ಜೀರೋ ವೇಸ್ಟ್ ಯೋಜನೆಯಲ್ಲಿ ಪಾಲಿಕೆ ಫೇಲ್
Team Udayavani, Sep 15, 2019, 3:09 AM IST
ಬೆಂಗಳೂರು: ಸಾರ್ವಜನಿಕರಿಗೆ ಮಾದರಿಯಾಗುವ ಉದ್ದೇಶದಿಂದ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಜೀರೋ ವೇಸ್ಟ್ ಯೋಜನೆಯಡಿ ಸ್ಥಾಪಿಸಲಾಗಿದ್ದ ಸಂಸ್ಕರಣಾ ಘಟಕಗಳ ನಿರ್ವಹಣೆಯಲ್ಲಿ ಬಿಬಿಎಂಪಿ ವಿಫಲವಾಗಿದೆ.
ಉದ್ಘಾಟನೆ ಮಾಡಿ ಒಂದು ತಿಂಗಳಾದರೂ ಘಟಕ ಬಳಕೆಯಾಗಿಲ್ಲ. ಯೋಜನೆಯಡಿ ಹಸಿ ತ್ಯಾಜ್ಯ ಸಂಸ್ಕರಿಸಲು 1 ಲಕ್ಷ ರೂ. ವೆಚ್ಚದಲ್ಲಿ 70 ಕೆ.ಜಿ ಸಾರ್ಮಥ್ಯದ ಎರಡು ಕಾಂಪೋಸ್ಟರ್ ಸ್ಥಾಪಿಸಲಾಗಿದೆ. ಆದರೆ, ಕೇಂದ್ರ ಕಚೇರಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಕಾಂಪೋಸ್ಟರ್ಗಳಲ್ಲಿ ಸುರಿಯದೆ, ಆಟೋಗಳ ಮೂಲಕ ಹೊರಕ್ಕೆ ಸಾಗಿಸಲಾಗುತ್ತಿದೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿನ ಕೌನ್ಸಿಲ್ ಕಟ್ಟಡ, ಕೇಂದ್ರ ಕಚೇರಿ ಸೇರಿ ಪ್ರಮುಖ ನಾಲ್ಕು ಕಟ್ಟಡಗಳು, ಉದ್ಯಾನ, ಕ್ಯಾಂಟೀನ್, ದೇವಸ್ಥಾನ ಹಾಗೂ ರಸ್ತೆಗಳಿಂದ ದಿನಕ್ಕೆ 50 ಕೆ.ಜಿ ಹಸಿ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಇದನ್ನು ಸಂಸ್ಕರಿಸಿ ಗೊಬ್ಬರ ಮಾಡುವ ಉದ್ದೇಶದಿಂದ ಕಾಂಪೋಸ್ಟರಗಳನ್ನು ಅಳವಡಿಸಲಾಗಿದೆ. ಆದರೆ, ಉದ್ಘಾಟನೆಯ ದಿನ ಹಸಿ ತ್ಯಾಜ್ಯ ಸುರಿದಿದ್ದು ಬಿಟ್ಟರೆ ಮತ್ತೆ ಅವುಗಳನ್ನು ಬಳಸೇ ಇಲ್ಲ.
“ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಜೀರೋ ವೇಸ್ಟ್ ಕ್ಯಾಂಪಸ್ ಅಳವಡಿಸಿ ಎಲ್ಲರಿಗೂ ಮಾದರಿಯಾಗಿದ್ದು, ಎಲ್ಲಾ ಕಚೇರಿಗಳಲ್ಲೂ ಜೀರೋ ವೇಸ್ಟ್ ಕ್ಯಾಂಪಸ್ ಆಗಿಸಲು ಸೂಚನೆ ನೀಡಲಾಗುವುದು’ ಎಂದು ಮೇಯರ್ ಹೇಳಿದ್ದರು. ಆದರೆ, ಈ ಯೋಜನೆಯಲ್ಲಿ ಯಶಸ್ವಿಯಾಗಿ ಇತರರಿಗೆ ಮಾದರಿ ಆಗಬೇಕಿದ್ದ ಬಿಬಿಎಂಪಿಯೇ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ.
ಅಧಿಕಾರಿ, ಸಿಬ್ಬಂದಿಯ ಅಸಹಕಾರ: ಎಲ್ಲರಿಗೂ ಮಾದರಿಯಾಗಬೇಕಾಗಿರುವ ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿಯೇ ತ್ಯಾಜ್ಯ ವಿಂಗಡಣೆ ಮತ್ತು ನಿರ್ವಹಣೆಗೆ ಸಹಕಾರ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಕೇಂದ್ರ ಕಚೇರಿಯಲ್ಲಿ 134 ವಿಭಾಗೀಯ ಕಚೇರಿಗಳಿದ್ದು, ಎಲ್ಲ ಕಚೇರಿ ಸಿಬ್ಬಂದಿಗೂ ತ್ಯಾಜ್ಯ ನಿರ್ವಹಣೆ ಹಾಗೂ ವಿಂಗಡಣೆ ತರಬೇತಿ ನೀಡಲಾಗಿದೆ ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ, ಬಹುತೇಕ ಕಚೇರಿಗಳಲ್ಲಿ ಸರ್ಮಪಕವಾಗಿ ತ್ಯಾಜ್ಯ ವಿಂಗಡಣೆ ಆಗುತ್ತಿಲ್ಲ ಎಂದು ಬಿಬಿಎಂಪಿ ಸಹಾಯಕ ಸಿಬ್ಬಂದಿ ತಿಳಿಸಿದ್ದಾರೆ. ಹೀಗಾಗಿ, ಹಿರಿಯ ಅಧಿಕಾರಿಯೊಬ್ಬರು ತ್ಯಾಜ್ಯವನ್ನು ಕಾಂಪೋಸ್ಟರ್ಗೆ ಹಾಕಬೇಡಿ ಎಂದು ಸೂಚನೆ ನೀಡಿದ್ದಾರೆ ಎಂದು ಪೌರಕಾರ್ಮಿಕರೊಬ್ಬರು ಹೇಳಿದರು.
ಒಣ ಕಸವೂ ಸಂಗ್ರಹವಾಗುತ್ತಿಲ್ಲ: ಕಚೇರಿ ಆವರಣದಲ್ಲಿ ಒಣ ಕಸವನ್ನು ಸಂಗ್ರಹಿಸಲು ಕಾಂಪೋಸ್ಟರ್ ಪಕ್ಕದಲ್ಲೇ ಪೇಪರ್, ಬಟ್ಟೆ ಹಾಗೂ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಪ್ರತ್ಯೇಕ ಮೆಷ್ಗಳನ್ನು ಅಳವಡಿಸಲಾಗಿತ್ತು. ಈ ಮೆಷ್ಗಳಲ್ಲಿ ಬೀಳುವ ತ್ಯಾಜ್ಯವನ್ನು ಚಿಂದಿ ಆಯುವವರು ವಾರಕ್ಕೊಮ್ಮೆ ಸಂಗ್ರಹಿಸಿ, ಸಂಸ್ಕರಣಾ ಘಟಕಗಳಿಗೆ ಸಾಗಿಸಬೇಕಿತ್ತು. ಆದರೆ, ಒಣ ತ್ಯಾಜ್ಯವನ್ನು ಸಂಗ್ರಹಿಸುವಲ್ಲಿಯೂ ಬಿಬಿಎಂಪಿ ಅಧಿಕಾರಿಗಳು ವಿಫಲರಾಗಿದ್ದಾರೆ.
ಎಲ್ಲ ಕಚೇರಿಗಳಲ್ಲೂ ಹಸಿ ಮತ್ತು ಒಣ ಹಸ ಸಂಗ್ರಹಕ್ಕೆ ಪ್ರತ್ಯೇಕ ಡಬ್ಬಿ ನೀಡಲಾಗಿದ್ದು, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಪಾಲಿಕೆ ಸಿಬ್ಬಂದಿಗಳಿಂದ ತ್ಯಾಜ್ಯ ವಿಂಗಡಣೆಯಲ್ಲಿ ಯಾವುದೇ ಲೋಪವಾಗುತ್ತಿಲ್ಲ.
-ರಂದೀಪ್, ವಿಶೇಷ ಆಯುಕ್ತ (ಘನತ್ಯಾಜ್ಯ)
* ಹಿತೇಶ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ