ಮತದಾನ ಆಲಸ್ಯ, ಟ್ರಿಪ್‌ ತಪ್ಪಿಸಲು ಜನ ಜಾಗೃತಿ


Team Udayavani, Apr 29, 2023, 12:23 PM IST

ಮತದಾನ ಆಲಸ್ಯ, ಟ್ರಿಪ್‌ ತಪ್ಪಿಸಲು ಜನ ಜಾಗೃತಿ

ಬೆಂಗಳೂರು: “ರಾಜಧಾನಿಯಲ್ಲಿ ಈ ಬಾರಿ ವಿಧಾನಸಭಾ ಚುನಾವಣೆ ಮತದಾನ ಪ್ರಮಾಣ ಹೆಚ್ಚಳಕ್ಕೆ ಪಣತೊಟ್ಟಿದ್ದು, ಚುನಾವಣಾ ಆಯೋಗದ ಜತೆಗೂಡಿ ನಿರಂತರವಾಗಿ ಹಮ್ಮಿಕೊಂಡಿರುವ ಜಾಗೃತಿ ಅಭಿಯಾನವು ಫ‌ಲ ನೀಡುವ ವಿಶ್ವಾಸವಿದೆ’ ಇದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮಾತುಗಳು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕಾಗಿ ಚುನಾವಣಾ ಆಯೋಗದ ಜತೆಗೂಡಿ ಪ್ರತಿದಿನ ವಿಧಾನಸಭಾ ಕ್ಷೇತ್ರಾವಾರು ಜಾಗೃತಿ ಕಾರ್ಯಕ್ರಮ ನಡೆಸುತ್ತಿರುವ ಬಗ್ಗೆ “ಉದಯವಾಣಿ’ಗೆ ಸಂದರ್ಶನ ನೀಡಿದ ತುಷಾರ್‌ ಗಿರಿನಾಥ್‌, ಈ ಬಾರಿ ಯುವ ಸಮೂಹ ಮತದಾನದ ಬಗ್ಗೆ ಉತ್ಸುಕವಾಗಿದೆ ಎಂದು ಹೇಳುತ್ತಾರೆ.

“ಐಟಿ-ಬಿಟಿ ಹಬ್‌’ಎಂದು ಕರೆಸಿಕೊಂಡಿರುವ ಬೆಂಗಳೂರಿನಲ್ಲಿ ಸುಶಿಕ್ಷಿತರೇ ಅಧಿಕ ಸಂಖ್ಯೆಯಲ್ಲಿ ನೆಲೆಸಿದ್ದರೂ ವಿಧಾನಸಭಾ ಚುನಾವಣೆ ವೇಳೆ ಅಧಿಕ ಸಂಖ್ಯೆಯಲ್ಲಿ ಮತದಾನದ ಪ್ರಕ್ರಿಯಿಂದ ಯಾಕೆ ದೂರ ಉಳಿಯುತ್ತಾರೆ?

ವಿಜ್ಞಾನ ಮತ್ತು ತಂತ್ರಜ್ಞಾನ ವಲಯದಲ್ಲಿ ಹಲವು ಮಂದಿ ಉದ್ಯೋಗಿಗಳಿದ್ದಾರೆ. ಆದರೆ ಮತದಾನ ಮಾಡುವುದು ಎಂದರೆ ಅವರಿಗೆ ಒಂದು ರೀತಿಯ ಆಲಸ್ಯ. ಮತದಾನದ ದಿನದಂದು ಕೆಲವರು ಕುಟುಂಬ ಸಮೇತ ಟ್ರಿಪ್‌ಗೆ ಯೋಜನೆ ರೂಪಿಸಿರುತ್ತಾರೆ. ಆದರೆ ಈ ಬಾರಿ ಹಾಗೇ ಆಗಬಾರದು ಎಂಬ ಉದ್ದೇಶದಿಂದ ಐಟಿ-ಬಿಟಿ ಕಂಪನಿಗಳಿಗೆ ಭೇಟಿ ನೀಡಿ ಮತದಾನದ ಮಹತ್ವದ ಬಗ್ಗೆ ಉದ್ಯೋಗಿಗಳಿಗೆ ಅರಿವು ಮೂಡಿಸಲಾಗಿದೆ. ಕಂಪನಿಯ ಉದ್ಯೋಗಿಗಳಿಗೆ ವೇತನ ಸಮೇತ ರಜೆ ನೀಡುವ ಭರವಸೆಯನ್ನು ದೊಡ್ಡ ದೊಡ್ಡ ಕಂಪನಿಗಳ ಸಿಇಒಗಳು ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಲೇಜುಗಳಿಗೆ ಭೇಟಿ ನೀಡಿ ಮೊದಲ ಬಾರಿಗೆ ಮತದಾನ ಮಾಡುವ ಯುವ ಸಮೂಹದ ಜತೆ ನಡೆಸುತ್ತಿರುವ ಸಂವಾದಕ್ಕೆ ಸ್ಪಂದನೆ ಹೇಗಿದೆ ?

ಜಯನಗರದ ವಿಜಯ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಿಗೆ ಭೇಟಿ ನೀಡಿ ಯುವ ಮತದಾರರ ಜತೆಗೆ ಸಂವಾದ ನಡೆಸಲಾಗಿದೆ. ಯುವ ಸಮೂಹ ಈ ಹಿಂದಿಗಿಂತ ಈಗ ಮತದಾನದಲ್ಲಿ ಪಾಲ್ಗೊಳ್ಳುವ ಹುರುಪಿನಲ್ಲಿದ್ದಾರೆ. ಕೆಲವು ವಿದ್ಯಾರ್ಥಿಗಳು ಆನ್‌ ಲೈನ್‌ನಲ್ಲೇ ಮತದಾನಕ್ಕೆ ಅವಕಾಶ ಕಲ್ಪಿಸಿಕೊಡಿ ಎಂದು ಕೇಳಿದ್ದೂ ಇದೆ. ಶಾಂತಿಯುತ ಚುನಾವಣೆಗೆ ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ? ಪೊಲೀಸ್‌ ಇಲಾಖೆ ಜತೆಗೂಡಿ ಶಾಂತಿಯುತ ಚುನಾವಣೆಗೆ ಆಯೋಗ ಕ್ರಮ ವಹಿಸಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸುವ ಕಾರ್ಯ ಕೂಡ ಅಂತಿಮ ಹಂತದಲ್ಲಿದೆ

ಪೇಟಿಎಂ, ಗೂಗಲ್‌ ಪೇ ಸೇರಿದಂತೆ ಆನ್‌ಲೈನ್‌ ನಲ್ಲಿ ಅಕ್ರಮ ಹಣವರ್ಗಾವಣೆ ತಡೆಗೆ ಏನು ಕ್ರಮ ಕೈಗೊಳ್ಳಲಾಗಿದೆ?

ಪೇಟಿಎಂ ಮತ್ತು ಗೂಗಲ್‌ ಪೇ ಸೇರಿದಂತೆ ಆನ್‌ಲೈನ್‌ ಮೂಲಕ ಮತದಾರರಿಗೆ ಅಕ್ರಮ ಹಣ ವರ್ಗಾವಣೆ ಆಗಿರುವುದು ಇಲ್ಲಿವರೆಗೂ ಕಂಡು ಬಂದಿಲ್ಲ. ಈ ಸಂಬಂಧ ಯಾವುದೇ ದೂರುಗಳು ದಾಖಲಾಗಿಲ್ಲ. ಆದರೆ ಈ ಕುರಿತು ನಿಗಾ ವಹಿಸಲಾಗಿದೆ.

ಚುನಾವಣಾ ಆಯೋಗ 80 ವರ್ಷ ಮೇಲ್ಪಟ್ಟವರಿಗೆ ಗೌಪ್ಯ ಮತದಾನ ವ್ಯವಸ್ಥೆ ಕಲ್ಪಿಸಿದ್ದು ಎಷ್ಟು ಮಂದಿ ನೋಂದಣಿಯಾಗಿದ್ದಾರೆ?

80 ವರ್ಷಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌, ವೋಟರ್‌ ಹೆಲ್ಪ್ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ನೋಂದಣಿ ಕಡ್ಡಾಯ ಮಾಡಲಾಗಿದೆ. ಈವರೆಗೂ ಸುಮಾರು 10 ಸಾವಿರಕ್ಕಿಂತಲೂ ಅಧಿಕ ಮಂದಿ ನೋಂದಣಿ ಆಗಿದ್ದಾರೆ. ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ ಆಗಲಿದೆ. ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶವಿದ್ದು ಈ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗುತ್ತದೆ.

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.