ಚುನಾವಣೆ ಸಮಯದಲ್ಲೇ ಪಾಲಿಕೆ ಸರ್ಜರಿ

ಸ್ಥಳೀಯ ಸಂಸ್ಥೆ ಎಲೆಕ್ಷನ್‌ ವೇಳೆ ಪ್ರದೇಶ ಸೇರ್ಪಡೆ ಪ್ರಸ್ತಾಪ

Team Udayavani, Sep 24, 2020, 11:40 AM IST

ಚುನಾವಣೆ ಸಮಯದಲ್ಲೇ ಪಾಲಿಕೆ ಸರ್ಜರಿ

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 250ಕ್ಕೆ ಏರಿಕೆ ಮಾಡುವ ವಿಚಾರ ಚುನಾವಣೆ ಮುಂದೂಡುವ “ಅಸ್ತ್ರ’ವೇ? 2015-2020ನೇ ಸಾಲಿನ ಪಾಲಿಕೆ ಸದಸ್ಯರ ಅಧಿಕಾರ ಅವಧಿ ಮುಗಿದು ಇನ್ನೇನು ಚುನಾವಣೆ ಘೋಷಣೆಯಾಗಬೇಕು ಎನ್ನುವ ಸಂದರ್ಭದಲ್ಲಿ ಹೊಸ ಪ್ರದೇಶಗಳ ಸೇರ್ಪಡೆ ಹಾಗೂ ಬಿಬಿಎಂಪಿಗೆ ಪ್ರತ್ಯೇಕ ಕಾಯ್ದೆ ರಚನೆ ಚರ್ಚೆ ನಡೆಯುತ್ತಿದೆ.

ಅಧಿಕಾರದಲ್ಲಿದ್ದ ಎಲ್ಲ ರಾಜಕೀಯ ಪಕ್ಷಗಳೂ ಪಾಲಿಕೆಯಚುನಾವಣೆಮುಂದೂಡಿಕೆಮಾಡುವುದಕ್ಕೆ ಬೇಕಾದ ಎಲ್ಲ ರೀತಿಯ ದಾಳ ಪ್ರಯೋಗಿಸುತ್ತವೆ ಎನ್ನುವುದು ಮಾಜಿ ಮೇಯರ್‌ಗಳ ದೂರು. ಬೆಂಗಳೂರು ಮಹಾನಗರ ಪಾಲಿಕೆ (ಬಿಎಂಪಿ) ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಾಗಿ ಬದಲಾದ ಮೇಲೂ ಸಕಾಲದಲ್ಲಿ ಚುನಾವಣೆಗಳುನಡೆದಿಲ್ಲ.ಸ್ಥಳೀಯಸಂಸ್ಥೆಚುನಾವಣೆ ಒಂದಿಲ್ಲೊಂದು ಕಾರಣದಿಂದಾಗಿ ಮುಂದೂಡಿಕೆಯಾಗಿರುವ ಉದಾಹರಣೆ ಇದೆ.

ವೈಮನಸ್ಸು!: ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆ ವಿಚಾರದಲ್ಲಿ ಎಲ್ಲ ಪಕ್ಷದ ಸದಸ್ಯರು ಒಂದು ಪಕ್ಷವಾದರೆ, ಪಾಲಿಕೆಯ ಎಲ್ಲ ಮಾಜಿ ಸದಸ್ಯರದ್ದು ಮತ್ತೂಂದು ಪಕ್ಷ. ಪಾಲಿಕೆ ಸದಸ್ಯರಿಗೆ ಅಧಿಕಾರವಿಲ್ಲದೆ ಇದ್ದರೆ, ಸಾರ್ವಜನಿಕರು ನೇರವಾಗಿ ಶಾಸಕರ ಬಳಿಯೇ ಬರುತ್ತಾರೆ. ಅಲ್ಲದೆ ಅವರಿಗೆ ಬೇಕಾದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಳ್ಳಬಹುದು ಎಂಬ ಹಿತಾಸಕ್ತಿಯೂ ಇದರ ಹಿಂದೆಕೆಲಸ ಮಾಡುತ್ತದೆ. ಇನ್ನು ಚುನಾವಣೆ ನಡೆಸಬೇಕು ಎಂಬ ವಿಚಾರದಲ್ಲಿ ಎಲ್ಲ ಪಾಲಿಕೆ ಸದಸ್ಯರು ಒಂದಾಗುತ್ತಾರೆ. ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್‌ ಪಕ್ಷದ ಹಲವು ಸದಸ್ಯರು ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ಬಿಜೆಪಿಯ ಹಲವು ಪಾಲಿಕೆ ಮಾಜಿ ಸದಸ್ಯರು ಚುನಾವಣೆ ಸಕಾಲದಲ್ಲಿ ನಡೆಯುವಂತೆ ಮಾಡಲು ಇರುವ ಮಾರ್ಗಗಳ ಬಗ್ಗೆ ಕಾಂಗ್ರೆಸ್‌ ಸದಸ್ಯರಿಗೆ ಸುಳಿವು ನೀಡಿದ್ದಾರೆ. ಪರೋಕ್ಷವಾಗಿ ತಮ್ಮದೇ ಸರ್ಕಾರದ ನಡೆಯ ವಿರುದ್ಧ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ.

ಪ್ರದೇಶ ಸೇರ್ಪಡೆಗೂ ಮುನ್ನ ನಗರಸಭೆ ರಚನೆ ಮಾಡಲಿ: ಪ್ರತ್ಯೇಕ ಕಾಯ್ದೆ ರಚನೆ, ವಿಸ್ತರಣೆ ಹಾಗೂ ವಾರ್ಡ್‌ಗಳ ಸಂಖ್ಯೆ ಹೆಚ್ಚಳದ ಪ್ರಸ್ತಾವನೆ ಮತ್ತೆ ಮುನ್ನೆಲೆಗೆ ಬಂದಿವೆ. ಪ್ರತಿ ಬಾರಿಯೂ ಪಾಲಿಕೆ ಚುನಾವಣೆ ನಡೆಯುವ ಸಮಯದಲ್ಲೇ ಕಸರತ್ತು ಶುರುವಾಗುತ್ತದೆ ಎನ್ನುತ್ತಾರೆ ಮಾಜಿ ಆಡಳಿತ ಪಕ್ಷದ ನಾಯಕ ಎಂ. ಶಿವರಾಜು. ಇದೀಗ ಸರ್ಕಾರ 60ಕ್ಕೂ ಹೆಚ್ಚು ಹಳ್ಳಿಗಳ ಸೇರ್ಪಡೆ ಮಾಡುವ ಬಗ್ಗೆ ಚರ್ಚೆ ನಡೆಸುತ್ತಿದೆ. ಈಗಾಗಲೇ ಸೇರಿಸಿರುವ 110ಹಳ್ಳಿ ಅಭಿವೃದ್ಧಿ ಆಗಿಲ್ಲ. ಸರ್ಕಾರ ಪಾಲಿಕೆಗೆ ಹೊಸ ಹಳ್ಳಿಗಳನ್ನು ಸೇರ್ಪಡೆ ಮಾಡುವುದಾದರೆ ಮಾಡಲಿ. ಆದರೆ, ಇದಕ್ಕೂ ಮುನ್ನ ಹೊಸ ಪ್ರದೇಶಗಳನ್ನು ನಗರಸಭೆ ವ್ಯಾಪ್ತಿಗೆ ತಂದು ಅವುಗಳನ್ನು ಅಭಿವೃದ್ಧಿ ಮಾಡಲಿ ಎಂದರು.

ಸರ್ಕಾರಕ್ಕೆ ಚುನಾವಣೆ ಮುಂದೂಡುವುದೇ ಗುರಿ: ಸರ್ಕಾರ ಹಾಗೂ ಬೆಂಗಳೂರಿನ ಶಾಸಕರಿಗೆ ಪಾಲಿಕೆ ಚುನಾವಣೆ ಮುಂದೂಡಿಕೆಯಾಗುವುದೇ ಬೇಕು. ಪ್ರತ್ಯೇಕ ಕಾಯ್ದೆ ರಚನೆ ಹಾಗೂ ಹೊಸ ಪ್ರದೇಶಗಳನ್ನು ಸೇರ್ಪಡೆ ಮಾಡುವ ಚಿಂತನೆ ಸರ್ಕಾರಕ್ಕೆ ಈ ಹಿಂದೆಯೇ ಇತ್ತು ಎನ್ನುವುದಾದರೆ, ಕಳೆದ ಒಂದು ವರ್ಷದಲ್ಲೇ ಈ ಸಿದ್ಧತೆಗಳನ್ನು ಮಾಡಿಕೊಳ್ಳಬಹು ದಾಗಿತ್ತು. ಆದರೆ, ಸರ್ಕಾರಕ್ಕೆ ಬೇಕಿರುವುದು ಚುನಾವಣೆ ಮುಂದೂಡಿಕೆಯಾಗುವುದು. ಇದಕ್ಕೆ ಶಾಸಕರ ಬೆಂಬಲವೂ ಕಾರಣ ಎಂದು ಹೆಸರು ಹೇಳಲು ಇಚ್ಛಿಸದ ಪಾಲಿಕೆಯ ಸದಸ್ಯರೊಬ್ಬರು ಆರೋಪಿಸಿದರು.

ವಾರ್ಡ್‌ಗಳ ಸಂಖ್ಯೆ 250ಕ್ಕೆ ಹೆಚ್ಚಿಸಲು ಒಪ್ಪಿಗೆ :

 ಬೆಂಗಳೂರು: ಬಿಬಿಎಂಪಿ ವಾರ್ಡ್‌ ಸಂಖ್ಯೆಗಳನ್ನು 198 ರಿಂದ250ಕ್ಕೆ ಹೆಚ್ಚಳ ಮಾಡಲು ವಿಧಾನ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಬಿಬಿಎಂಪಿ ಕಾಯ್ದೆ ತಿದ್ದುಪಡಿ ಮಾಡಲು ಈಗಾಗಲೇ ಜಂಟಿ ಸದನ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ಪ್ರಾಥಮಿಕ ವರದಿ ನೀಡಿದ್ದು, ಅದರನ್ವಯ ಬಿಬಿಎಂಪಿ ವಾರ್ಡ್‌ ಗಳ ಸಂಖ್ಯೆಯನ್ನು198 ರಿಂದ250 ಹೆಚ್ಚಳ ಮಾಡಲು ಶಿಫಾರಸ್ಸು ಮಾಡಿದೆ. ಬಿಬಿಎಂಪಿ ವಿಭಜನೆ ಮಾಡುವ ಬದಲು ಜನಸಂಖ್ಯೆ ಆಧಾರದಲ್ಲಿ ವಾರ್ಡ್‌ ಗಳಮರು ವಿಂಗಡಣೆ ಮಾಡಲು ತೀರ್ಮಾನಿಸಲಾಗಿದೆ ಎಂದುಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದರು.

ಅದರಂತೆ ವಾರ್ಡ್‌ ಗಳ ಸಂಖ್ಯೆ ಹೆಚ್ಚಳ ಮಾಡಲು ಸದನದ ಒಪ್ಪಿಗೆ ಪಡೆಯಲಾಯಿತು. ಆದರೆ,ವಾರ್ಡ್‌ಗಳ ಸಂಖ್ಯೆಯನ್ನು252ಕ್ಕೆ ಹೆಚ್ಚಿಸಬೇಕು ಎಂಬ ಒತ್ತಡ ಇದೆ ಎಂದು ತಿಳಿದು ಬಂದಿದ್ದು,9 ಸಂಖ್ಯೆ ಬರಬೇಕು ಎನ್ನುವಕಾರಣಕ್ಕೆ ವಾರ್ಡ್‌ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲು ಶಾಸಕರು ಸಮಿತಿ ಅಧ್ಯಕ್ಷರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ನೋಟಿಸ್‌ :

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆಡಳಿತಾಧಿಕಾರಿಯನ್ನು ನೇಮಿಸಿ ಹೊರಡಿಸಿದ ಆದೇಶ ಪ್ರಶ್ನಿಸಿ ಮತ್ತು ಪಾಲಿಕೆಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದುಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತು ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ಶಿವರಾಜ್‌ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಬಿಬಿಎಂಪಿ ಚುನಾವಣೆ ವಿಚಾರವಾಗಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯೊಂದಿಗೆ ಈ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಹೇಳಿ, ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಅ.12ಕ್ಕೆ ಮುಂದೂಡಿತು.

ಬಿಬಿಎಂಪಿ ಚುನಾಯಿತ ಸದಸ್ಯರ ಅವಧಿ ಸೆ.10ಕ್ಕೆ ಮುಗಿದಿದೆ. ಅದಕ್ಕೂ ಮುನ್ನ ಚುನಾವಣೆ ನಡೆಸಿ ಹೊಸ ಸದಸ್ಯರ ಆಯ್ಕೆ ಮಾಡಬೇಕಿತ್ತು. ಆದರೆ,ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪಾಲಿಕೆಯಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇರಬೇಕಿತ್ತು. ಆದರೆ, ಸರ್ಕಾರ ಚುನಾವಣೆ ಮುಂದೂಡುವ ಉದ್ದೇಶದಿಂದ ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ ಮಾಡಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಅಲ್ಲದೆ, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ವಿಸ್ತರಣೆ ನೆಪದಲ್ಲಿ ಚುನಾವಣೆ ಮುಂದೂಡಿಕೆ : 2007ರಲ್ಲಿ110 ಹಳ್ಳಿಗಳ ಸೇರ್ಪಡೆ ಮಾಡುವ ಉದ್ದೇಶದಿಂದ ಚುನಾವಣೆ ಮುಂದೂಡಿಕೆಯಾಗಿತ್ತು. 2020ರಲ್ಲಿ ವಾರ್ಡ್‌ಗಳ ಸಂಖ್ಯೆ198ರಿಂದ250ಕ್ಕೆ ಏರಿಕೆ ಮಾಡುವ ಹಾಗೂ ಬಿಬಿಎಂಪಿಗೆ ಪ್ರತ್ಯೇಕಕಾಯ್ದೆ ರಚನೆ ಪ್ರಸ್ತಾಪದಿಂದ ಮುಂದೂಡಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಪಾಲಿಕೆ ಚುನಾವಣೆಗೆ ಕೋವಿಡ್ ಸೋಂಕು ಭೀತಿಯೂ ಶುರುವಾಗಿದೆ.

 

-ಹಿತೇಶ್‌ ವೈ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.