತು. ಕಾನೂನಿನಲ್ಲಿ “ಬಿ’ ಖಾತಾವನ್ನು “ಎ’ ಖಾತಾವನ್ನಾಗಿ ಪರಿವರ್ತಿಸಲು ಅವಕಾಶವಿಲ್ಲ.

ಹೀಗಾಗಿ, ಸುಧಾರಣಾ ಶುಲ್ಕ ಕಟ್ಟಿಸಿಕೊಂಡು “ಎ’ ಖಾತೆ ನೀಡಲು ನಿಯಮಗಳನ್ನು ರೂಪಿಸಬೇಕು ಎನ್ನುವ ವಿಷಯ ಹಲವು ವರ್ಷಗಳಿಂದ ಚರ್ಚೆ ಆಗುತ್ತಿದೆ. ನಗರದಲ್ಲಿ ಅಂದಾಜು 3.80ರಿಂದ 4 ಲಕ್ಷದ ವರೆಗೆ ಬಿ ಖಾತಾ ಹೊಂದಿರುವ ಸ್ವತ್ತುಗಳಿದ್ದು, ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳು, ಅನಧಿಕೃತ ಬಡಾವಣೆಗಳಲ್ಲಿರುವ ನಿವೇಶನಗಳು, ಸಿಸಿ, ಒಸಿ ಪಡೆಯದ ಕಟ್ಟಡಗಳು ಮತ್ತು ವಸತಿ ಸಮುಚ್ಛಯಗಳಲ್ಲಿನ ಮನೆಗಳಿಗೆ “ಬಿ’ ಖಾತಾ ನೀಡಲಾಗಿದೆ. ಇದೀಗ ಬಿ ಖಾತಾಗಳಿಗೆ ಎ ಖಾತಾ ನೀಡುವ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

ಬಿ ಖಾತಾ ಆಸ್ತಿಗಳನ್ನು ಎ ಖಾತಾ ಮಾಡುವ ಪ್ರಸ್ತಾವನೆ ಸಂಬಂಧ ಸರ್ಕಾರದ ಕಂದಾಯ ಇಲಾಖೆ ಸಚಿವರು ಸಭೆ ನಡೆಸಿದ್ದು, ಪ್ರಸ್ತಾವನೆ ಬಗ್ಗೆ ಹಲವು ಸುತ್ತಿನ ಸಭೆ ನಡೆದಿದೆ. ಈ ಬಾರಿ ಖಾತಾ ಪ್ರಸ್ತಾವನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಾಗುವುದು. -ಎನ್‌. ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.