ಪಾಲಿಕೆ ಆಡಳಿತ ವರದಿ ಮಂಡನೆ 18ರಂದು


Team Udayavani, Sep 14, 2019, 3:08 AM IST

bbmp2

ಬೆಂಗಳೂರು: ನಾಲ್ಕು ವರ್ಷಗಳ ಬಳಿಕ ಇದೇ ಸೆ.18ರಂದು ಆಡಳಿತ ವರದಿ ಮಂಡನೆ ಮಾಡಲು ಉಪಮೇಯರ್‌ ಭದ್ರೇಗೌಡ ನಿರ್ಧರಿಸಿದ್ದಾರೆ. ಒಟ್ಟು 33 ಇಲಾಖೆಗಳನ್ನು ಒಳಗೊಂಡಿರುವ ಬಿಬಿಎಂಪಿ ವಾರ್ಷಿಕ ಆಡಳಿತ ವರದಿಯನ್ನು ಮಂಡಿಸಲಿದ್ದು, ವರದಿಯಲ್ಲಿ ಪಾಲಿಕೆಯ ಸಿಬ್ಬಂದಿ ಕಾರ್ಯವೈಖರಿ, ಇಲಾಖಾವಾರು ಸಿಬ್ಬಂದಿ ವಿವರ, ಸಂಬಳ, ಆಡಳಿತಾತ್ಮಕ ವೆಚ್ಚ, ಹೊಸ ಯೋಜನೆಗಳ ವಿವರ ಮತ್ತು ಹೆಚ್ಚುವರಿ ಖರ್ಚಿನ ಮಾಹಿತಿ ಮಂಡಿಸಲಾಗುತ್ತದೆ. ಬಳಿಕ ಈ ವರದಿ ಆಧರಿಸಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಪ್ರತಿ ವರ್ಷ ವಿಶೇಷ ಕೌನ್ಸಿಲ್‌ ಸಭೆ ಮೂಲಕ ವಾರ್ಷಿಕ ಆಡಳಿತ ವರದಿ ಮಂಡಿಸುವುದು ಉಪಮೇಯರ್‌ ಕರ್ತವ್ಯವಾಗಿದ್ದು, ಈ ಹಿಂದಿನ ಎಂಟು ಉಪಮಹಾಪೌರರು ವರದಿ ಮಂಡಿಸಿಲ್ಲ. ವಿಶೇಶ ಕೌನ್ಸಿಲ್‌ ಸಭೆಗೆ ದಿನಾಂಕ ನಿಗದಿಪಡಿಸುವಂತೆ ಕೋರಿ ಉಪಮೇಯರ್‌ ಭದ್ರೇಗೌಡ, ಮೇಯರ್‌ಗೆ ಪತ್ರ ಬರೆದಿದ್ದು, ಸೆ.18ರಂದು ಸಭೆ ನಡೆಸಲು ಮೇಯರ್‌ ಸೂಚಿಸಿದ್ದಾರೆ. ಇನ್ನು ಸಭೆಯಲ್ಲಿ ಮಂಡಿಸಲು ಅಗತ್ಯವಿರುವ ಮಾಹಿತಿ ಕಲೆಹಾಕಲು ಅಧಿಕಾರಿಗಳಿಗೆ ಉಪಮೇಯರ್‌ ಸೂಚಸಿದ್ದು, ಮೂರು ವರ್ಷಗಳ ವರದಿ ಬಿಡುಗಡೆ ಮಾಡುವುದಾಗಿ ಹಿರಿಯ ಅಧಿಕಾರಿ ತಿಳಿಸಿದರು.

ವರದಿ ಮಂಡಿಸಲು ವಿರೋಧ: ಆಡಳಿತ ವರದಿ ಮಂಡನೆ ತಪ್ಪಿಸಲು ಕೆಲವರು ಭಾರೀ ಪ್ರಯತ್ನ ನಡೆಸಿದ್ದರು. ಆದರೆ, ಭದ್ರೇಗೌಡ ಅವರು ಬಿಬಿಎಂಪಿ ಕೌನ್ಸಿಲ್‌ ಕಾರ್ಯದರ್ಶಿ ಪಲ್ಲವಿ ಅವರಿಂದ ಕಾನೂನು ಅಭಿಪ್ರಾಯ ಪಡೆದಿದ್ದಾರೆ. ಮೇಯರ್‌ ಅವಧಿ ಪೂರ್ಣಗೊಳ್ಳುವ ಕೊನೆ ತಿಂಗಳಿನಲ್ಲಿ ಆಡಳಿತ ವರದಿ ಮಂಡಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಪಾಲಿಕೆ ಕಾನೂನು ಕೋಶದ ಮುಖ್ಯಸ್ಥ ದೇಶಪಾಂಡೆ ಅಭಿಪ್ರಾಯ ನೀಡಿದ್ದಾರೆ. ಇದೇ ವೇಳೆ ಹೊಸ ಮೇಯರ್‌ ಆಯ್ಕೆಗೆ ಚುನಾವಣೆ ಘೋಷಣೆಯಾದರೂ ಹಾಲಿ ಉಪಮೇಯರ್‌ ಆಡಳಿತ ವರದಿ ಮಂಡನೆ ಮಾಡಬಹುದು ಎಂದು ದೇಶಪಾಂಡೆ ತಿಳಿಸಿದ್ದಾರೆ.

ನಿವೃತ್ತಿ ಪಡೆಯದ ದೇಶಪಾಂಡೆ!: ಅವಧಿ ಪೂರ್ಣಗೊಂಡರೂ ಕಾನೂನು ಕೋಶದ ಮುಖ್ಯಸ್ಥರಾಗಿ ದೇಶಪಾಂಡೆ ಮುಂದುವರಿಯುತಿದ್ದು, ಕೆಲವರ ಒತ್ತಡಕ್ಕೆ ಮಣಿದು ಕಾನೂನು ಸಲಹೆ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕಳೆದ ತಿಂಗಳು ಸೇವಾ ಅವಧಿ ಪೂರ್ಣಗೊಳಿಸಿದ ದೇಶಪಾಂಡೆ, ಈಗಲೂ ಪಾಲಿಕೆ ಕಾನೂನು ವಿಭಾದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತಿದ್ದಾರೆ.

ವರದಿ ಮಂಡಿಸಿರುವುದು ಒಂದೇ ಬಾರಿ: ಬಿಬಿಎಂಪಿಯ ಇತಿಹಾಸದಲ್ಲಿ ಈವರೆಗೆ ಕೇವಲ ಒಂದು ಬಾರಿ ಮಾತ್ರ ಆಡಳಿತ ವರದಿ ಮಂಡಿಸಲಾಗಿದೆ. 2015-16ನೇ ಸಾಲಿನಲ್ಲಿ ಅಂದಿನ ಉಪಮೇಯರ್‌ ಹೇಮಲತಾ ಗೋಪಾಲಯ್ಯ ಬಿಬಿಎಂಪಿಯ ಮೊದಲ ಆಡಳಿತ ವರದಿ ಸಲ್ಲಿಸಿದ ಖ್ಯಾತಿ ಹೊಂದಿದ್ದಾರೆ. ಇದನ್ನು ಬಿಟ್ಟರೆ ಈವರೆಗೆ ಯಾರೂ ಕೂಡ ಆಡಳಿತ ವರದಿ ಸಲ್ಲಿಸಿಲ್ಲ.

ಎಲ್ಲಾ ಬ್ಯಾಂಕ್‌ಗಳಲ್ಲಿ ವಾರ್ಷಿಕ ವರದಿ ಬಿಡುಗಡೆ ಮಾಡುವಂತೆ ಬಿಬಿಎಂಪಿಯಲ್ಲೂ ಆಡಳಿತ ವರದಿ ಮಂಡಿಸಬೇಕು. ಅದು ಉಪಮೇಯರ್‌ ಜವಾಬ್ದಾರಿ. ನಂತರ ವರದಿ ಆಧರಿಸಿ ಕೌನ್ಸಿಲ್‌ ಸಭೆಯಲ್ಲಿ ಚರ್ಚಿಸಬೇಕು. ಯಾರೇ ವಿರೋಧ ವ್ಯಕ್ತಪಡಿಸಿದರೂ ಸೆ.18ರಂದು ಆಡಳಿತ ವರದಿ ಪ್ರಸ್ತುತಪಡಿಸುತ್ತೇನೆ.
-ಭದ್ರೇಗೌಡ, ಉಪಮೇಯರ್‌

ಉಪಮೇಯರ್‌ ಆಡಳಿತ ವರದಿ ಮಂಡಿಸುವುದು ಅವರ ಹಕ್ಕು. ಇದರಲ್ಲಿ ಯಾರೂ ಹಸ್ತಕ್ಷೇಪ ಮಾಡುವಂತಿಲ್ಲ. ಪ್ರತಿ ವರ್ಷ ಈ ರೀತಿ ವರದಿ ಮಂಡನೆಯಾಗಿ ಸಭೆಯಲ್ಲಿ ಚರ್ಚೆಗೆ ಒಳಪಡಿಸುವುದು ಅತ್ಯಗತ್ಯ.
-ಗಂಗಾಂಬಿಕೆ, ಮೇಯರ್‌

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.