ವೃಕ್ಷಗಳ ಸ್ಥಿತಿಗತಿ ತಿಳಿಯಲು ಬಿಬಿಎಂಪಿಯಿಂದ ಗಣತಿ


Team Udayavani, Mar 28, 2017, 12:32 PM IST

tree.jpg

ಬೆಂಗಳೂರು: ಪ್ರತಿಬಾರಿ ನಗರದಲ್ಲಿ ಮರ ಉರುಳಿ ಅನಾಹುತ ಸಂಭವಿಸಿದಾಗ ಶಿಥಿಲಗೊಂಡ ಮರಗಳನ್ನು ಪತ್ತೆ ಮಾಡಿ ತೆರವುಗೊಳಿಸಿ ಎಂದು ಸಾರ್ವಜನಿಕರಿಂದ ಒತ್ತಾಯ ಕೇಳಿಬರುತ್ತದೆ. ಅದರ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿ 2017-18ನೇ ಸಾಲಿನ ಬಜೆಟ್‌ನಲ್ಲಿ ನಗರದಲ್ಲಿರುವ ಮರಗಳ ಗಣತಿಗೆ ಮುಂದಾಗಿದ್ದು, ಅದಕ್ಕಾಗಿ 4 ಕೋಟಿ ರೂ. ಅನುದಾನ ಮೀಸಲಿರಿಸಿದೆ. 

ನಗರವನ್ನು ಹಸಿರೀಕರಣಗೊಳಿಸುವ ಉದ್ದೇಶದಿಂದ ನಗರದಾದ್ಯಂತ 10 ಲಕ್ಷ ಸಸಿಗಳನ್ನು ನೆಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದೆ. ಪ್ರತಿ ವರ್ಷ ಪಾಲಿಕೆಯ ಬಜೆಟ್‌ನಲ್ಲಿ ಲಕ್ಷಾಂತರ ಸಸಿಗಳನ್ನು ನೆಡುವ ಕಾರ್ಯಕ್ರಮ ಮುಂದುವರಿಯುತ್ತಿದ್ದರೂ, ಯೋಜನೆ ಸಮರ್ಪಕವಾಗಿ  ಜಾರಿಯಾಗದ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ಪರಿಸರ ಪ್ರಮಾಣ ಕಡಿಮೆಯಾಗುತ್ತಿದೆ ಎಂಬ ಆರೋಪಗಳು ಪರಿಸರವಾದಿಗಳ ಕಡೆಯಿಂದ ಕೇಳಿ ಬರುತ್ತಿದೆ. 

ನಗರದಲ್ಲಿ ಕಳೆದ 6 ವರ್ಷಗಳಲ್ಲಿ 7.47 ಲಕ್ಷ ಸಸಿಗಳನ್ನು ನೆಡಲಾಗಿದ್ದು, ಅವೆಲ್ಲವೂ ಮರವಾಗಿವೆ ಎಂಬ ಅಂಕಿ-ಅಂಶಗಳನ್ನು ಅಕಾರಿಗಳು ನೀಡುತ್ತಿದ್ದರೂ ವಾಸ್ತವದಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿ ಎಷ್ಟು ಮರಗಳಿವೆ ಎಂಬ ನಿಖರ ಮಾಹಿತಿ ಇಲ್ಲ. ಇದನ್ನೇ ಲಾಭವಾಗಿಸಿಕೊಂಡ ಕೆಲ ಅಕಾರಿಗಳು ಸಸಿಗಳನ್ನು ನೆಡಲಾಗಿದೆ ಎಂದು ಸುಳ್ಳು ಲೆಕ್ಕ ತೋರಿಸಿ ಪಾಲಿಕೆಗೆ ವಂಚಿಸಿರುವ ಬಗ್ಗೆ ದೂರುಗಳು ಬಂದಿವೆ. ಇದರ ಹಿನ್ನೆಲೆಯಲ್ಲಿ ನಗರದಲ್ಲಿರುವ ಮರಗಳ ಗಣತಿಗೆ ಪಾಲಿಕೆ ಮುಂದಾಗಿದೆ. 

ಮರಗಳಿಗೆ ಪ್ರತ್ಯೇಕ ಸಂಖ್ಯೆ: ಮರಗಳ ಸಮೀಕ್ಷೆ ವೇಳೆ ಪ್ರತಿಯೊಂದು ಮರಕ್ಕೆ ಪ್ರತ್ಯೇಕ ಗುರುತಿನ ಸಂಖ್ಯೆ ನೀಡಲು ಪಾಲಿಕೆ ಅಕಾರಿಗಳು ನಿರ್ಧರಿಸಿದ್ದಾರೆ. ಆ ಮೂಲಕ ನಗರದಲ್ಲಿ ಎಷ್ಟು ಮರಗಳಿವೆ? ಎಷ್ಟು ಪ್ರಭೇದದ ಮರಗಳಿವೆ? ಅಳಿವಿನ ಅಂಚಿನಲ್ಲಿರುವ ಮರಗಳು ಎಷ್ಟು? ಹೀಗೆ ಹಲವಾರು ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಜತೆಗೆ ಸಧೃಡ ಮತ್ತು ಟೊಳ್ಳು ಮರಗಳ ಮಾಹಿತಿ ಪಡೆದು, ಶಿಥಿಲಗೊಂಡಿರುವ ಮರಗಳನ್ನು ತೆರವುಗೊಳಿಸಲು ಯೋಚಿಸಲಾಗಿದೆ. ಮರ ಗಣತಿಗೆ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಸೇರಿ ಕಾಲೇಜು ವಿದ್ಯಾರ್ಥಿಗಳ ನೆರವು ಪಡೆಯುವ ಬಗ್ಗೆ ಪಾಲಿಕೆ ಚಿಂತನೆ ನಡೆಸಿದೆ. 

ಮರಗಳನ್ನು ದತ್ತು ಪಡೆಯಿರಿ!: ಮರಗಳ ಸಮೀಕ್ಷೆಯೊಂದಿಗೆ ಸಸಿಗಳನ್ನು ನೆಡುವ ಮೂಲಕ ನಗರವನ್ನು ಹಸಿರೀಕರಣಗೊಳಿಸಲು ಪಾಲಿಕೆ ತೀರ್ಮಾನಿಸಿದ್ದು, ಈ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮೊಬೈಲ್‌ ಅಪ್ಲಿಕೇಷನ್‌ ಅಭಿವೃದ್ಪಡಿಸುತ್ತಿದೆ. ಆ್ಯಪ್‌ ಮೂಲಕ ಸಾರ್ವಜನಿಕರು ಇಂತಹ ಜಾಗದಲ್ಲಿ ಸಸಿ ನೆಡಬೇಕು ಎಂಬ ಮನವಿ ಪಡೆದು ಅವರಿಗೆ ಬೇಕಾದ ಸಸಿಯನ್ನು ಪಾಲಿಕೆ ಸಿಬ್ಬಂದಿ ನೆಡುತ್ತಾರೆ. ಆದರೆ, ಆ ಸಸಿಯನ್ನು ದತ್ತು ಪಡೆದು ಪೋಷಿಸಿ, ಸಂರಕ್ಷಿಸುವ ಜವಾಬ್ದಾರಿ ಮನವಿ ಮಾಡಿದ ನಾಗರಿಕರಿಗೆ ಸೇರಿರುತ್ತದೆ. 

ಯಾವ್ಯಾವ ಮರಗಳಿವೆ
ನಗರದ ವ್ಯಾಪ್ತಿಯಲ್ಲಿ ಹೊಂಗೆ, ಮಹಾಗನಿ, ಬೇವು, ನಾಯಿ ನೇರಳೆ, ಜಂಭು ನೇರಳೆ, ಚರ್ರಿ, ತಬೂಬಿಯಾ ರೋಸಿಯಾ, ತಬೂಬಿಯಾ ಅವಲಾಂಡ, ನೆಲ್ಲಿ, ಜಕರಾಂಡ, ಸಂಪಿಗೆ, ಆಕಾಶ ಮಲ್ಲಿಗೆ, ಕಾಡುಬಾದಾಮಿ, ಹುಣಸೆ, ಮಾವು, ಆಲ, ಅರಳಿ, ಗೋಣಿ, ಅತ್ತಿ, ಬಸರಿ, ತೊರೆಮತ್ತಿ, ಸಿಸು, ಹೊನ್ನೆ, ಹೊಳೆದಾಸವಾಳ, ಮಳೆಮರ, ಹೂವರ್ಸಿ, ತಪಸಿ, ಬಸವನಪಾದ, ಟೆಕೋಮಾ, ಸೀಮಾರೂಬ, ಹಲಸು ಮರಗಳು ಹೆಚ್ಚಿವೆ.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.