ಕೊರೊನಾ ಪೊಲೀಸರನ್ನೇ ಆರೋಪಿಗಳನ್ನಾಗಿಸಿದೆಯಾ?


Team Udayavani, Jan 14, 2022, 11:48 AM IST

ಕೊರೊನಾ ಪೊಲೀಸರನ್ನೇ ಆರೋಪಿಗಳನ್ನಾಗಿಸಿದೆಯಾ?

ಬೆಂಗಳೂರು: ಸಾಮಾನ್ಯವಾಗಿ ಪೊಲೀಸರು ಆರೋಪಿಗಳ ಜಾಡು ಹಿಡಿದು ಬಂಧಿಸಿ, ವಿಚಾರಣೆಗೊಳಡಿಸುತ್ತಾರೆ. ಆದರೆ, ಕೊರೊನಾ ಪೊಲೀಸರನ್ನೇ “ಆರೋಪಿ’ಗಳನ್ನಾಗಿ ಮಾಡಿದೆ. ಅಪರಾಧ ಕೃತ್ಯ ಎಸಗಿದ ಆರೋಪಿಗಳ ಪತ್ತೆ ಹಚ್ಚುವಷ್ಟು ಸುಲಭವಲ್ಲ ಕೊರೊನಾ ಸೋಂಕಿತ ಪೊಲೀಸ್‌ ಸಿಬ್ಬಂದಿ ಜಾಡು…

ಹೌದು, ಕೊಲೆ, ಸುಲಿಗೆ, ದರೋಡೆ ಮಾಡಿದ ಆರೋಪಿಗಳನ್ನು ನೆರೆ ರಾಜ್ಯದಲ್ಲಿದ್ದರೂ ಪೊಲೀಸರು ಎಳೆದು ತರುತ್ತಾರೆ. ಆದರೆ, ತಮಗೆ ವಕ್ಕರಿಸಿರುವ ಕೊರೊನಾ ಸೋಂಕಿನ ಮೂಲ ಜಾಡಿನ ಬಗ್ಗೆ ಅವರಿಗೆ ಮಾಹಿತಿ ಇಲ್ಲದಿರುವುದು ಬಿಬಿಎಂಪಿಗೆ ದೊಡ್ಡ ತಲೆ ನೋವಾಗಿದೆ.

ಇತ್ತೀಚೆಗೆ ನಗರ ಪೊಲೀಸರಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿದೆ. ಪ್ರತಿನಿತ್ಯ 20ರಿಂದ 30 ಪಾಸಿಟಿವ್‌ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ ಎರಡು ವಾರಗಳಲ್ಲಿ ನಗರ ಪೊಲೀಸರಲ್ಲಿ ಕೊರೊನಾ 200ರ ಗಡಿ ದಾಟಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಹೋದ್ಯೋಗಿಗಳು, ಕುಟುಂಬ ಸದಸ್ಯರು ಹಾಗೂ ಠಾಣೆ, ಮನೆ ಅಕ್ಕ-ಪಕ್ಕದವರನ್ನು ಪರೀಕ್ಷೆಗೊಳಪಡಿಸಲಾಗಿದೆ. ಆದರೆ, ಅವರ ಕರ್ತವ್ಯದ ಜಾಡು, ಎಲ್ಲೆಲ್ಲಿ ಹೋಗಿ ದ್ದರು? ಎಂಬ ಜಾಡು ಮಾತ್ರ ಪತ್ತೆಯಾಗುತ್ತಿಲ್ಲ.

ಪೊಲೀಸರ ಜಾಡು ಸುಲಭವಲ್ಲ!: ಸೋಂಕಿತ ಪೊಲೀಸ್‌ ಸಿಬ್ಬಂದಿ, ತಮ್ಮ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿ ನೀಡುತ್ತಿದ್ದಾರೆ. ಹಾಗೆಯೇ ಠಾಣಾಧಿಕಾರಿಗಳು ಸೂಚಿಸಿದ ಕರ್ತವ್ಯದ ಸ್ಥಳದ ಬಗ್ಗೆಯೂ ಹೇಳುತ್ತಾರೆ. ಆದರೆ, ಅದನ್ನು ಹೊರತು ಪಡಿಸಿ ಬೇರೆ ಎಲ್ಲಿಗೆ ಹೋಗಿದ್ದರು? ಯಾರೊಡನೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಬಗ್ಗೆ ಮೌನವಹಿಸುತ್ತಾರೆ. ಅವರಿಗೂ ಗೊಂದಲಗಳಿರುವುದರಿಂದ ಕೊರೊನಾ ಜಾಡು ಪತ್ತೆ ಕಷ್ಟವಾಗುತ್ತಿದೆ.

ಇದನ್ನೂ ಓದಿ:ಪಾದಯಾತ್ರೆಯಿಂದ ಕಾಂಗ್ರೆಸ್ ಗೆ ರಾಜಕೀಯ ಲಾಭಕ್ಕಿಂತ ನಷ್ಟವೇ ಆಗಿದೆ: ಆರಗ ಜ್ಞಾನೇಂದ್ರ

ಅವರು ಉಲ್ಲೇಖೀಸಿದ ಕರ್ತವ್ಯದ ಸ್ಥಳದ ನೂರು ಮೀಟರ್‌ ವ್ಯಾಪ್ತಿಯಲ್ಲಿ ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಬೆರಳೆಣಿಕೆಯಷ್ಟು ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಸೋಂಕಿತರನ್ನು ನಿರಂತರ ಸಂಪರ್ಕದಲ್ಲಿದ್ದು ಅವರು ಎಲ್ಲೆಲ್ಲಿ ಹೋಗಿದ್ದರು ಎಂಬ ಮಾಹಿತಿ ಪಡೆಯುತ್ತಿದ್ದೇವೆ ಎಂದು ಬಿಬಿಎಂಪಿಯ ಆರೋಗ್ಯ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ನೆನಪಿದ್ದಷ್ಟು ಹೇಳಿದ್ದೇವೆ: ಸೋಂಕು ಪತ್ತೆಯಾದ ಬಳಿಕ ಬಿಬಿಎಂಪಿ ಅಧಿಕಾರಿಗಳಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು, ಕರ್ತವ್ಯದ ಸ್ಥಳದ ಬಗ್ಗೆ ಹೇಳಿದ್ದೇವೆ. ಆದರೆ, ಎಲ್ಲೇಲ್ಲಿ ಓಡಾಡಿದ್ದೇವೆ? ಯಾರೊಟ್ಟಿಗೆ ಟೀ, ಊಟ ಸೇವಿಸಿದ್ದೇವೆ ಎಂಬ ಮಾಹಿತಿ ಹೇಗೆ ಹೇಳಲು ಸಾಧ್ಯ. ಬೇರೆ ಬೇರೆ ಠಾಣೆ ಸಿಬ್ಬಂದಿ ಸೇರಿ ದಿನಕ್ಕೆ ಹತ್ತಾರು ಮಂದಿಯನ್ನು ಭೇಟಿಯಾಗುತ್ತಿರುತ್ತೇವೆ. ಹಿರಿಯ ಅಧಿ ಕಾರಿಗಳು ಸೂಚಿಸಿದ ಹತ್ತಾರು ಸ್ಥಳಗಳಿಗೆ ಭೇಟಿ ನೀಡುತ್ತೇವೆ. ಒಂದೆರಡು ದಿನಗಳ ಓಡಾಡ ನೆನಪಿಟ್ಟುಕೊಳ್ಳಬಹುದು. ವಾರ ಅಥವಾ 15 ದಿನಗಳ ಸಂಚಾರದ ಮಾಹಿತಿ ಕೊಡಿ ಎಂದರೆ, ಹೇಗೆ ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯ. ಗೊತ್ತಿರುವ ಮಾಹಿತಿ ನೀಡಿದ್ದೇವೆ ಎಂದು ಸೋಂಕಿತ ಪೊಲೀಸ್‌ ಸಿಬ್ಬಂದಿಯೊಬ್ಬರು ವಿವರಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿಯ ಆರೋಗ್ಯ ವಿಭಾಗದ ಮುಖ್ಯಸ್ಥ ಬಾಲಸುಂದರ್‌, ಕೊರೊನಾ ಸೋಂಕಿತ ಪೊಲೀಸರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೊಳಪಡಿಸಲಾಗಿದೆ. ಅವರು ಕರ್ತವ್ಯ ನಿರ್ವಹಿಸಿದ ಸ್ಥಳದ ಸಮೀಪದ ಅಂಗಡಿಗಳ ಸಿಬ್ಬಂದಿಗೂ ಚೆಕ್‌ ಮಾಡಿಸಲಾಗಿದೆ. ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿದ್ದರು. ಆಯಾ ಜಿಲ್ಲೆಯ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಇನ್ನುಳಿದಂತೆ ಹೆಚ್ಚಿನ ಮಾಹಿತಿ ಅಗತ್ಯವಿದ್ದರೆ ಆರೋಗ್ಯ ವಿಭಾಗದ ಅಧಿಕಾರಿಗಳು ಪಡೆದುಕೊಳ್ಳುತ್ತಾರೆ ಎಂದರು.

ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.