5 ಸಾವಿರ ಕೋಟಿ ರೂ. ಬಿಬಿಎಂಪಿ ಬಜೆಟ್‌?


Team Udayavani, Dec 13, 2022, 11:47 AM IST

5 ಸಾವಿರ ಕೋಟಿ ರೂ. ಬಿಬಿಎಂಪಿ ಬಜೆಟ್‌?

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷ ಮುಕ್ತಾಯಕ್ಕೆ ಇನ್ನು ಮೂರೂವರೆ ತಿಂಗಳು ಮಾತ್ರ ಉಳಿದಿವೆ. ಅಷ್ಟರೊಳಗೆ 2023-24ನೇ ಸಾಲಿನ ಬಜೆಟ್‌ ಸಿದ್ಧಪಡಿಸಲು ಬಿಬಿಎಂಪಿ ಹಣಕಾಸು ವಿಭಾಗ ಸಿದ್ಧತೆ ನಡೆಸಿದ್ದು, ಈ ಬಾರಿ ಬಜೆಟ್‌ ಗಾತ್ರ 5,500 ಕೋಟಿ ರೂ.ಗೆ ನಿಗದಿ ಮಾಡಲು ಚರ್ಚಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಯೋಜನೆಗಳು, ನಿರ್ವಹಣಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ 2023-24ನೇ ಸಾಲಿನ ಬಜೆಟ್‌ ಸಿದ್ಧಪಡಿಸಲು ಸಿದ್ಧತೆ ನಡೆಸಲಾಗಿದೆ. ಸದ್ಯ ವಿವಿಧ ವಿಭಾಗಗಳಿಂದ ಮುಂದಿನ ವರ್ಷ ಕೈಗೊಳ್ಳಬೇಕಾದ ಯೋಜನೆಗಳು, ಅದಕ್ಕಾಗುವ ವೆಚ್ಚಗಳ ಕುರಿತಂತೆ ಮಾಹಿತಿ ನೀಡುವಂತೆ ಹಣಕಾಸು ವಿಭಾಗ ಕೋರಿದೆ.

ಅದರ ಜತೆಗೆ ಬಜೆಟ್‌ ಗಾತ್ರ ಎಷ್ಟಿರಬೇಕು ಎಂಬುದರ ಕುರಿತು ಹಣಕಾಸು ವಿಭಾಗದ ಅಧಿಕಾರಿಗಳು ಈಗಾಗಲೇ ಚರ್ಚೆ ನಡೆಸಿದ್ದು, ಸರ್ಕಾರಗಳ ಅನುದಾನ ಹೊರತುಪಡಿಸಿ ಬಿಬಿಎಂಪಿ ಆದಾಯಕ್ಕೆ ತಕ್ಕಂತೆ ಬಜೆಟ್‌ ಗಾತ್ರ ನಿಗದಿ ಮಾಡಲು ನಿರ್ಧರಿಸಲಾಗಿದೆ.ಅದರಂತೆ ಸದ್ಯ 5ರಿಂದ 5,500 ಕೋಟಿ ರೂ. ಮೊತ್ತದ ಬಜೆಟ್‌ ಮಂಡನೆಗೆ ಚಿಂತನೆ ನಡೆಸಲಾಗಿದೆ.

5 ಸಾವಿರ ಕೋಟಿ ರೂ. ಆದಾಯ: ಬಿಬಿಎಂಪಿಗೆ ಸಂಬಂಧಿಸಿದಂತೆ ಆಸ್ತಿ ತೆರಿಗೆ ಅತಿ ದೊಡ್ಡ ಆದಾಯದ ಮೂಲ. ಪ್ರಸಕ್ತ ಸಾಲಿನಲ್ಲಿ 4 ಸಾವಿರ ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗುವ ಕುರಿತು ಗುರಿ ಹೊಂದಲಾಗಿದೆ. ಆದರೆ, ಈವರೆಗೆ 2,600 ಕೋಟಿ ರೂ. ಮಾತ್ರ ತೆರಿಗೆ ಸಂಗ್ರಹವಾಗಿದೆ. ಅದನ್ನು ಗಮನಿಸಿ 2023-24ನೇ ಸಾಲಿಗೂ 4 ಸಾವಿರ ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹದ ಗುರಿ ನಿಗದಿ ಮಾಡಿಕೊಳ್ಳಲಾಗುತ್ತಿದೆ. ಅದರ ಜತೆಗೆ ಮಾರುಕಟ್ಟೆ ಶುಲ್ಕ, ಅಭಿವೃದ್ಧಿ ಶುಲ್ಕ ಸೇರಿ ಇನ್ನಿತರ ಮೂಲಗಳಿಂದ 1 ಸಾವಿರ ಕೋಟಿ ರೂ. ಆದಾಯದ ನಿರೀಕ್ಷೆ ಹೊಂದಲಾಗಿದೆ.

ನಿರ್ವಹಣೆಗಷ್ಟೇ ಬಜೆಟ್‌ ಮೀಸಲು: ಬಿಬಿಎಂಪಿಯ ಆದಾಯ 5 ಸಾವಿರ ಕೋಟಿ ರೂ. ಮೀರದ ಕಾರಣ, ಹೆಚ್ಚುವರಿ ಆದಾಯದ ನಿರೀಕ್ಷೆಯನ್ನಿಟ್ಟುಕೊಳ್ಳದೇ ಬಜೆಟ್‌ ಗಾತ್ರ ನಿಗದಿ ಮಾಡಲು ನಿರ್ಧರಿಸಲಾಗಿದೆ. ಅದರ ಪ್ರಕಾರ ಆದಾಯಕ್ಕೆ ತಕ್ಕಂತೆ 5,500 ಕೋಟಿ ರೂ. ಮೊತ್ತದ ಬಜೆಟ್‌ ಸಿದ್ಧಪಡಿಸಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಘನತ್ಯಾಜ್ಯ ನಿರ್ವಹಣೆ, ರಸ್ತೆ ದುರಸ್ತಿ, ಅಭಿವೃದ್ಧಿ, ವೇತನ ಪಾವತಿ ಸೇರಿ ಇನ್ನಿತರ ನಿರ್ವಹಣಾ ಕಾಮಗಾರಿ, ವೆಚ್ಚವನ್ನು ಮಾತ್ರ ಬಜೆಟ್‌ನಲ್ಲಿ ಸೇರಿಸಲಾಗುತ್ತದೆ.

ಹೊಸ ಯೋಜನೆಗಳಿಗೆ ಸರ್ಕಾರದ ಅನುದಾನ: ಬಿಬಿಎಂಪಿ ಹಣಕಾಸು ವಿಭಾಗ 2023-24ನೇ ಸಾಲಿನ ಬಜೆಟ್‌ನಲ್ಲಿ ಯಾವುದೇ ಹೊಸ ಯೋಜನೆಗಳನ್ನು ಘೋಷಿಸದಿರುವ ಬಗ್ಗೆಯೂ ಚರ್ಚಿಸಿದೆ. ರಾಜ್ಯ ಅಥವಾ ಕೇಂದ್ರ ಸರ್ಕಾರ ಅನುದಾನ ನೀಡಿದರಷ್ಟೇ ಹೊಸ ಯೋಜನೆ ಘೋಷಿಸುವ ಕುರಿತು ನಿರ್ಧರಿಸಲಾಗಿದೆ. ಅಲ್ಲದೆ, 2022-23ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಬಿಬಿಎಂಪಿಗಾಗಿಯೇ 6 ಸಾವಿರ ಕೋಟಿ ರೂ. ಅಮೃತ ನಗರೋತ್ಥಾನ ಅನುದಾನ ನೀಡಿದೆ.

ಹೀಗಾಗಿ 2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ 500ರಿಂದ 1 ಸಾವಿರ ಕೋಟಿ ರೂ. ಅನುದಾನ ಸಿಗುವ ನಿರೀಕ್ಷೆ ಹೊಂದಲಾಗಿದೆ. ಅದರಲ್ಲಿ ಬೀದಿ ದೀಪ ನಿರ್ವಹಣೆಗೆ 80 ಕೋಟಿ ರೂ., ಘನತ್ಯಾಜ್ಯ ನಿರ್ವಹಣೆಗೆ 150 ಕೋಟಿ ರೂ. ನೀಡಲಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ನೀಡುವ ಅನುದಾನ ನಿರ್ವಹಣಾ ವೆಚ್ಚಕ್ಕಷ್ಟೇ ಮೀಸಲಾಗುತ್ತದೆ. ಒಂದು ವೇಳೆ ಹೊಸ ಯೋಜನೆಗಳನ್ನು ಘೋಷಿಸಬೇಕೆಂದರೆ ಸರ್ಕಾರ ಹೆಚ್ಚುವರಿ ಅನುದಾನ ನೀಡಿದರಷ್ಟೇ ಮುಂದಿನ ಯೋಚನೆ ಮಾಡಲು ನಿರ್ಧರಿಸಲಾಗಿದೆ.

ಈ ಬಾರಿಯ ಬಜೆಟ್‌ ಸಿದ್ಧಪಡಿಸುವ ವೇಳೆ ಹಾಸಿಗೆ ಇದ್ದಷ್ಟು ಕಾಲು ಚಾಚಲು ನಿರ್ಧರಿಸಲಾಗಿದೆ. ಹೀಗಾಗಿ ಬಿಬಿಎಂಪಿ ಆದಾಯಕ್ಕೆ ತಕ್ಕಂತೆ ಬಜೆಟ್‌ ಗಾತ್ರ ನಿಗದಿ ಮಾಡಲಾಗುವುದು. ಸದ್ಯ ಬಿಬಿಎಂಪಿಗೆ 4ರಿಂದ 4,500 ಕೋಟಿ ರೂ. ಆದಾಯವಿದೆ. ಅದರಂತೆ 5ರಿಂದ 5,500 ಕೋಟಿ ರೂ. ಬಜೆಟ್‌ ಗಾತ್ರ ನಿಗದಿ ಮಾಡಲಾಗುವುದು. ಜತೆಗೆ ಹೊಸ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಅನುದಾನ ನೀಡಿದರಷ್ಟೇ ಬಜೆಟ್‌ನಲ್ಲಿ ಘೋಷಿಸಲಾಗುವುದು. – ಜಯರಾಮ್‌ ರಾಯಪುರ, ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು)

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.