ಗುಜರಾತ್‌ ಮಾದರಿ ಹುಕ್ಕಾ ಬಾರ್‌ ಬ್ಯಾನ್‌ಗೆ ಪಾಲಿಕೆ ಚಿಂತನೆ


Team Udayavani, Apr 24, 2022, 12:41 PM IST

Untitled-1

ಬೆಂಗಳೂರು: ಸಿಲಿಕಾಟ್‌ ಸಿಟಿ ಬೆಂಗಳೂರಿನಲ್ಲಿ ಗುಜರಾತ್‌ ಮಾದರಿಯಲ್ಲಿ ಹುಕ್ಕಾ ಬಾರ್‌ಗಳನ್ನು ಬಂದ್‌ ಮಾಡಲು ಬೃಹತ್‌ ಬೆಂಗಳೂರು ಮಹಾ ನಗರ ಪಾಲಿಕೆ ಮುಂದಾಗಿದೆ. ಗುಜರಾತ್‌ ಸರ್ಕಾರ ಈಗಾಗಲೇ ಅಲ್ಲಿನ ಹುಕ್ಕಾ-ಬಾರ್‌ಗಳನ್ನು ಬಂದ್‌ ಮಾಡಿದ್ದು ಅದೇ ಮಾದರಿಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕೂಡ ರಾಜಧಾನಿಯಲ್ಲಿರುವ ಹುಕ್ಕಾ- ಬಾರ್‌ಗಳನ್ನು ಬಂದ್‌ ಮಾಡುವ ಬಗ್ಗೆ ಚಿಂತನೆ ನಡೆಸಿದೆ.

ಆ ಹಿನ್ನೆಲೆಯಲ್ಲಿ ಹೊಸ ಕಾನೂನು ರೂಪಿ ಸಲು ತಜ್ಞರ ಮೊರೆ ಹೋಗಿದೆ. ವಿಶ್ವ ಮಟ್ಟದಲ್ಲಿ ಗಮನ ಸೆಳೆದಿರುವ ಸಿಲಿಕಾನ್‌ ಸಿಟಿ ಬೆಂಗಳೂರನ್ನು ಆರೋಗ್ಯಕರ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿಯೇ ಬಿಬಿಎಂಪಿಯ ಆರೋಗ್ಯ ಘಟಕ ಹೆಜ್ಜೆಯಿರಿಸಿದೆ. ಈಗಾಗಲೇ ಸಂಘ, ಸಂಸ್ಥೆ ಹಾಗೂ ವಕೀಲರು ಸೇರಿದಂತೆ ಮತ್ತಿತರರ ಜತೆಗೆ ಆರೋಗ್ಯಕರ ನಗರ ನಿರ್ಮಾಣದ ಬಗ್ಗೆ ಚರ್ಚೆ ನಡೆಸಲಾಗಿದೆ. ಹೊಸ ಕಾನೂನಿಗಳ ಸಾಧಕ-ಬಾಧಕ ಗಳ ಬಗ್ಗೆ ಅದರ ಜಾರಿಯ ಬಗ್ಗೆ ಪಾಲಿಕೆಯ ಆರೋಗ್ಯ ಘಟಕದ ಹಿರಿಯ ಅಧಿಕಾರಿಗಳು ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಿದ್ದಾರೆ.

ಪಾಲಿಕೆಯ ಆರೋಗ್ಯ ಘಟಕದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿ, ಹುಕ್ಕಾ ಬಾರ್‌ ನಿಷೇಧ ಸಂಬಂಧಿಸಿದಂತೆ ಗುಜರಾತ್‌ನಲ್ಲಿ ಉತ್ತಮ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲಿ ಈಗಾಗಲೇ ಹುಕ್ಕಾಬಾರ್‌ಗಳ ಮೇಲೆ ನಿಷೇಧ ಹೇರಲಾಗಿದೆ. ಅದೇ ಮಾದರಿಯನ್ನು ಮುಂದಿನ ದಿನಗಳಲ್ಲಿ ಪಾಲಿಕೆ ಕೂಡ ಅಳವಡಿಸಿಕೊಂಡು ಜಾರಿಗೆ ತರುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ತಂಬಾಕು ಉತ್ಪನ್ನಗಳ ಬಳಕೆ ನಿಷೇಧಕ್ಕಿರುವ ಕಾಯ್ದೆ ಜತೆಗೆ ಈ ಬಗ್ಗೆ ನ್ಯಾಯಾಲಯಗಳು ನೀಡಿ ರುವ ತೀರ್ಪುಗಳನ್ನು ಮುಂದಿಟ್ಟುಕೊಂಡು ಹುಕ್ಕಾ ಬಳಕೆಗೆ ನಿಷೇಧ ನೀತಿ ಜಾರಿಯ ಬಗ್ಗೆ ಸಮಾ ಲೋಚಿಸಲಾಗಿದೆ ಎಂದರು.

ಬಜೆಟ್‌ ಅಧಿವೇಶನದ ವೇಳೆ ಪ್ರಸ್ತಾಪ : ಈ ಹಿಂದೆ ಬಜೆಟ್‌ ಅಧಿವೇಶನದಲ್ಲಿ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಪಿ.ಆರ್‌.ರಮೇಶ್‌, ರಾಜಧಾನಿಯ ಹುಕ್ಕಾಬಾರ್‌ಗಳ ಬಗ್ಗೆ ಸರ್ಕಾರದ ಗಮನ ಸಳೆದಿದ್ದರು. ಬೆಂಗಳೂರಿನಲ್ಲಿ ಹುಕ್ಕಾ ಮತ್ತು ಡಾನ್ಸ್‌ ಬಾರ್‌, ಕ್ಯಾಸಿನೋಗಳು ಅಕ್ರಮವಾಗಿ ನಡೆಯುತ್ತಿವೆ. ಗಲ್ಲಿ ಗಲ್ಲಿಯನ್ನು ಅವು ಅಕ್ರಮಿಸಿಕೊಂಡಿವೆ ಎಂದು ಆರೋಪಿಸಿದ್ದರು. ಹುಕ್ಕಾ ಬಾರ್‌ನಲ್ಲಿ ಡ್ರಗ್ಸ್‌ ಹೊಡೆಯುವವರೂ ಬರುತ್ತಾರೆ. ಕಾಲೇಜು ವಿದ್ಯಾರ್ಥಿಗಳೇ ಅಧಿಕ ಸಂಖ್ಯೆಯಲ್ಲಿ ಹುಕ್ಕಾ ಬಾರ್‌ನಲ್ಲಿ ಇರುತ್ತಾರೆ ಎಂದು ದೂರಿದ್ದರು. ಪೊಲೀಸ್‌ ಇಲಾಖೆ ರಾಜಧಾನಿಯಲ್ಲಿ ಕೇವಲ 64 ಹುಕ್ಕಾಬಾರ್‌ ಇವೆ ಅಂತ ಹೇಳಿದೆ. ಆದರೆ, ಇದು ತಪ್ಪು ಮಾಹಿತಿ. ರಾಜಧಾನಿಯ ಗಲ್ಲಿಗಲ್ಲಿಗಳಲ್ಲಿ ಬೇರೆ ಬೇರೆ ಚಟುವಟಿಕೆಗಳು ನಡೆಯುತ್ತಿವೆ ಎಂದು ಸದನದ ಗಮಕ್ಕೆ ತಂದಿದ್ದರು. ಆದರೆ, ಗೃಹ ಸಚಿವ ಆರಗ ಜ್ಞಾನೇಂದ್ರ ಹುಕ್ಕಾಬಾರ್‌ನಲ್ಲಿ ಮಾದಕ ವಸ್ತು ಸಿಗುತ್ತಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಹುಕ್ಕಾಬಾರ್‌ ಪರವಾನಗಿ ದುರುಪಯೋಗ : ಪಾಲಿಕೆ ಈವರೆಗೂ ಪ್ರತೇಕವಾಗಿ ಸ್ಮೋಕಿಂಗ್‌ ವಲಯ ಹೊಂದಿದ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಗಳಿಗೆ ಸಿಗರೇಟ್‌ ಮತ್ತು ಹುಕ್ಕಾಬಾರ್‌ ಆರಂಭಿಸಲು ಪರವನಗಿ ನೀಡಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದರ ದುರುಪಯೋಗವಾಗುತ್ತಿದೆ. ಪಾಲಿಕೆ ಆರೋಗ್ಯ ಅಧಿಕಾರಿಗಳ ತಾಪಸಣೆ ವೇಳೆ ಮಾಲೀಕರು ಹೇಳುವುದು ಒಂದು, ಆದರೆ ಅಲ್ಲಿ ನಡೆಯುತ್ತಿರುವುದು ಇನ್ನೊಂದು ಎಂಬ ಆರೋಪಗಳು ಕೇಳಿಬರುತ್ತಲೇ ಇವೆ. ಇದನ್ನು ಪಾಲಿಕೆಯ ಆರೋಗ್ಯ ಘಟಕ ಗಂಭೀರವಾಗಿ ಪರಿಗಣಿಸಿದ್ದು ಆ ಹಿನ್ನೆಲೆಯಲ್ಲಿ ಹುಕ್ಕಾ ಬಾರ್‌ ನಿಷೇಧಕ್ಕೆ ಗಂಭೀರ ಚಿಂತನೆ ಮಾಡಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹುಕ್ಕಾಬಾರ್‌ಗಳ ನಿಷೇಧ ನೀತಿಯ ಬಗ್ಗೆ ಕಾನೂನು ತಜ್ಞರ ಜತೆಗೆ ಸಮಾಲೋಚಿಸುತ್ತಿದೆ. ಗುಜರಾತ್‌ನಲ್ಲಿ ಈಗಾಗಲೇ ಹುಕ್ಕಾ ಬಾರ್‌ ಬಂದ್‌ ಮಾಡಲಾಗಿದೆ. ಅದೇ ರೀತ್ಲಿ ಬೆಂಗಳೂರಿ ನಲ್ಲೂ ಹುಕ್ಕಾಬಾರ್‌ ನಿಷೇಧಿಸಲು ಸಮಾಲೋಚನೆ ನಡೆಸಲಾಗಿದೆ. ಡಾ.ಬಾಲಸುಂದರ್‌, ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.