ರಾತ್ರೋರಾತ್ರಿ ಬಿಬಿಎಂಪಿ ಕಡತ ಸುಟ್ಟವರು ಯಾರು?


Team Udayavani, Mar 15, 2018, 12:51 PM IST

blore–5.jpg

ಕೆಂಗೇರಿ: ಬಿಜೆಪಿ ಕಾಲದಲ್ಲಿ ಬಿಬಿಎಂಪಿ 1400 ಕಡತಗಳನ್ನು ಸುಟ್ಟುಹಾಕಿದರಲ್ಲಾ ಯಾಕೆ ಸುಟ್ಟು ಹಾಕಿದ್ರು..? ಏನಪ್ಪಾ ಅಶೋಕ್‌ ನಿಮ್ಮ ಕಾಲದಲ್ಲೆ ತಾನೆ ಅನೇಕ ಪಾಲಿಕೆ ಕಟ್ಟಡಗಳ ಅಡಮಾನ ಇಟ್ಟಿದ್ದು? 110 ಹಳ್ಳಿಗಳನ್ನು ಸೇರಿ ಅಭಿವೃದ್ಧಿ ಪಡಿಸಿದವರು ಯಾರು…? ಇದು “ಬೆಂಗಳೂರು ರಕ್ಷಿಸಿ’ ಅಭಿಯಾನದ ನೇತೃತ್ವ ವಹಿಸಿರುವ ಮಾಜಿ ಡಿಸಿಎಂ ಆರ್‌. ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಕೇಳಿರುವ ಖಡಕ್‌ ಪ್ರಶ್ನೆಗಳು.

ಜಲಮಂಡಳಿಯಿಂದ ಕೆಂಗೇರಿಯಲ್ಲಿ ನಿರ್ಮಿಸಿರುವ 60 ದಶಲಕ್ಷ ಲೀಟರ್‌ ತ್ಯಾಜ್ಯ ಶುದ್ಧೀಕರಣ ಘಟಕ, ನಗರದ 110 ಹಳ್ಳಿಗಳಿಗೆ ಒಳಚರಂಡಿ ಸಂಪರ್ಕ ವ್ಯವಸ್ಥೆಯ ಶಂಕುಸ್ಥಾಪನೆ ಹಾಗೂ ಕಾವೇರಿ 5ನೇ ಹಂತ 1ನೇ ಘಟ್ಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಭ್ರಷ್ಟಾಚಾರವೆಸಗಿ ಸಿಕ್ಕಿ ಬೀಳುತ್ತೇವೆ ಎಂಬ ಭಯದಿಂದ ರಾತ್ರೋ ರಾತ್ರಿ ಕಡತಗಳಿಗೆ ಬೆಂಕಿ ಹಾಕಿದವರು ಯಾರು ಸ್ವಾಮಿ? ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

ಜನರು ಅಧಿಕಾರ ನೀಡಿದಾಗ ಭ್ರಷ್ಟಾಚಾರದಲ್ಲಿ ತೊಡಗಿ ಬೆಂಗಳೂರಿಗೆ ಕೆಟ್ಟ ಹೆಸರು ತಂದವರು, ಈಗ ದಿನ ಬೆಳಗಾದರೆ ಬೆಂಗಳೂರು ರಕ್ಷಿಸಿ ಎಂದು ಬೀದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದರು.

ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕೆಲಸ ಮಾಡದೆ, ರಾತ್ರೋ ರಾತ್ರಿ ಪಾಲಿಕೆಯ ಕಡತಗಳಿಗೆ ಬೆಂಕಿ ಹಚ್ಚಿದವರು. ಯಾವ ಮುಖ ಇಟ್ಟುಕೊಂಡು ಬೆಂಗಳೂರು ರಕ್ಷಿಸಿ ಎಂದು ಜನರ ಮುಂದೆ ಹೋಗಿದ್ದಾರೆ ಎಂದು ದೂರಿದರು.

ಜೈಲುಪಾಲಾಗುವುದರಿಂದ ಬಚಾವ್‌: ಆರ್‌. ಅಶೋಕ್‌ ಭೂ ಮಂಜೂರಾತಿ ಮಂಡಳಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಾವಿರಾರು ಎಕರೆ ಭೂಮಿಯನ್ನು ಉಳ್ಳವರಿಗೆ ಹಂಚಿಕೆ ಮಾಡಿ ರೈತರಿಗೆ ದ್ರೋಹವೆಸಗಿದ್ದಾರೆ. ಆ ಪ್ರಕರಣದಲ್ಲಿ ಅವರ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಜೈಲಿಗೆ ಹೋಗುವುದರಿಂದ ಸ್ವಲ್ಪದರಲ್ಲಿ ತಪ್ಪಿಸಿಕೊಂಡಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ ಸರ್ಕಾರವೆಂದು ಕಾಂಗ್ರೆಸ್‌ ಕಡೆಗೆ ಬೆಟ್ಟು ಮಾಡಿ ತೋರಿಸುತ್ತಾರೆ. ಆದರೆ, ಚೆಕ್‌ ಮೂಲಕ ಭ್ರಷ್ಟಾಚಾರ ಹಣ ಪಡೆದು ಜೈಲಿಗೆ ಹೋಗಿ ಬಂದಿರುವ ಯಡಿಯೂರಪ್ಪ ಅವರಿಗೆ ಕಾಣುವುದಿಲ್ಲ. ದೇಶ ಕಂಡ ಮಹಾನ್‌ ಸುಳ್ಳು ಹೇಳುವ ಪ್ರಧಾನಿಯನ್ನು ಇದುವರೆಗೂ ನಾನು ನೋಡಿರಲಿಲ್ಲ ಎಂದು ಟೀಕಿಸಿದರು.

ರಾಜಧಾನಿಯ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಮತ್ತು ತ್ಯಾಜ್ಯ ನೀರು ಸಂಸ್ಕರಣೆಗಾಗಿ ರಾಜ್ಯ ಸರ್ಕಾರ ಕಳೆದ ಐದು ವರ್ಷದಲ್ಲಿ 10,215 ಕೋಟಿ ರೂ. ಗಳನ್ನು ಖರ್ಚು ಮಾಡಲಾಗಿದೆ. ಇದೀಗ ಜಪಾನ್‌ ಜತೆಗೆ ಒಡಂಬಡಿಕೆ ಮಾಡಿಕೊಂಡು 5,552 ಕೋಟಿ ವೆಚ್ಚದಲ್ಲಿ 110 ಹಳ್ಳಿಗಳಿಗೆ ಒಳಚರಂಡಿ ವ್ಯವಸ್ಥೆ, ರಸ್ತೆ ಅಭಿವೃದ್ಧಿಗೊಳಿಸಲು ಸರ್ಕಾರ ಮುಂದಾಗಿದೆ.

ಮುಂದಿನ 6 ತಿಂಗಳಲ್ಲಿ ಎಲ್ಲ ಯೋಜನೆಗಳು ಪೂರ್ಣಗೊಳ್ಳಲಿವೆ. ಇಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿರುವ ನಮ್ಮ ಸರ್ಕಾರಕ್ಕೆ ಜನರು ಆರ್ಶೀವಾದ ಮಾಡಬೇಕು ಎಂದು ಮನವಿ ಮಾಡಿದರು.

ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌ ಮಾತನಾಡಿ, 110 ಹಳ್ಳಿಗಳ ಎಲ್ಲ ಸಮಸ್ಯೆಗಳನ್ನು ಸರ್ಕಾರ
ಪರಿಹಾರಗೊಳಿಸಿದೆ. ನಮ್ಮ ಕ್ಷೇತ್ರದ 23 ಹಳ್ಳಿಗಳು ಸಹ ಇದರಲ್ಲಿವೆ.ಕೆಂಗೇರಿ ಕೆರೆ ಅಭಿವೃದ್ಧಿಗೂ ಸರ್ಕಾರ 10 ಕೋಟಿ ರೂ.ಗಳನ್ನು ಒದಗಿಸಿದೆ ಎಂದರು.

ಕೆಂಗೇರಿ ಉಪನಗರದ ಗಾಂಧಿನಗರದಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಈ ವೇಳೆ
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, ಕೆ.ಆರ್‌.ಪುರ ಶಾಸಕ ಭೈರತಿ ಬಸವರಾಜು, ಜಪಾನ್‌ನ
ಕೌನ್ಸಲ್‌ ಜನರಲ್‌ ಟಕಾಯುಕಿ ಕಿಟಾಗವ, ಜಲಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್‌, ಪ್ರಧಾನ ಅಭಿಯಂತರ
ಕೆಂಪರಾಮಯ್ಯ ಇತರರು ಇದ್ದರು

ದೋಸೆ ಸವಿದ ಸಿಎಂ ಕೆಂಗೇರಿ ಉಪ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್‌
ತೆರಳುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸವನಗುಡಿಯ ಗಾಂಧಿ ಬಜಾರ್‌ನಲ್ಲಿರುವ ವಿದ್ಯಾರ್ಥಿ ಭವನ್‌ ಹೊಟೆಲ್‌ಗೆ ಭೇಟಿ ನೀಡಿ ಬಿಸಿಯಾದ ದೋಸೆ ಸೇವಿಸಿದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.