ವೃತ್ತಗಳ ಅಂದ ಹೆಚ್ಚಿಸಲು ಯೋಜನೆ


Team Udayavani, May 28, 2022, 1:37 PM IST

ವೃತ್ತಗಳ ಅಂದ ಹೆಚ್ಚಿಸಲು ಯೋಜನೆ

ಬೆಂಗಳೂರು: ಸದಾ ದೂಳು, ಸಂಚಾರ ದಟ್ಟಣೆಯಿಂದ ತುಂಬಿರುವ ಬೆಂಗಳೂರಿನ ಪ್ರಮುಖ ವೃತ್ತಗಳನ್ನು ಮೇಲ್ದರ್ಜೆಗೇರಿಸಲು ಬಿಬಿಎಂಪಿ ಮುಂದಾಗಿದೆ. ಅದರ ಜತೆಗೆ ವೃತ್ತಗಳ ಸೌಂದರ್ಯ ಹೆಚ್ಚಿಸಲೂ ಯೋಜನೆ ರೂಪಿಸಲಾಗಿದೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ನಗರದ ಕೇಂದ್ರಭಾಗದಲ್ಲಿ ಹಲವು ಯೋಜನೆ ಜಾರಿಗೊಳಿಸಲಾಗು ತ್ತಿದೆ. ಟೆಂಡರ್‌ಶ್ಯೂರ್‌ ರಸ್ತೆಗಳು, ಪಾದಚಾರಿಮಾರ್ಗದಲ್ಲಿ ಸೈಕಲ್‌ ಪಥ ನಿರ್ಮಾಣ ಸೇರಿ ಹಲವುಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಅದರ ಜತೆಗೆ ಇದೀಗ ನಗರದ ಪ್ರಮುಖ 25 ವೃತ್ತಗಳನ್ನುಮೇಲ್ದರ್ಜೆಗೇರಿಸುವುದು ಹಾಗೂ ಸುಂದರೀಕರಣ ಮಾಡಲಾಗುತ್ತಿದೆ. ಅದಕ್ಕಾಗಿ ಈಗಾಗಲೆ ಟೆಂಡರ್‌ ಪ್ರಕ್ರಿಯೆ ನಡೆಸಿರುವ ಬಿಬಿಎಂಪಿ ಶೀಘ್ರದಲ್ಲಿ ಗುತ್ತಿಗೆ  ದಾರರನ್ನು ನೇಮಿಸಿ, ಕಾರ್ಯಾದೇಶ ನೀಡಲಿದೆ.

ಬಿಬಿಎಂಪಿ ರೂಪಿಸಿರುವ ಯೋಜನೆಯಂತೆ ಸದ್ಯ ಕೆ.ಆರ್‌.ವೃತ್ತದಲ್ಲಿ ಮಾಡಲಾಗಿರುವ ಅಭಿವೃದ್ಧಿ ಕಾಮಗಾರಿಯನ್ನು ಮಾದರಿಯಾಗಿಟ್ಟುಕೊಂಡುಉಳಿದ ವೃತ್ತಗಳನ್ನು ಅಭಿವೃದ್ಧಿಗೊಳಿಸಲು ನಿರ್ಧರಿಸಲಾ ಗಿದೆ. ಪ್ರಮುಖವಾಗಿ ವೃತ್ತದಲ್ಲಿ ಉತ್ತಮ ರಸ್ತೆ ನಿರ್ಮಾಣ, ವಾಹನ ಸಂಚಾರಕ್ಕೆ ಯಾವುದೇ ತಡೆಯಾಗದಂತಹ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

25 ವೃತ್ತಗಳ ಚಿತ್ರಣ ಬದಲು: ಬಿಬಿಎಂಪಿ ರೂಪಿಸಿರುವ ಯೋಜನೆಯಂತೆ ನಗರದ ಪ್ರಮುಖ25 ವೃತ್ತಗಳ ಚಿತ್ರಣ ಬದಲಿಸಲಾಗುತ್ತಿದೆ. ಮಲ್ಲೇಶ್ವರದ ಮಾರಮ್ಮ ದೇವಸ್ಥಾನ ವೃತ್ತ, ಲಾಲ್‌ಬಾಗ್‌ಪಶ್ಚಿಮ ದ್ವಾರದ ವೃತ್ತ, ಕಾರ್ಪೊರೇಷನ್‌ ವೃತ್ತ ಸೇರಿಹೆಚ್ಚು ವಾಹನ ಸಂಚಾರವಿರುವ 25 ವೃತ್ತಗಳನ್ನುಆಯ್ಕೆ ಮಾಡಿಕೊಳ್ಳಲಾಗಿದೆ. ಈ ವೃತ್ತಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಇಲ್ಲಿನ ವಾಯು ಗುಣಮಟ್ಟ ಹೆಚ್ಚಿಸುವ ಉದ್ದೇಶವನ್ನು ಹೊಂದಲಾಗಿದೆ.

ವೃತ್ತಗಳ ಅಭಿವೃದ್ಧಿ ವೇಳೆ ಅವುಗಳ ಸೌಂದರ್ಯ ಹೆಚ್ಚಿಸುವುದಕ್ಕೆ ಒತ್ತು ನೀಡಲಾಗುತ್ತದೆ. ವೃತ್ತದಮಧ್ಯದಲ್ಲಿ ಕಾರಂಜಿ ನಿರ್ಮಿಸಲಾಗುತ್ತದೆ. ಜತೆಗೆವಿವಿಧ ಬಣ್ಣದ ಕಲ್ಲುಗಳನ್ನು ಅಳವಡಿಸಲಾಗುತ್ತದೆ. ಅದರ ಜತೆಗೆ ಸ್ಥಳಾವಕಾಶವಿರುವಲ್ಲಿ ಕಾರಂಜಿ ಸುತ್ತ ಕಿರು ಉದ್ಯಾನ ನಿರ್ಮಿಸಲಾಗುತ್ತದೆ. ಹೀಗೆಅಭಿವೃದ್ಧಿಗೊಂಡ ನಂತರ ಅವುಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಚಿಂತನೆಯನ್ನೂ ಬಿಬಿಎಂಪಿ ಅಧಿಕಾರಿಗಳು ಮಾಡುತ್ತಿದ್ದಾರೆ.

27 ಕೋಟಿ ರೂ. ವೆಚ್ಚ :

ಬಿಬಿಎಂಪಿ ಅಧಿಕಾರಿಗಳು ರೂಪಿಸಿರುವಯೋಜನೆಯಂತೆ ವೃತ್ತಗಳ ಅಭಿವೃದ್ಧಿಗೆ 27 ಕೋಟಿ ರೂ. ವ್ಯಯಿಸಲಾಗುತ್ತಿದೆ. 15ನೇಹಣಕಾಸು ಆಯೋಗದ ಅನುದಾನದಲ್ಲಿ ಮೊತ್ತವನ್ನು ನಿಗದಿ ಮಾಡಿಕೊಳ್ಳಲಾಗಿದೆ.ಈಗಾಗಲೆ ಟೆಂಡರ್‌ ಪ್ರಕ್ರಿಯೆ ನಡೆಸಲಾಗಿದ್ದುಸದ್ಯ ತಾಂತ್ರಿಕ ಬಿಡ್‌ ಪರಿಶೀಲಿಸಲಾಗುತ್ತದೆ.ಬಿಬಿಎಂಪಿ ನಿಗದಿ ಮಾಡಿರುವ ಮೊತ್ತಕ್ಕೆ ಬಿಡ್‌ಸಲ್ಲಿಸಿದ, ತಾಂತ್ರಿಕವಾಗಿ ವಿಧಿಸಲಾಗಿರುವಷರತ್ತುಗಳನ್ನು ಪೂರೈಸುವ ಗುತ್ತಿಗೆದಾರರಿಗೆಕಾರ್ಯಾದೇಶ ನೀಡಲಾಗುತ್ತಿದೆ. ಒಮ್ಮೆಕಾರ್ಯಾದೇಶ ನೀಡಿದ ನಂತರದ 9ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿಬಿಬಿಎಂಪಿಗೆ ವೃತ್ತಗಳನ್ನು ಹಸ್ತಾಂತರಿಸುವಂತೆ ಷರತ್ತು ವಿಧಿಸಲಾಗುತ್ತದೆ.

ಬಿಬಿಎಂಪಿ ವೃತ್ತಗಳ ಸೌಂದರ್ಯ ಹೆಚ್ಚಿಸಲು ಹಾಗೂ ಸುಗಮ ಸಂಚಾರ, ವಾಯು ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ನಗರದ 25 ವೃತ್ತಗಳನ್ನು 27 ಕೋಟಿ ರೂ. ವೆಚ್ಚದಲ್ಲಿಅಭಿವೃದ್ಧಿಪಡಿಸಲು ನಿರ್ಧರಿಸಿ ಯೋಜನೆರೂಪಿಸಲಾಗಿದೆ. ಶೀಘ್ರದಲ್ಲಿಗುತ್ತಿಗೆದಾರರನ್ನು ನೇಮಿಸಿ ಕಾಮಗಾರಿ ಕಾರ್ಯಗತಗೊಳಿಸಲಾಗುವುದು. -ರವೀಂದ್ರ, ಬಿಬಿಎಂಪಿ ಯೋಜನಾ ವಿಭಾಗದ ವಿಶೇಷ ಆಯುಕ್ತ

-ಗಿರೀಶ್‌ ಗರಗ

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.