15ರಂದು ಬಿಬಿಎಂಪಿ ಬಜೆಟ್‌


Team Udayavani, Feb 1, 2019, 6:12 AM IST

bbmp2-copy.jpg

ಬೆಂಗಳೂರು: ಫೆಬ್ರವರಿ ಎರಡನೇ ವಾರದಲ್ಲಿ ಬಜೆಟ್‌ ಮಂಡಿಸಲು ಬಿಬಿಎಂಪಿ ಸಿದ್ಧತೆ ನಡೆಸುತ್ತಿದ್ದು, ಈ ಬಾರಿಯ ಬಜೆಟ್‌ ಮೊತ್ತ 15 ಸಾವಿರ ಕೋಟಿ ರೂ. ತಲುಪುವ ಸಾಧ್ಯತೆಯಿದೆ.

ರಾಜ್ಯ ಸರ್ಕಾರದ ಬಜೆಟ್‌ ಫೆಬ್ರವರಿ 8ರಂದು ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಬಜೆಟ್‌ ಅನ್ನು ಫೆ.15 ಅಥವಾ 18ರಂದು ಮಂಡಿಸಲು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ತೀರ್ಮಾನಿಸಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಬಜೆಟ್‌ಗೆ ಸರ್ಕಾರದಿಂದ ಅನುಮತಿ ಪಡೆಯಲು ನಿರ್ಧರಿಸಲಾಗಿದೆ.

ಪಾಲಿಕೆಯ ಅಧಿಕಾರಿಗಳು ಈಗಾಗಲೇ ಕರಡು ಆಯವ್ಯಯ ಸಿದ್ಧಪಡಿಸಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ರಾಜಧಾನಿಯ ನಾಗರಿಕರನ್ನು ಸೆಳೆಯಲು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಆಡಳಿತ ಮುಂದಾಗಿದೆ.

ಪಾಲಿಕೆಗೆ ಮುಂದಿನ ಮೂರು ವರ್ಷಗಳಿಗೆ ಸರ್ಕಾರ 8 ಸಾವಿರ ಕೋಟಿ ರೂ. ನೀಡಲು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ದಾಖಲೆಯ 15 ಸಾವಿರ ಕೋಟಿ ರೂ. ಮೊತ್ತದ ಬಜೆಟ್‌ ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಸರ್ಕಾರದಿಂದ 8 ಸಾವಿರ ಕೋಟಿ ರೂ. ನೀಡಲು ಅನುಮೋದಿಸಿದ್ದರೂ, ಅದು ಮೂರು ವರ್ಷಗಳಿಗೆ ಸೇರಿ ಬಿಡುಗಡೆಯಾಗಲಿದೆ. ಆ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜಾರಿಗೊಳಿಸಬಹುದಾದ ಯೋಜನೆಗಳನ್ನು ಮಾತ್ರ ಬಜೆಟ್‌ನಲ್ಲಿ ಸೇರ್ಪಡೆಗೊಳ್ಳಲಿವೆ. ಅದನ್ನು ಹೊರತುಪಡಿಸಿ ಪಾಲಿಕೆಯಿಂದಲೂ ಈ ಬಾರಿ ಕೆಲವು ಯೋಜನೆಗಳನ್ನು ಜಾರಿಗೊಳಿಸಲು ನಿರ್ಧರಿಸಿದ್ದು, ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು ಎಂದು ಆಡಳಿತ ಪಕ್ಷದ ನಾಯಕ ಶಿವರಾಜ್‌ ತಿಳಿಸಿದ್ದಾರೆ.

ಸಚಿವರು, ಮೇಯರ್‌, ಉಪಮೇಯರ್‌ಗೆ ಬಂಪರ್‌: ಬಜೆಟ್‌ನಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರ ನಿಧಿ 250 ಕೋಟಿ ರೂ. ಮೀಸಲಿಡಲು ತೀರ್ಮಾನಿಸಲಾಗಿದೆ. ಜತೆಗೆ ಮೇಯರ್‌ಗೆ 150 ಕೋಟಿ ರೂ., ಉಪಮೇಯರ್‌ಗೆ 100 ಕೋಟಿ ರೂ. ಮೀಸಲಿಡಲು ನಿರ್ಧರಿಸಲಾಗಿದೆ. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಆಡಳಿತ ಪಕ್ಷ ನಾಯಕರ ವಾರ್ಡ್‌ಗಳಿಗೆ 25 ಕೋಟಿ ರೂ., ವಿರೋಧ ಪಕ್ಷ ನಾಯಕರ ವಾರ್ಡ್‌ 10 ಕೋಟಿ ರೂ. ಹಾಗೂ ಪಾಲಿಕೆಯ ಜೆಡಿಎಸ್‌ ಪಕ್ಷದ ನಾಯಕರ ವಾರ್ಡ್‌ಗೆ 5 ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಅಬ್ದುಲ್‌ ವಾಜೀದ್‌ ಆಡಳಿತ ಪಕ್ಷದ ನಾಯಕ: ಬಿಬಿಎಂಪಿಯ ಆಡಳಿತ ಪಕ್ಷದ ನಾಯಕರಾಗಿ ಮನೋರಾಯನಪಾಳ್ಯ ವಾರ್ಡ್‌ ಸದಸ್ಯ ಅಬ್ದುಲ್‌ ವಾಜೀದ್‌ ಅವರನ್ನು ನೇಮಕ ಮಾಡಿ ಕಾಂಗ್ರೆಸ್‌ ಆದೇಶ ಹೊರಡಿಸಿದೆ. ಈ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮೇಯರ್‌ ಗಂಗಾಂಬಿಕೆ ಅವರಿಗೆ ಪತ್ರ ಬರೆದಿದ್ದು, ಆಡಳಿತ ಪಕ್ಷದ ನಾಯಕರಿಗೆ ಸಿಗುವ ಸವಲತ್ತುಗಳನ್ನು ಒದಗಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಗುರುವಾರ ವಾಜೀದ್‌ ಅವರ ವಾರ್ಡ್‌ನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಈ ಹಿಂದೆ ದತ್ತಾತ್ರೇಯ ದೇವಾಸ್ಥಾನ ವಾರ್ಡ್‌ನ ಆರ್‌.ಎಸ್‌.ಸತ್ಯನಾರಾಯಣ, ಗುರಪ್ಪನಪಾಳ್ಯ ವಾರ್ಡ್‌ನ ಮಹಮ್ಮದ್‌ ರಿಜ್ವಾನ್‌ ಹಾಗೂ ಕಳೆದ ಅವಧಿಗೆ ಶಂಕರಮಠ ವಾರ್ಡ್‌ನ ಎಂ.ಶಿವರಾಜು ಆಡಳಿತ ಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಆಡಳಿತ ಪಕ್ಷ ನಾಯಕರಾಗಿ ಆಯ್ಕೆಯಾದ ಬಳಿಕ ಪ್ರತಿಕ್ರಿಯಿಸಿದ ಅಬ್ದುಲ್‌ ವಾಜೀದ್‌, ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ನನಗೆ ಮಹತ್ವ ಜವಾಬ್ದಾರಿ ವಹಿಸಿದೆ. ಆ ಹಿನ್ನೆಲೆಯಲ್ಲಿ ಯಾವುದೇ ಆರೋಪಗಳಿಗೆ ಅವಕಾಶವಿಲ್ಲದಂತೆ ಉತ್ತಮ ಆಡಳಿತ ನೀಡಲಾಗುವುದು. ನಗರದಲ್ಲಿ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿದ್ದು, ಅವುಗಳನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ. 

ಬಿಜೆಪಿಯಲ್ಲಿ ಅಸಮಧಾನ: ಆಡಳಿತ ಪಕ್ಷದ ನಾಯಕರನ್ನು ಬದಲಿಸಿ ಕಾಂಗ್ರೆಸ್‌ ಆದೇಶ ಹೊರಡಿಸಿದ ಬೆನ್ನಲ್ಲೇ, ಬಿಜೆಪಿಯ ಕೆಲ ಪಾಲಿಕೆ ಸದಸ್ಯರು ಅಸಮಧಾನಗೊಂಡಿದ್ದಾರೆ. ಪ್ರತಿ ವರ್ಷ ಕಾಂಗ್ರೆಸ್‌ ಆಡಳಿತ ಪಕ್ಷ ನಾಯಕ ಹಾಗೂ ಜೆಡಿಎಸ್‌ ಪಕ್ಷ ನಾಯಕ ಸ್ಥಾನವನ್ನು ಬೇರೆಯವರಿಗೆ ನೀಡುವ ಮೂಲಕ ಎಲ್ಲ ಸದಸ್ಯರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ, ಬಿಜೆಪಿಯಲ್ಲಿ ಮೂರು ವರ್ಷಗಳಿಂದ ಒಬ್ಬರೇ ವಿರೋಧ ಪಕ್ಷದ ನಾಯಕರಾಗಿದ್ದು, 100 ಜನ ಸದಸ್ಯರಿದ್ದರೂ ಸ್ಥಾನಮಾನ ಹಂಚಿಕೆಯಾಗುತ್ತಿಲ್ಲ ಎಂದು ಅಕಾಂಕ್ಷಿಯೊಬ್ಬರು ಬೇಸರ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.