ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ


Team Udayavani, May 16, 2022, 3:05 PM IST

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ತಕ್ಷಣ ಚುನಾವಣೆ ನಡೆದರೆ, ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಲಿದೆ ಎಂಬ ಕೂಗು ಕೇಳಿಬರುತ್ತಿದೆ. ಆ “ಅನ್ಯಾಯ’ ಸರಿಪಡಿಸಲು ರಾಜಕೀಯ ಪಕ್ಷಗಳು ಮುಂದಾದರೂ ಹಿಂದುಳಿದ ವರ್ಗಗಳು ಹಿಂದೇಟು ಹಾಕುತ್ತಿವೆ!

ಸುಪ್ರೀಂ ಕೋರ್ಟ್‌ ತೀರ್ಪಿನ ಬೆನ್ನಲ್ಲೇ ಒಂದೆಡೆ ಸರ್ಕಾರವು ಮೇಲ್ಮನವಿ ಅಥವಾ ಮರುಪರಿಶೀಲನೆಗೆ ಇರುವ ಮಾರ್ಗೋಪಾಯಗಳ ಹುಡುಕಾಟ ನಡೆಸಿ ದ್ದರೆ, ಮತ್ತೂಂದೆಡೆ ರಾಜಕೀಯ ಪಕ್ಷಗಳು ತೆರೆಮರೆ ಯಲ್ಲಿ ತಮ್ಮ ಹಿಂದುಳಿದ ವರ್ಗಗಳ ಸ್ಥಳೀಯ ನಾಯಕರನ್ನು ಚುನಾವಣೆ ಎದುರಿಸಲು ಮಾನಸಿಕವಾಗಿ ಸಜ್ಜುಗೊಳಿಸುವ ಪ್ರಯತ್ನವನ್ನೂ ನಡೆಸಿವೆ. ತಕ್ಷಣಕ್ಕೆ ಚುನಾವಣೆ ನಡೆದಲ್ಲಿ ಹಿಂದುಳಿದ ವರ್ಗ (ಒಬಿಸಿ) ಗಳಿಗೆ ಸಾಧ್ಯವಾದಷ್ಟು ಹೆಚ್ಚು ಅವಕಾಶಗಳನ್ನು ನೀಡುವ ಮೂಲಕ ಆಗಬಹುದಾದ ಅನ್ಯಾಯ ಸರಿಪಡಿಸಲಾಗುವುದು ಎಂದು ಭರವಸೆ ನೀಡುತ್ತಿವೆ.

ಆದರೆ, ರಾಜಕೀಯ ಪಕ್ಷಗಳು ನೀಡುತ್ತಿರುವ ಭರವಸೆಗಳ ಮೇಲೆ ಒಬಿಸಿಗಳಿಗೆ ಸಂಪೂರ್ಣ ನಂಬಿಕೆಯೂ ಇಲ್ಲ; ಪ್ರಾಯೋಗಿಕವಾಗಿ ಆ ಕೊರತೆ ನೀಗಿಸಲು ಕಷ್ಟಸಾಧ್ಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಅಪಸ್ವರಗಳು ಕೇಳಿಬರುತ್ತಿವೆ. ಒಂದು ವೇಳೆ ಈ ಕಗ್ಗಂಟು ಬಗೆ ಹರಿಯದಿದ್ದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೂಡ ಇದು ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ವಿವಿಧ ರಾಜಕೀಯ ಪಕ್ಷಗಳು ಈಗ ಇಕ್ಕಟ್ಟಿಗೆ ಸಿಲುಕಿವೆ.

ಪ್ರಾಯೋಗಿಕವಾಗಿ ಕಷ್ಟ’: “ಪಕ್ಷವು ಹಿಂದುಳಿದ ವರ್ಗಗಳಿಗೆ ಆಗುವ ಅನ್ಯಾಯ ಸರಿಪಡಿಸಲು ಸಾಮಾನ್ಯ ಕೆಟಗರಿಯಲ್ಲೇ ಹೆಚ್ಚು ಜನರಿಗೆ ಟಿಕೆಟ್‌ ನೀಡುತ್ತದೆ ಎಂದುಕೊಳ್ಳೋಣ. ಎದುರಾಳಿ ಪಕ್ಷಗಳಲ್ಲೂ ಅದೇ ಹಿಂದುಳಿದ ವರ್ಗದ ಅಭ್ಯರ್ಥಿಗೆ ಟಿಕೆಟ್‌ ನೀಡಿದರೆ ಉತ್ತಮ. ಒಂದು ವೇಳೆ ಅಲ್ಲಿ ಹೆಚ್ಚು ಪ್ರಾಬಲ್ಯ ಇರುವ ಬೇರೆ ಯಾವುದಾದರೂ ಸಮುದಾಯದ ವ್ಯಕ್ತಿಯನ್ನು ಕಣಕ್ಕಿಳಿಸಿದರೆ, ಆಗ ನಮಗೆ ಕಷ್ಟವಾಗುತ್ತದೆ. ಹಾಗಾಗಿ, ಇದೆಲ್ಲವೂ ಎದುರಾಳಿ ಪಕ್ಷಗಳು ಕಣಕ್ಕಿಳಿಸುವ ಅಭ್ಯರ್ಥಿ ಯನ್ನು ಆಧರಿಸಿವೆ’ ಎಂದು ಬಿಜೆಪಿಯ ಹಿಂದುಳಿದ ವರ್ಗದ ಬಿಬಿಎಂಪಿ ಮಾಜಿ ಸದಸ್ಯರೊಬ್ಬರು ತಿಳಿಸುತ್ತಾರೆ. “ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಈಗಾಗಲೇ ಒಬಿಸಿಗಳಿಗೆ ಯಾವುದೇ ರೀತಿ ಅನ್ಯಾಯವಾಗಲು ಬಿಡುವು ದಿಲ್ಲ. ಈ ಹಿಂದೆ ನೀಡಿದ್ದಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡುವುದಾಗಿ ತಿಳಿಸಿದ್ದಾರೆ.

ಆದರೆ ಪ್ರತಿಸ್ಪರ್ಧಿಯು ಸಮುದಾಯ ಸೇರಿ ಎಲ್ಲ ರೀತಿಯಿಂದಲೂ ಹೆಚ್ಚು ಪ್ರಬಲನಾಗಿದ್ದರೆ, ಆಗ ಎದುರಿಸಲು ಕಷ್ಟವಾಗುತ್ತದೆ. ಇದನ್ನು ಸ್ವತಃ ನಾನು ಎದುರಿಸಿದ್ದೇನೆ. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಒಬಿಸಿಗಳಿಗೆ ಕಷ್ಟವಾಗಲಿದೆ. ಆದ್ದರಿಂದ ಸಾಧ್ಯವಾದಷ್ಟು ನ್ಯಾಯಾಲಯಕ್ಕೆ ಮನದಟ್ಟು ಮಾಡಿಕೊಡುವ ಕೆಲಸ ಆಗಬೇಕು. ಮತ್ತೂಂದೆಡೆ ಕಾಂತರಾಜ್‌ ನೇತೃತ್ವದ ಆಯೋಗ ಸಲ್ಲಿಸಿದ ವರದಿಯ ಅಂಶಗಳನ್ನೂ ಪರಿಗಣಿಸಬೇಕು. ಅದನ್ನು ನ್ಯಾಯಾಲಯಕ್ಕೂ ಸಲ್ಲಿಸಿ, ಮನವರಿಕೆ ಮಾಡಿಕೊಡಬೇಕು’ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ನೆ.ಲ. ನರೇಂದ್ರಬಾಬು ಅಭಿಪ್ರಾಯಪಡುತ್ತಾರೆ.

ಜಾತಿ ಆಧಾರದ ಮೇಲೆ ಚುನಾವಣೆ ಕಡಿಮೆ : “ಸಾಮಾನ್ಯವಾಗಿ ಬಿಬಿಎಂಪಿ ಚುನಾವಣೆಗಳು ಜಾತಿ ಆಧಾರದ ಮೇಲೆ ನಡೆಯುವುದು ತುಂಬಾ ಕಡಿಮೆ. ಇಲ್ಲಿ ಅಭ್ಯರ್ಥಿ ಸೇವೆ, ಅಭಿವೃದ್ಧಿ ಯೋಜನೆಗಳು, ಎಷ್ಟರ ಮಟ್ಟಿಗೆ ಜನರಿಗೆ ಹತ್ತಿರವಾಗಿದ್ದಾರೆ ಎಂಬುದರ ಮೇಲೆ ನಿರ್ಧಾರ ಆಗುತ್ತದೆ. ಅದೇನೇ ಇರಲಿ ಈಗಲೇ ಚುನಾವಣೆ ಘೋಷಣೆಯಾದರೆ, ಸಾಮಾನ್ಯ ಕೆಟಗರಿಯಲ್ಲಿ ಹಿಂದುಳಿದ ವರ್ಗಗಳಿಗೆ ಅವಕಾಶ ಕಲ್ಪಿಸಲಾಗುವುದು. ನಗರದ ಯಾವ ಭಾಗದಲ್ಲಿ ಹೆಚ್ಚು ಹಿಂದುಳಿದ ವರ್ಗದವರಿದ್ದಾರೆ ಎಂಬುದನ್ನು ಸಮೀಕ್ಷೆ ನಡೆಸಿ, ಆಯಾ ಸಮುದಾಯದ ಮುಖಂಡರನ್ನು ಕಣಕ್ಕಿಳಿಸಲಾಗುವುದು’ ಎಂದು ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಪಿ.ಆರ್‌. ರಮೇಶ್‌ ಹೇಳುತ್ತಾರೆ.

ನ್ಯಾ. ಭಕ್ತವತ್ಸಲ ನೇತೃತ್ವದಲ್ಲಿ ಆಯೋಗ : ಒಬಿಸಿಯಲ್ಲಿ 101 ಜಾತಿಗಳಿದ್ದರೂ ಬೆರಳೆಣಿಕೆಯಷ್ಟು ಸಮುದಾಯಗಳಿಗೆ ಮಾತ್ರ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿದೆ ಎಂಬ ಆರೋಪ ಇದೆ. ಇನ್ನೂ ಅನೇಕ ಸಮುದಾಯಗಳಿಗೆ ಆದ್ಯತೆ ಸಿಕ್ಕಿಲ್ಲ. ಆಯಾ ಪ್ರದೇಶಗಳಲ್ಲಿ ಪ್ರಾಬಲ್ಯ ಇರುವ ಸಮುದಾಯಗಳನ್ನು ಗುರುತಿಸಿ, ಅದಕ್ಕೆ ಅನುಗುಣವಾಗಿ ಪ್ರಾತಿನಿಧ್ಯ ನೀಡುವ ಲೆಕ್ಕಾಚಾರ ಸರ್ಕಾರದ ಮುಂದಿದೆ. ಈ ಹಿನ್ನೆಲೆಯಲ್ಲಿಯೇ ನ್ಯಾಯಮೂರ್ತಿ ಭಕ್ತವತ್ಸಲ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ.

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.