ಬಿಬಿಎಂಪಿಗೆ ಬೂಸ್ಟ್‌ ನೀಡಿದ ತೆರಿಗೆ ಡೋಸ್‌!


Team Udayavani, Jan 18, 2022, 12:24 PM IST

ಬಿಬಿಎಂಪಿಗೆ ಬೂಸ್ಟ್‌ ನೀಡಿದ ತೆರಿಗೆ ಡೋಸ್‌!

ಬೆಂಗಳೂರು: ಕೊರೊನಾ ಅಲೆಯಿಂದ ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಜನ “ತೆರಿಗೆಯ ಡೋಸ್‌’ ನೀಡಿದ್ದಾರೆ!

ಕೋವಿಡ್‌-19 ಎರಡನೇ ಮತ್ತು ಮೂರನೇಅಲೆಗಳ ನಡುವೆಯೂ ಕಳೆದೆರಡು ವರ್ಷಗಳಿಗೆ ಹೋಲಿಸಿದರೆ, ಪ್ರಸಕ್ತ ಹಣಕಾಸು ವರ್ಷದಲ್ಲಿಬಿಬಿಎಂಪಿಯಲ್ಲಿ ಗರಿಷ್ಠ ಪ್ರಮಾಣದ ತೆರಿಗೆ ಸಂಗ್ರಹವಾಗಿದೆ. ಇದು ಪಾಲಿಕೆಗೆ “ಬೂಸ್ಟ್‌’ ನೀಡಿದಂತಾಗಿದೆ.

2021ರ ಏಪ್ರಿಲ್‌ನಿಂದ ಇದುವರೆಗೆ ಪಾಲಿಕೆವ್ಯಾಪ್ತಿಯಲ್ಲಿ 2,674 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದೆ. ಕರೊನಾ ಸೋಂಕು ಬರುವುದಕ್ಕಿಂತಮುನ್ನ ಅಂದರೆ 2019-20ನೇ ಸಾಲಿನಲ್ಲಿ ಮಾರ್ಚ್‌ ಅಂತ್ಯದವರೆಗೆ 2,681 ಕೋಟಿ ರೂ. ಮತ್ತು 2020-21ನೇ ಸಾಲಿನಲ್ಲಿ 2,777 ಕೋಟಿ ರೂ. ತೆರಿಗೆಸಂಗ್ರಹವಾಗಿತ್ತು. ಆದರೆ, ಈ ಬಾರಿ ಆರ್ಥಿಕ ವರ್ಷಅಂತ್ಯಗೊಳ್ಳಲು ಇನ್ನೂ ಎರಡೂವರೆ ತಿಂಗಳು ಬಾಕಿಇರುವಾಗಲೇ ಈ ಗುರಿ ತಲುಪಿರುವುದು ಅಧಿಕಾರಿಗಳಲ್ಲಿ ಖುಷಿ ಇಮ್ಮಡಿಗೊಳಿಸಿದೆ.

ಸಂಗ್ರಹವಾದ ಒಟ್ಟಾರೆ ತೆರಿಯಲ್ಲಿ ಆನ್‌ಲೈನ್‌ ಮೂಲಕ 1,405.33 ಕೋಟಿ ರೂ., ಬ್ಯಾಂಕ್‌ ಚಲನ್‌1,225.80 ಕೋಟಿ ರೂ. ಹಾಗೂ ನೇರ ಪಾವತಿ 43ಕೋಟಿ ರೂ. ಸೇರಿ ಒಟ್ಟು 2,674 ಕೋಟಿ ರೂ. ಆಸ್ತಿತೆರಿಗೆ ಪಾವತಿಯಾಗಿದೆ. ಆದರೆ, ವಾರ್ಷಿಕ ತೆರಿಗೆ ಸಂಗ್ರಹ ಗುರಿ ನಾಲ್ಕು ಸಾವಿರ ಕೋಟಿ ರೂ. ಆಗಿದೆ.

ಈ ಪೈಕಿ ಶೇ. 67ರಷ್ಟು ಗುರಿ ಸಾಧನೆಯಾಗಿದೆ. 2021-22ನೇ ಸಾಲಿನ ಬಜೆಟ್‌ ವೇಳೆ 3,500 ಕೋಟಿರೂ. ಗುರಿ ಇತ್ತು. ನಂತರದಲ್ಲಿ ಸರ್ಕಾರದ ಸೂಚನೆ ಮೇರೆಗೆ ಇದನ್ನು ಹೆಚ್ಚಿಸಲಾಗಿತ್ತು. ವಾರ್ಷಿಕವಾಗಿ ಆರ್ಥಿಕ ವರ್ಷದ ಆರಂಭದ ತಿಂಗಳಲ್ಲಿಯೇ (ಏ. 31ರ ಒಳಗೆ) ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5 ರಿಯಾಯಿತಿನೀಡಲಾಗುತ್ತದೆ. ಆದರೆ, 2021-22ನೇ ಸಾಲಿನಲ್ಲಿ ಕೋವಿಡ್‌ 2ನೇ ಅಲೆಯ ವೇಳೆ ಲಾಕ್‌ಡೌನ್‌ಜಾರಿಗೊಳಿಸಿದ್ದರಿಂದ 2021ರ ಜೂ. 30ರವರೆಗೆ ಶೇ.5ರ ರಿಯಾಯಿತಿ ನೀಡಲಾಗಿತ್ತು. ಈ ಅವಧಿಯಲ್ಲಿ ಹೆಚ್ಚಿನ ಶೇ. 40ರಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದೆ.

ಇದಾದ ನಂತರ ಪಾಲಿಕೆ ಕಂದಾಯ ಸಿಬ್ಬಂದಿತೆರಿಗೆ ಬಾಕಿ ಉಳಿಸಿಕೊಂಡ ಸುಸ್ತಿದಾರರಿಗೆ ನಿರಂತರ ನೊಟೀಸ್‌ ಜಾರಿಗೊಳಿಸಿದ್ದಾರೆ. ನಂತರ, ಚರಾಸ್ತಿಗಳಮುಟ್ಟುಗೋಲಿಗೆ ನೋಟೀಸ್‌ ನೀಡುತ್ತಿದ್ದಂತೆ ತೆರಿಗೆಸಂಗ್ರಹ ಹೆಚ್ಚಳವಾಗಿದೆ. ಇದಕ್ಕೆ ಉದಾಹರಣೆಗೆ ಕಳೆದನಾಲ್ಕು ವರ್ಷಗಳಿಂದ 33 ಕೋಟಿ ರೂ. ಆಸ್ತಿ ತೆರಿಗೆಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್‌ಗೆ ಬೀಗ ಹಾಕಿಕಠಿಣ ಕ್ರಮ ಕೈಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.ಕರೊನಾ ಸೋಂಕು ಹರಡುವಿಕೆ ತಡೆಗಟ್ಟಲುಲಾಕ್‌ಡೌನ್‌, ಕರ್ಫ್ಯೂ ಸೇರಿ ಇತರೆ ನಿರ್ಬಂಧಗಳನಡುವೆ ಆಸ್ತಿ ತೆರಿಗೆ ವಸೂಲಿ ಕಷ್ಟವೆಂದು ಪಾಲಿಕೆ ನಿರೀಕ್ಷಿಸಿತ್ತು. ಆದರೆ, ಸಾರ್ವಜನಿಕರು ಸಮರ್ಪಕವಾಗಿ ಆಸ್ತಿ ತೆರಿಗೆ ಪಾವತಿಸಿದ್ದಾರೆ.

2021-22ರ ತಿಂಗಳುವಾರು

ಆಸ್ತಿ ತೆರಿಗೆ ಸಂಗ್ರಹ ವಿವರ

ತಿಂಗಳು ತೆರಿಗೆ ಸಂಗ್ರಹ (ಕೋಟಿ

ರೂ. ಗಳಲ್ಲಿ)

ಏಪ್ರಿಲ್‌ 796

ಮೇ 478

ಜೂನ್‌ 433

ಜುಲೈ 195

ಆಗಸ್ಟ್ 151

ಸೆಪ್ಟೆಂಬರ್‌ 213

ಅಕ್ಟೋಬರ್‌ 111

ನವೆಂಬರ್‌ 86

ಡಿಸೆಂಬರ್‌ 126

ಜನವರಿ

(12ರವರೆಗೆ)

85

ಒಟ್ಟು 2,674 ಕೋಟಿ ರೂ.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.