ಹಸಿ-ಒಣ ಕಸ ವಿಂಗಡಿಸದೇ ಕೊಟ್ಟರೆ ದಂಡ ಖಚಿತ
Team Udayavani, Jan 25, 2020, 10:43 AM IST
ಬೆಂಗಳೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಂಗ್ರಹ ವಾಗುವ ಹಸಿ ಮತ್ತು ಒಣ ಕಸವನ್ನು ವಿಂಗಡಿಸದೇ ಪೌರ ಕಾರ್ಮಿಕರಿಗೆ ನೀಡಿದರೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.
ಕಸ ವಿಂಗಡಣೆ ಮಾಡದೆ ಉದಾಸೀನ ತೋರುವ ಸಾರ್ವಜನಿಕರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಪಾಲಿಕೆ ಚುರುಕುಗೊಳಿಸಿದೆ. ಈ ಸಂಬಂಧ “ಉದಯವಾಣಿ’ ಜತೆ ಮಾತನಾಡಿದ ಬಿಬಿಎಂಪಿ ವಿಶೇಷ (ಘನತ್ಯಾಜ್ಯ)ಆಯುಕ್ತ ರಂದೀಪ್, “ಬಿಬಿಎಂಪಿ ಕಸ ನಿರ್ವಹಣೆ ಉಪನಿಯಮ-2019′ ಕರಡು ಪ್ರಕಾರ ದಂಡ ವಿಧಿಸಲಾಗುತ್ತಿದೆ ಎಂದರು.
ಎಲ್ಲೆಂದರಲ್ಲಿ ಕಸ ಎಸೆದರೆ, ಉಗುಳಿದರೆ, ಮಲ- ಮೂತ್ರ ವಿಸರ್ಜನೆ ಮಾಡಿದರೆ ಮೊದಲ ಬಾರಿಗೆ 500 ರೂ. ಹಾಗೂ ಎರಡನೇ ಬಾರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ. ಅದೇ ರೀತಿ ಹಸಿ ಮತ್ತು ಒಣ ಕಸ ವಿಂಗಡಣೆ ಮಾಡದಿದ್ದರೆ, ಮೊದಲ ಬಾರಿ 500 ರೂ, ಎರಡನೇ ಬಾರಿ ಪುನರಾವರ್ತನೆಯಾದರೆ, 1,000 ರೂ. ದಂಡ ವಿಧಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಕಸದ ಪ್ರಮಾಣ ಹೆಚ್ಚಾಗಿದ್ದರೆ ಒಂದು ಸಾವಿರದಿಂದ ಐದು ಸಾವಿರ ರೂ.ವರೆಗೆ ದಂಡ ವಿಧಿಸಬಹುದಾಗಿದೆ ಎಂದು ವಿವರಿಸಿದರು. ಕಸ ವಿಂಗಡಣೆ ಮಾಡದ ಹಿನ್ನೆಲೆಯಲ್ಲಿ ಜ.1ರಿಂದ ಜ.17ರವರೆಗೆ ಪಾಲಿಕೆ ವ್ಯಾಪ್ತಿಯ ಆರು ವಲಯಗಳಲ್ಲಿ 470 ಜನರಿಂದ 1.37 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ರಂದೀಪ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್