ಮಳೆಗಾಲಕ್ಕೆ ಬಿಬಿಎಂಪಿ ಸರ್ವ ಸನ್ನದ್ಧ


Team Udayavani, Aug 12, 2019, 3:08 AM IST

manujnath

ಬೆಂಗಳೂರು: ನಗರದಲ್ಲಿ ಮಳೆಯಿಂದ ಉಂಟಾಗಬಹುದಾದ ಸಮಸ್ಯೆಗಳನ್ನು ತಪ್ಪಿಸುವ ಉದ್ದೇಶದಿಂದ ಮಳೆಗಾಲ ಮಗಿಯವವರೆಗೆ ಬಿಬಿಎಂಪಿಯ ಅಧಿಕಾರಿಗಳಿಗೆ ರಜೆ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ಹೇಳಿದರು.  ಭಾನುವಾರ ಮಲ್ಲೇಶ್ವರದ ಐಪಿಪಿ ತರಬೇತಿ ಕೇಂದ್ರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಡೆಯುವ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

“ಎರಡನೇ ಶನಿವಾರ ಮತ್ತು ಭಾನುವಾರವೂ ಅಧಿಕಾರಿಗಳು ಕೆಲಸ ಮಾಡಲಿದ್ದಾರೆ. ಬಿಬಿಎಂಪಿ ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಂಟು ವಲಯದ ಎಂಜಿನಿಯರ್‌ ಮತ್ತು ಸಹಾಯಕ ಎಂಜಿಯರ್‌ಗಳ ರಜೆ ರದ್ದು ಮಾಡುವುದರ ಜತೆಗೆ ರಾಜೆ ನೀಡುವ ಅವಕಾಶವನ್ನು ರದ್ದು ಮಾಡಲಾಗಿದೆ. ಯಾವುದೇ ಅಧಿಕಾರಿಗಳು ತುರ್ತು ರಜೆ ತೆಗೆದುಕೊಳ್ಳಬೇಕಾದರೂ ನನ್ನ ಗಮನಕ್ಕೆ ತರಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆದೇಶದ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ 842 ಕಿ.ಮೀ ಉದ್ದದ ರಾಜಕಾಲುವೆ ಪ್ರದೇಶವಿದೆ. ಈಗಾಗಲೇ 184ಕಿ.ಮೀ ಉದ್ದದ ರಾಜಕಾಲುವೆಯನ್ನು ಸಂರ್ಪೂಣವಾಗಿ ಸ್ವಚ್ಛ ಮಾಡಲಾಗಿದೆ. ಮೇ.1ರಿಂದ 440 ಕಿ.ಮೀ ಕಾಂಕ್ರೀಟ್‌ ಒಳಚರಂಡಿಗಳನ್ನು ನಿರ್ಮಾಣ ಮಾಡಿದ್ದು, ಇದೇ ಮೊದಲ ಬಾರಿಗೆ ರಾಜಕಾಲುವೆ ನಿರ್ವಹಣೆಯನ್ನು ಖಾಸಗಿ ಕಂಪನಿಯೊಂದಕ್ಕೆ ವಾರ್ಷಿಕ ನಿರ್ವಹಣೆಗೆ ನೀಡಲಾಗಿದೆ. ಇದರಲ್ಲಿ 880 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದು, 15 ಟ್ರಕ್ಸ್‌ ಮತ್ತು 8 ಜೆಸಿಬಿಗಳನ್ನು ಸ್ವಚ್ಛತೆ ಕಾರ್ಯಕ್ಕೆ ನೀಡಲಾಗಿದೆ.

182 ತಗ್ಗು ಪ್ರದೇಶಗಳ ಗುರುತು: ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಉಪಗ್ರಹ ಆಧಾರಿತ ಮಾಹಿತಿ, ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸ ಇಲಾಖೆಯ ಮಾಹಿತಿಯನ್ನು ಕಲೆಹಾಕಿ,ಅನಾಹುತ ಸಂಭವಿಸಬಹುದಾದ 182 ತಗ್ಗು ಪ್ರದೇಶಗಳನ್ನು ಗುರುತಿಸಲಾಗಿತ್ತು ಮತ್ತು ಈ ಪ್ರದೇಶದಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಇದೇ ಮೊದಲ ಬಾರಿಗೆ 28 ಕಡೆಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಾಯದೊಂದಿಗೆ ರಾಜಕಾಲುವೆಗಳಲ್ಲಿ ಸೆನ್ಸಾರ್‌ ಅಳವಡಿಸಲಾಗಿದೆ. ಇದು ನಾಲ್ಕು ಹಂತದಲ್ಲಿ ಕಾರ್ಯನಿರ್ವಹಿಸಲಿದ್ದು, ಪ್ರವಾಹದ ಮುನ್ಸೂಚನೆ ನೀಡುತ್ತದೆ. ಇದರ ಮೂಲಕ ಅಧಿಕಾರಿಗಳಿಗೆ ಅಪಾಯದ ಮಾಹಿತಿ ಸಿಗಲಿದೆ ಎಂದು ವಿವರಿಸಿದರು.

ರಸ್ತೆಗಳಲ್ಲಿ ಸ್ವಚ್ಛತೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಮುಖ್ಯ ರಸ್ತೆಗಳು ಮತ್ತು ವಾರ್ಡ್‌ ಮಟ್ಟದ ರಸ್ತೆಗಳು ಎಂದು ಎರಡು ರೀತಿಯಲ್ಲಿ ವಿಂಗಡಿಸಲಾಗಿದೆ. ನಗರದಲ್ಲಿ 1,200 ಕಿ.ಮೀ ಪ್ರಮುಖ ರಸ್ತೆ ಇದ್ದು, ಇದರ ನಿರ್ವಹಣೆಗೆ ಮೂರು ತಿಂಗಳ ಹಿಂದೆಯೇ 26 ತಂಡಗಳನ್ನು ರಚನೆ ಮಾಡಲಾಗಿದೆ. ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ನಗರದ ಸಣ್ಣ ಮತ್ತು ಅತಿ ಸಣ್ಣ ಚರಂಡಿಗಳಲ್ಲಿನ ಹೂಳೆತ್ತುವ ಹಾಗೂ ಪ್ರತಿ 50 ಕಿ.ಮೀ ಸ್ವಚ್ಛತೆಯ ಜವಾಬ್ದಾರಿಯನ್ನು ಈ ತಂಡಕ್ಕೆ ನೀಡಲಾಗಿದೆ. ಸ್ವಚ್ಛತೆಗೆ ಬೇಕಾದ ಸಲಕರಣೆ ಮತ್ತು ಸ್ವೀಪಿಂಗ್‌ಯಂತ್ರಗಳನ್ನು ನೀಡಲಾಗಿದೆ. ಇದೇ ರೀತಿ ಮಳೆಗಾಲದಲ್ಲಿ ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ ಮಟ್ಟದ 12 ಸಾವಿರ ಕಿ.ಮೀನ ಉದ್ದದ ರಸ್ತೆಗಳ ನಿರ್ವಹಣೆ ಮಾಡಲು 63ತಂಡಗಳನ್ನು ರಚನೆ ಮಾಡಲಾಗಿದೆ. ಈ ತಂಡಗಳು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕಂಟ್ರೋಲ್‌ ರೂಂ.ನಲ್ಲಿ ಕಾರ್ಯನಿರ್ವಹಿಸುತ್ತಿವೆ. ರಸ್ತೆಗಳಲ್ಲಿ ಮಳೆ ನೀರು ನಿಂತರೆ ಅದನ್ನು ತೆಗೆಯುವುದಕ್ಕೆ ಈ ತಂಡಗಳು ಕಾರ್ಯಾಚರಣೆ ಮಾಡಲಿವೆ ಎಂದರು.

ರಸ್ತೆ ಗುಂಡಿ ಮುಚ್ಚಲು ಆದ್ಯತೆ: ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವುದಕ್ಕೆ ಟೆಂಡರ್‌ ಕರೆಯಲಾಗಿದ್ದು, ವರ್ಕ್‌ಆಡರ್‌ ನೀಡಲಾಗಿದೆ. ಎಲ್ಲ ರಸ್ತೆಗಳಿಗೂ ಗುತ್ತಿಗೆದಾರರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ನಗರದ ಒಳವ್ಯಾಪ್ತಿಯ ವಾರ್ಡ್‌ಗಳಲ್ಲಿನ ರಸ್ತೆ ಗುಂಡಿಬಿದ್ದರೆ ಅದರ ನಿರ್ವಹಣೆಗೆ 20 ಲಕ್ಷರೂ. ಮತ್ತು ಹೊರ ವಲಯದ ನಿರ್ವಹಣೆಗೆ 30 ಲಕ್ಷರೂ. ನೀಡಲಾಗಿದೆ. ಒಟ್ಟು 46 ಕೋಟಿ ರೂ. ಗುಂಡಿ ಮುಚ್ಚುವುದಕ್ಕೆ ಮೀಸಲಿರಿಸಿದ್ದು, ರಸ್ತೆ ಗುಂಡಿಗಳು ಬೀಳದಂತೆ ಎಚ್ಚರಿಕೆ ವಹಿಸುವುದಕ್ಕೆ ಸೂಚನೆ ನೀಡಲಾಗಿದೆ. ಒಂದೊಮ್ಮೆ ನಿರ್ವಹಣೆ ಸರಿಯಾಗಿ ಮಾಡದೆ ಇದ್ದಲ್ಲಿ ಗುತ್ತಿಗೆದಾರರನ್ನೇ ಹೊಣೆ ಮಾಡಲಾಗುವುದು. ಮರಗಳು ಬಿದ್ದು ಅಡಚಣೆಯಾದರೆ ಅದನ್ನು ತಪ್ಪಿಸಲು 21 ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.

ತ್ಯಾಜ್ಯ ವಿಲೇವಾರಿಗೆ ಯಾವುದೇ ಸಮಸ್ಯೆ ಇಲ್ಲ: ನಗರದಲ್ಲಿನ ತ್ಯಾಜ್ಯ ವಿಲೇವಾರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಬೆಳ್ಳಳ್ಳಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಇನ್ನು ಮೂರು ತಿಂಗಳು ತ್ಯಾಜ್ಯ ವಿಲೇವಾರಿ ಮಾಡುವುದಕ್ಕೆ ಅವಕಾಶವಿದ್ದು, ಯಾವುದೇ ಸಮಸ್ಯೆ ಆಗುವುದಿಲ್ಲ. ತ್ಯಾಜ್ಯ ವಿಂಗಡಣೆ ಪ್ರಮಾಣವೂ ಏರಿಕೆಯಾಗಿದೆ. ಈಗ ಹಸಿ ತ್ಯಾಜ್ಯ ಘಟಕಕ್ಕೆ ಹೋಗುವ ಪ್ರಮಾಣ ಹೆಚ್ಚಾಗಿದ್ದು, 800 ಟನ್‌ ಹಸಿ ತ್ಯಾಜ್ಯವನ್ನು ಘಟಕಗಳಿಗೆ ಕಳುಹಿಸಲಾಗುತ್ತಿದೆ ಎಂದರು.

ಪ್ರಾಣಿ ತ್ಯಾಜ್ಯ ವಿಲೇವಾರಿಗೆ ವಾಹನ: ಬಕ್ರೀದ್‌ ಹಿನ್ನೆಲೆಯಲ್ಲಿ ಪ್ರಾಣಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದಕ್ಕೆ ಪ್ರತ್ಯೇಕ ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ಪ್ರಾಣಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದಕ್ಕೆ ನಿರ್ದಿಷ್ಟ ಪ್ರದೇಶವನ್ನು ಗುರುತಿಸಲಾಗಿದೆ. ಇಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುವುದು. ಹಾಗೇ ಮಳೆಗಾಲದಲ್ಲಿ ಉಂಟಾಗಬಹುದಾದ ಅಪಾಯಗಳನ್ನು ತಪ್ಪಿಸಲು ಬಿಬಿಎಂಪಿಯ ವಿಶೇಷ ಆಯುಕ್ತರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಮಂಜುನಾಥ ಪ್ರಸಾದ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.