ಬಿಬಿಎಂಪಿ: 1,322 ಆಶಾ ಕಾರ್ಯಕರ್ತೆಯರ ಹುದ್ದೆ ಸೃಷ್ಟಿ


Team Udayavani, Sep 4, 2020, 11:53 AM IST

ಬಿಬಿಎಂಪಿ: 1,322 ಆಶಾ ಕಾರ್ಯಕರ್ತೆಯರ ಹುದ್ದೆ ಸೃಷ್ಟಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 1,322 ಜನ ಆಶಾ ಕಾರ್ಯಕರ್ತೆಯರ ಹುದ್ದೆ ಮಂಜೂರು ಮಾಡಿ ಸರ್ಕಾರ ಆದೇಶ ಮಾಡಿದೆ. ರಾಜ್ಯದ 11 ಮಹಾನಗರ ಪಾಲಿಕೆಗಳಿಗೆ 1,786 ಆಶಾ ಕಾರ್ಯಕರ್ತೆಯರ ಹುದ್ದೆ ಮುಂಜೂರು ಮಾಡಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಈ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಬಿಬಿಎಂಪಿಯಲ್ಲಿ 1,229 ಮಂದಿ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದು, ಈಗ 1,322 ಜನ ಸೇರ್ಪಡೆ ಆಗಿದ್ದು, ಆಶಾ ಕಾರ್ಯಕರ್ತೆಯರ ಸಂಖ್ಯೆ 2,551ಕ್ಕೆ ಏರಿಕೆಯಾಗಿದೆ. 5 ಸಾವಿರ ಜನಸಂಖ್ಯೆಗೆ ಒಬ್ಬರು ಆಶಾ ಕಾರ್ಯಕರ್ತೆ ಲೆಕ್ಕದಲ್ಲಿ ಹೊಸ ನೇಮಕಾತಿ ಆಗಿದೆ.

ರಾಜ್ಯದ 11 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1.90 ಕೋಟಿ ಜನಸಂಖ್ಯೆ ಇದ್ದು, ಈಗ ಮಂಜೂರು ಮಾಡಲಾದ 1,786 ಹೊಸ ಹುದ್ದೆಗಳಿಂದ ಸರ್ಕಾರಕ್ಕೆ ವಾರ್ಷಿಕ 23.58 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿ ಪ್ರಸ್ತುತ ರಾಜ್ಯದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳನ್ನೊಳಗೊಂಡಂತೆ 10 ಸಾವಿರ ಜನಸಂಖ್ಯೆಗೆ ಒಬ್ಬರು ಆಶಾ ಕಾರ್ಯಕರ್ತೆಯಂತೆ ಒಟ್ಟು 42,524 ಮಂದಿ ಆಶಾ ಕಾರ್ಯರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪಾಲಿಕೆಗಳ ವ್ಯಾಪ್ತಿಯಲ್ಲಿ ಪ್ರತಿ 5 ಸಾವಿರ ಜನಸಂಖ್ಯೆಗೆ ಒಬ್ಬರು ಆಶಾ ಕಾರ್ಯರ್ತೆಯರ ನೇಮಕ ಮಾಡಬೇಕು ಎಂದು ಇತ್ತೀಚೆಗೆ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಸರ್ಕಾರಕ್ಕೆ ಮನವಿ ಮಾಡಿದ್ದರು.

………………………………………………………………………………………………………………………………………………………

ಜನವರಿಯಿಂದ ಜುಲೈವರೆಗೆ 35,307 ಜನರ ಮರಣ : ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಜನವರಿಯಿಂದ ಜುಲೈವರೆಗೆ 35,307 ಜನ ಮೃತಪಟ್ಟಿದ್ದಾರೆ ಎಂದು ಬಿಬಿಎಂಪಿ (ಸಾಂಖ್ಯಿಕ) ವಿಭಾಗ ತಿಳಿಸಿದೆ. ಮಾಜಿ ಸಚಿವ ಎಚ್‌. ಕೆ.ಪಾಟೀಲ್‌ ಅವರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಪತ್ರಿಕಾ ಹೇಳಿಕೆ ಪ್ರಕಾರ ನಗರದಲ್ಲಿ ಜನವರಿ-ಜುಲೈವರೆಗೆ 49,135 ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಹೇಳಲಾಗಿತ್ತು.

ಇನ್ನು ಕಳೆದ ವರ್ಷ ಇದೇ ಅವಧಿಯಲ್ಲಿ 37,001 ಸಾವಿನ ಪ್ರಕರಣಗಳು ವರದಿಯಾಗಿವೆ. ಅಂದರೆ, ಈ ವರ್ಷ 12,134 ಸಾವು ಪ್ರಕರಣ ಹೆಚ್ಚಾಗಿವೆ ಎಂದು ಉಲ್ಲೇಖೀಸಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಲಿಕೆ ಇ -ಜನ್ಮ ತಂತ್ರಾಂಶದ ಮಾಹಿತಿ ಅನ್ವಯ ಕಳೆದ ವರ್ಷ ಜನವರಿಯಿಂದ ಜುಲೈ ವರೆಗೆ ನಗರದಲ್ಲಿ 37,004 ಸಾವಿನ ಪ್ರಕರಣ ವರದಿಯಾಗಿವೆ, ಪ್ರಸಕ್ತ ವರ್ಷ ಇದೇ ಅವಧಿಯಲ್ಲಿ 35,307 ಸಾವಿನ ಪ್ರಕರಣ ವರದಿಯಾಗಿವೆ. ಆದರೆ, ಎಚ್‌. ಕೆ.ಪಾಟೀಲ್‌ ಅವರು ನೀಡಿರುವ ಮಾಹಿತಿಯ ಮೂಲ ಯಾವುದು ಎಂಬುದು ಸ್ಪಷ್ಟತೆ ಇಲ್ಲ. ಪಾಲಿಕೆಯ ಜನನ – ಮರಣ ಮುಖ್ಯ ನೋಂದಣಾಧಿಕಾರಿ ಕಚೇರಿಯ ಜಾಲತಾಣದ ಮಾಹಿತಿ ನಿಖರವಾಗಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.