ಅಪಘಾತವಾದರೆ ಪಾಲಿಕೆಯೇ ಹೊಣೆ!
Team Udayavani, Oct 22, 2019, 10:32 AM IST
ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಗಳಿಂದಾಗಿ ಸಂಭವಿಸುವ ಅಪಘಾತಕ್ಕೆ ಬಿಬಿಎಂಪಿಯೇ ಹೊಣೆ ಎಂದು ಪುನರುಚ್ಚರಿಸಿ ರುವ ಹೈಕೋರ್ಟ್, ಅಂತಹ ಅಪಘಾತ ಗಾಯಾಳುಗಳಿಗೆ ಪರಿಹಾರ ನೀಡುವ ಕುರಿತು ಸಾರ್ವಜನಿಕ ಪ್ರಕಟಣೆ ಮೂಲಕ ವ್ಯಾಪಕ ಪ್ರಚಾರ ನೀಡಬೇಕು ಎಂದು ಬಿಬಿಎಂಪಿಗೆ ಆದೇಶಿಸಿದೆ.
ಈ ಕುರಿತಂತೆ ಕೋರಮಂಗಲದ ವಿಜಯ್ ಮೆನನ್ ಮತ್ತಿತರರು 2015ರಲ್ಲಿ ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಸೋಮವಾರ ಬಿಬಿಎಂಪಿಗೆ ಈ ನಿರ್ದೇಶನ ನೀಡಿತು.
ಗಾಯಾಳುಗಳಿಗೆ ಪರಿಹಾರದ ಬಗ್ಗೆ 10 ದಿನಗಳಲ್ಲಿ ಸಾರ್ವಜನಿಕರಿಗೆ ಬಿಬಿಎಂಪಿ ವ್ಯಾಪಕ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ನ.11ರೊಳಗೆ ಆ ಬಗ್ಗೆ ಕೋರ್ಟ್ಗೆ ವಿವರ ನೀಡಬೇಕು ಎಂದೂ ನಿರ್ದೇಶನ ನೀಡಿದೆ. ನಗರದ ರಸ್ತೆಗಳ ಸ್ಥಿತಿಗತಿ ಬಗ್ಗೆ ಯಾರೇ ದೂರು ನೀಡಿದರೂ ಪಾಲಿಕೆ ಕ್ರಮ ಕೈಗೊಳ್ಳಬೇಕು, ಯಾವುದೇ ವ್ಯಕ್ತಿ ಗುಂಡಿಗಳಿಂದ ಅಪಘಾತಕ್ಕೆ ಒಳಗಾದರೆ ಅಂತಹವರಿಗೆ ಪರಿಹಾರವನ್ನೂ ಸಹ ನೀಡಬೇಕು ಎಂದೂ ಈ ಹಿಂದೆ ಸ್ಪಷ್ಟವಾಗಿದೆ
ಹೇಳಲಾಗಿದೆ. ಈಗ ಮತ್ತೂಮ್ಮೆ ಪುನರುತ್ಛರಿಸಲಾಗುತ್ತಿದೆ ಎಂದು ನ್ಯಾಯಪೀಠ ಬಿಬಿಎಂಪಿಗೆ ಹೇಳಿತು. ಇದೇ ವೇಳೆ, ರಸ್ತೆ ಗುಂಡಿಗಳ ಅಪಘಾತಗಳಿಂದ ಗಾಯಗೊಂಡವರಿಗೆ ಪರಿಹಾರ ನೀಡಿದರೆ, ಬೇರೆ ಪರಿಣಾಮ ಗಳು ಉಂಟಾಗಬಹುದು. ಪರಿಹಾರಕ್ಕೆ ಎಲ್ಲರೂ ಅರ್ಜಿ ಸಲ್ಲಿಸಲು ಪ್ರಾರಂಭಿಸುತ್ತಾರೆ ಎಂದು ಆಯುಕ್ತರು ಸಲ್ಲಿಸಿದ ಪ್ರಮಾಣಪತ್ರಕ್ಕೆ ನ್ಯಾಯಪೀಠ ಅಸಮಧಾನ ವ್ಯಕ್ತಪಡಿಸಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ