ಗ್ರಂಥಾಲಯಗಳಿಗೆ ಬಿಬಿಎಂಪಿ ಅಡ್ಡಗಾಲು!


Team Udayavani, May 4, 2019, 3:08 AM IST

grnthalaya

ಬೆಂಗಳೂರು: ಡಿಜಿಟಲ್‌ ತಂತ್ರಜ್ಞಾನ ಅಳವಡಿಸಿಕೊಂಡು ಯುವ ಓದುಗರ ಸೆಳೆಯಬೇಕಿದ್ದ ನಗರದ ಸಾರ್ವಜನಿಕ ಗ್ರಂಥಾಲಯಗಳಿಗೆ ಬಿಬಿಎಂಪಿಯೇ ಅಡ್ಡಗಾಲಾಗಿದೆ. ಇ-ಬುಕ್‌, ಡಿಜಿಟಲ್‌ ತಂತ್ರಜ್ಞಾನ ಅಳವಡಿಸಿಕೊಳ್ಳುವ ಆಸಕ್ತಿ ಇದ್ದರೂ, ಬಿಬಿಎಂಪಿ ಸೂಕ್ತ ಸಮಯದಲ್ಲಿ ಸೆಸ್‌ ಹಣ ಬಿಡುಗಡೆ ಮಾಡದ ಕಾರಣ ಗ್ರಂಥಾಲಯಗಳ ಆಧುನಿಕರಣ ಕನಸಾಗೇ ಉಳಿದಿದೆ.

ಬಿಬಿಎಂಪಿ, ಐದು ವರ್ಷಗಳಿಂದ ಗ್ರಂಥಾಲಯಗಳಿಗೆ 346.36 ಕೋಟಿ ರೂ. ಸೆಸ್‌ ಹಣ ಬಾಕಿ ಉಳಿಸಿಕೊಂಡಿದೆ. ಇದು ಗ್ರಂಥಾಲಯ ನಿರ್ವಹಣೆ ಮೇಲೆ ಪರಿಣಾಮ ಬೀರಿದೆ. ಹಣ ಬಿಡುಗಡೆಯಾದರೆ, ಗ್ರಂಥಾಲಯಗಳು ಹೊಸ ರೂಪ ಪಡೆದುಕೊಳ್ಳುತ್ತಿದ್ದವು. ಆದರೆ, ಕೈಯಲ್ಲಿ ತುಪ್ಪ ಇದ್ದರೂ ಬೆಣ್ಣೆಗಾಗಿ ತಡಕಾಡಿದರು ಎನ್ನುವ ಪರಿಸ್ಥಿತಿಗೆ ಗ್ರಂಥಾಲಯಗಳು ಬಂದು ತಲುಪಿವೆ.

ಗ್ರಂಥಾಲಯ ಇಲಾಖೆಗೆ ಬಿಬಿಎಂಪಿ ಮಾತ್ರವಲ್ಲದೆ, ಸ್ಥಳೀಯ ಸಂಸ್ಥೆಗಳು 54 ಕೋಟಿ ರೂ., ಗ್ರಾ.ಪಂಗಳು 73 ಕೋಟಿ ರೂ. ಬಾಕಿ ಉಳಿಸಿಕೊಂಡಿವೆ. ನಗರದ ಐದು ವಲಯಗಳಲ್ಲಿ 200 ಸಾರ್ವಜನಿಕ ಗ್ರಂಥಾಲಯಗಳಿವೆ. ಇವುಗಳಲ್ಲಿ ಬಹುತೇಕ ಸಾರ್ವಜನಿಕ ಗ್ರಂಥಾಲಯಗಳಿಗೆ ಸ್ವಂತ ಕಟ್ಟಡ ಇಲ್ಲ. ಒಂದೊಮ್ಮೆ ಬಾಕಿ ಮೊತ್ತ ಸಿಕ್ಕರೆ, ಸ್ವಂತ ಕಟ್ಟಡಗಳನ್ನು ಹೊಂದುವ ಕನಸು ಇಲಾಖೆಯದ್ದು.

ಶೇ.6ರಷ್ಟು ತೆರಿಗೆ ಸಂಗ್ರಹ: ಸಾರ್ವಜನಿಕ ಗ್ರಂಥಾಲಯ ಕಾಯ್ದೆ 1965ರ ನಿಯಮ 30 ಮತ್ತು 31ರಂತೆ ರಾಜ್ಯದಾದ್ಯಂತ ಇರುವ ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆಯ ಶೇ.6ರಷ್ಟು ಹಣ ಗ್ರಂಥಾಲಯ ಸೆಸ್‌ ಫ‌ಂಡ್‌ಗೆ ಸೇರುತ್ತದೆ. ಇದನ್ನು ಗ್ರಂಥಾಲಯಗಳ ಅಭಿವೃದ್ಧಿಗೆ ನೀಡಬೇಕು. ಆದರೆ, ಇದು ದು ವರ್ಷಗಳಿಂದ ಬಿಡುಗಡೆಯೇ ಆಗಿಲ್ಲ.

ನಮ್ಮನ್ನೇನೂ ಕೇಳಬೇಡಿ!: ಗ್ರಂಥಾಲಯ ಅಭಿವೃದ್ಧಿ, ಬಾಕಿ ಮೊತ್ತ ಮತ್ತು ಸಮಸ್ಯೆಗಳ ಬಗ್ಗೆ ಕೇಳಿದರೆ ಗ್ರಂಥಾಲಯ ಅಧಿಕಾರಿಗಳಿಂದ ಕೇಳಿಬರುತ್ತಿರುವ ಉತ್ತರ, “ನಮ್ಮನೇನೂ ಕೇಳಬೇಡಿ’. ಪತ್ರಿಕೆಗಳಲ್ಲಿ ವರದಿ ಪ್ರಕಟವಾದರೆ, ಆ ವರದಿ ತೋರಿಸುವ ಪಾಲಿಕೆ ಅಧಿಕಾರಿಗಳು, “ನಿಮಗೆ ಹಣ ಕೊಡುವುದಿಲ್ಲ. ನೀವೇ ಇವರಿಗೆ (ಮಾಧ್ಯಮಗಳಿಗೆ) ಮಾಹಿತಿ ನೀಡುತ್ತಿದ್ದೀರ’ ಎಂದು ದಬ್ಟಾಳಿಕೆ ಮಾಡಿದ್ದೂ ಇದೆ ಎನ್ನುತ್ತಾರೆ ಹೆಸರು ಹೇಳಲು ಇಚ್ಛಿಸದ ಅಧಿಕಾರಿ.

ಬಿಬಿಎಂಪಿ ಹಂತ ಹಂತವಾಗಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ. ಇರುವಷ್ಟು ಹಣದಲ್ಲಿ ಸರಿದೂಗಿಸಿಕೊಂಡು ಹೋಗುತ್ತಿದ್ದೇವೆ. ಹೇಳಿಕೊಳ್ಳುವಂಥ ಸಮಸ್ಯೆಗಳೇನು ಇಲ್ಲ
-ಡಾ. ಸತೀಶ್‌ ಕುಮಾರ್‌ ಎಸ್‌. ಹೊಸಮನಿ, ಗ್ರಂಥಾಲಯ ಇಲಾಖೆ ನಿರ್ದೇಶಕ

* ಹಿತೇಶ್‌ ವೈ

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.