ವರ್ಗಾವಣೆ ಬೈಲಾ ತಂದ ಪಾಲಿಕೆ


Team Udayavani, Feb 16, 2020, 3:07 AM IST

bbmp3

ಬೆಂಗಳೂರು: ಸರ್ಕಾರದಿಂದ ಎರವಲು ಸೇವೆ ಮೇಲೆ ಪಾಲಿಕೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಇನ್ನುಮುಂದೆ ಪಾಲಿಕೆಯ ಖಾಲಿ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಬೇಕು. ಪಾಲಿಕೆ ಆಯ್ದ ಹುದ್ದೆಗಳಿಗೆ ಸರ್ಕಾರದಿಂದ ಎರವಲು ಸೇವೆ ಆಧಾರದಲ್ಲಿ ನೌಕರರು ನೇಮಕವಾಗುತ್ತಿದ್ದು, ಇದರಿಂದ ಪಾಲಿಕೆ ಮೂಲ ಸಿಬ್ಬಂದಿ ಕರ್ತವ್ಯ ಹಾಗೂ ಬಡ್ತಿಗೆ ಅಡ್ಡಿಯಾಗುತ್ತಿದೆ.

ಇದು ಕಾನೂನು ಸಂಘರ್ಷಕ್ಕೆ ಎಡೆಮಾಡಿಕೊಡುವುದು ತಪ್ಪಿಸಲು ಪಾಲಿಕೆಯು ನೌಕರರ ವರ್ಗಾವಣೆ ಬೈಲಾ ರಚಿಸಿದೆ. ಬೈಲಾದಲ್ಲಿ ಎರವಲು ಸೇವೆಯ ಮೇಲೆ ಕೆಲಸ ಮಾಡಲು ಬರುವವರು ನಿರ್ದಿಷ್ಟ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ಅನುºಕುಮಾರ್‌, ಎರವಲು ಸೇವೆ ಮೇಲೆ ಪಾಲಿಕೆ ಕೆಲಸ ಮಾಡಲು ಇಚ್ಛಿಸುವ ನೌಕರರು ಖಾಲಿ ಹುದ್ದೆಗಳಿಗಷ್ಟೇ ಅರ್ಜಿ ಸಲ್ಲಿಸಬೇಕು ಎಂಬ ನಿಯಮ ಸೇರ್ಪಡೆ ಮಾಡಿ ಮಾರ್ಗಸೂಚಿ ರೂಪಿಸಲಾಗಿದೆ.

ಆಡಳಿತಾತ್ಮಕ ಸುಧಾರಣೆ ಹಾಗೂ ಗೊಂದಲಗಳನ್ನು ತಪ್ಪಿಸುವ ಉದ್ದೇಶದಿಂದ ವರ್ಗಾವಣೆ ನೀತಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಶಿಫಾರಸು ಆಧಾರದಲ್ಲಿ ವರ್ಗಾವಣೆ ಮಾಡುವುದಕ್ಕೆ ಇತ್ತೀಚೆಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತ್ತು.

ವರ್ಗಾವಣೆ ನೀತಿ ಮುಖ್ಯಾಂಶಗಳು: ಬಿಬಿಎಂಪಿಯ ಕಾಯಂ ಅಧಿಕಾರಿ ಅಥವಾ ನೌಕರರಿಗೆ, ಸೇವಾ ಹಿರಿತನ ಹೊಂದಿರುವವರಿಗೆ ವರ್ಗಾವಣೆ ವೇಳೆ ಆದ್ಯತೆ ಮಂಜೂರಾದ ಹುದ್ದೆಗಳಲ್ಲಿ ವರ್ಗಾವಣೆ ಶೇ.15 ಮೀರದಂತೆ ನೋಡಿಕೊಳ್ಳುವುದು ವರ್ಗಾವಣೆ ನೀತಿಯಲ್ಲಿ ಸೇವಾ ಅವಧಿಯನ್ನು ನಿಗದಿ ಮಾಡಿದ್ದು, ಈ ಅವಧಿಗೆ ಮುನ್ನ ವರ್ಗಾವಣೆ ಮಾಡಲು ಅವಕಾಶ ಇರುವುದಿಲ್ಲ

ವಲಯವಾರು ನೌಕರರ ಅದಾಲತ್‌
ಬೆಂಗಳೂರು: ಬಿಬಿಎಂಪಿ ಸಿಬ್ಬಂದಿಗೆ ನಿವೃತ್ತಿ ದಿನದಂದೇ ಪಾಲಿಕೆಯಿಂದ ನೀಡುವ ಸೌಲಭ್ಯಗಳು ಸರಳವಾಗಿ ಸಿಗುವಂತೆ ಮಾಡುವ ಉದ್ದೇಶದಿಂದ ವಲಯವಾರು “ನೌಕರರ ಅದಾಲತ್‌’ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ಅನುºಕುಮಾರ್‌ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೃತ್ತಿ ಹೊಂದಿರುವ ನೌಕರರು ತಮ್ಮ ಸೇವೆ ಪಡೆದುಕೊಳ್ಳಲು ಪಾಲಿಕೆಯ ಕೇಂದ್ರ ಕಚೇರಿಗೆ ತಿಂಗಳು ಗಟ್ಟಲೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ, ನೌಕರರ ಅದಾಲತ್‌ ನಡೆಸಲಾಗುತ್ತಿದೆ ಎಂದು ಹೇಳಿದರು.

ಮೊದಲ ಹಂತದಲ್ಲಿ ಪಾಲಿಕೆ ಎಂಟು ವಲಯದ “ಡಿ’ ಗ್ರೂಪ್‌ನ ನೌಕರರ ಅದಾಲತ್‌ ನಡೆಸಲಾಗಿದ್ದು, ಅದಾಲತ್‌ನಲ್ಲಿ 1,917 “ಡಿ’ ಗ್ರೂಪ್‌ ಸಿಬ್ಬಂದಿಯ ಎಚ್‌ಆರ್‌ಎಂಎಸ್‌, ವೈದ್ಯಕೀಯ ಸೌಲಭ್ಯ, ಸೇವಾವಧಿ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.ಇನ್ನು ಮುಂದಿನ ದಿನಗಳಲ್ಲಿ “ಬಿ’ ಹಾಗೂ “ಸಿ’ ಗ್ರೂಪ್‌ ನೌಕರರ ಅದಾಲತ್‌ ನಡೆಸುವ ಚಿಂತನೆ ಇದೆ ಎಂದರು.

ಮುಂದಿನ ಎರಡು ಅಥವಾ ಮೂರು ತಿಂಗಳು ಈ ರೀತಿ ಅದಾಲತ್‌ ನಡೆಸಿದರೆ. ಬಿಬಿಎಂಪಿಯ ಎಲ್ಲ ಅಧಿಕಾರಿ ಸಿಬ್ಬಂದಿಗೆ ಸಂಬಂಧಿಸಿದ ಆಡಳಿತಾತ್ಮಕ ಸಮಸ್ಯೆ ಪರಿಹಾರಗೊಳ್ಳಲಿದೆ. ಅಲ್ಲದೆ, ಇದಕ್ಕೆ ಸಂಬಂಧಿಸಿದ ಮಾಹಿತಿ ಆನ್‌ಲೈನ್‌ನಲ್ಲಿ ಲಭ್ಯವಾಗಲಿವೆ ಎಂದು ಮಾಹಿತಿ ನೀಡಿದರು.

ನಿಗದಿತ ಕನಿಷ್ಠ ಸೇವಾವಧಿ
ನೌಕರರು ಸೇವಾವಧಿ
ಎ ಮತ್ತು ಬಿ ಗ್ರೂಪ್‌ 2 ವರ್ಷ
ಸಿ ಗ್ರೂಪ್‌ 3 ವರ್ಷ
ಡಿ ಗ್ರೂಪ್‌ 5 ವರ್ಷ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.