ಪ್ಲೇಟ್‌ಲೆಟ್‌ ಖರೀದಿ ವೆಚ್ಚ ಭರಿಸಲಿದೆ ಪಾಲಿಕೆ


Team Udayavani, Aug 20, 2019, 3:09 AM IST

bbmp2

ಬೆಂಗಳೂರು: ಡೆಂಘೀ ಜ್ವರಕ್ಕೆ ತುತ್ತಾಗಿ ಪ್ಲೇಟ್‌ಲೆಟ್‌ಗಾಗಿ ಖಾಸಗಿ ರಕ್ತನಿಧಿಗಳಿಗೆ ಸಾವಿರಾರು ರೂ. ನೀಡಿ ಬಳಲಿರುವ ಬಡ ರೋಗಿಗಳ ನೆರವಿಗೆ ಧಾವಿಸಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, 2017ರ ಮಾದರಿಯಲ್ಲೇ ರೋಗಿಗಳ ಪ್ಲೇಟ್‌ಲೆಟ್‌ ವೆಚ್ಚ ಭರಿಸಲು ನಿರ್ಧರಿಸಿದೆ. ನಗರದಲ್ಲಿ ಡೆಂಘೀ ಸೋಂಕು ಹೆಚ್ಚುತ್ತಿದೆ. ಒಂದೆಡೆ ಪ್ಲೇಟ್‌ಲೆಟ್‌ ಬೇಡಿಕೆ ಜಾಸ್ತಿಯಾಗಿದೆ.

ಇನ್ನೊಂದೆಡೆ ಬಡರೋಗಿಗಳಿಗೆ ಅಗತ್ಯ ಪ್ರಮಾಣದ ಪ್ಲೇಟ್‌ಲೆಟ್‌ ಪೂರೈಸಲು ಸರ್ಕಾರಿ ಆಸ್ಪತ್ರೆಗಳಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಖಾಸಗಿ ರಕ್ತನಿಧಿಗಳ ಮೊರೆ ಹೋಗಬೇಕಾದ ಅನಿವಾರ್ಯತೆ ಉಂಟಾಗಿದ್ದು, ಬಡರೋಗಿಗಳು ಖಾಸಗಿ ರಕ್ತನಿಧಿ ಕೇಂದ್ರಗಳಲ್ಲಿ ಒಂದು ಯುನಿಟ್‌ ಪ್ಲೇಟ್‌ಲೆಟ್‌ಗೆ ಸಾವಿರಾರು ರೂ. ಭರಿಸಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಹೀಗಾಗಿ, ಬಿಬಿಎಂಪಿ ಮೇಯರ್‌ ನಿಧಿಯ, ಆಸ್ಪತ್ರೆಗಳ ಔಷಧ ಖರೀದಿ ವೆಚ್ಚದಲ್ಲಿ ರೋಗಿಗಳ ಪ್ಲೇಟ್‌ಲೆಟ್‌ ಖರೀದಿ ವೆಚ್ಚವನ್ನು ಬರಿಸುತ್ತಿದೆ. ರೋಗಿಗಳು ಅಥವಾ ಅವರ ಸಂಬಂಧಿಗಳು ಬಿಬಿಎಂಪಿ ವಲಯ ಆರೋಗ್ಯಾಧಿಕಾರಿಗೆ ತಾವು ಖರೀದಿಸಿದ ಪ್ಲೇಟ್‌ಲೆಟ್‌ನ ಬಿಲ್‌ನೊಂದಿಗೆ ಅರ್ಜಿಸಲ್ಲಿಸಿ ವೆಚ್ಚ ಮಾಡಿದ ಹಣವನ್ನು ಮರಳಿ ಪಡೆಯಬಹುದು.

2017ರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗಿದ್ದವು. ಮೇ ಅಂತ್ಯಕ್ಕೆ ಬೆರಳೆಣಿಕೆಯಷ್ಟಿದ್ದ ಪ್ರಕರಣಗಳ ಸಂಖ್ಯೆ, ಜೂನ್‌ ಒಂದೇ ತಿಂಗಳಲ್ಲಿ ಸಾವಿರ ಗಡಿ ದಾಟಿತ್ತು. ಆ ವರ್ಷಾಂತ್ಯಕ್ಕೆ ಸೋಂಕಿತರ ಸಂಖ್ಯೆ 7,000 ಗಡಿ ಮೀರಿತ್ತು. ಆಗಲೂ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಲೇಟ್‌ಲೆಟ್‌ ಕೊರತೆಯಾಗಿ, ರೋಗಿಗಳು ಖಾಸಗಿಯವರಿಂದಲೇ ಖರೀದಿ ಮಾಡುತ್ತಿದ್ದರು. ಹೀಗಾಗಿ, ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಗರದ ವ್ಯಾಪ್ತಿಯಲ್ಲಿ ರೋಗಿಗಳು ಪ್ಲೇಟ್‌ಲೆಟ್‌ಗಾಗಿ ಮಾಡಿರುವ ವೆಚ್ಚವನ್ನು ಬಿಬಿಎಂಪಿಯಿಂದಲೇ ಭರಿಸಲು ತೀರ್ಮಾನಿಸಿದ್ದರು.

ಕಳೆದ ವರ್ಷ ಆರೋಗ್ಯ ಇಲಾಖೆ ಮುಂಜಾಗ್ರತೆಯಿಂದಾಗಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ಪ್ಲೇಟ್‌ಲೆಟ್‌ ಅಭಾವ ಉಂಟಾಗಿರಲಿಲ್ಲ. ಪ್ರಸಕ್ತ ವರ್ಷ ಮತ್ತೆ ಡೆಂಘೀ ಉಲ್ಬಣವಾಗಿ ತಿಂಗಳ ಅಂತರದಲ್ಲಿ 2000 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ವರ್ಷಾರಂಭದಿಂದ ಇಲ್ಲಿಯವರೆ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಕಾರಣ, 2017ರ ಮಾದರಿಯಲ್ಲಿ ಪ್ಲೇಟ್‌ಲೆಟ್‌ ವೆಚ್ಚ ಬರಿಸಲು ನಿರ್ಧರಿಸಲಾಗಿದೆ.

ಏಕರೂಪ ದರ, ನಿಯಂತ್ರಣಕ್ಕೆ ಮನವಿ: ನಗರದಲ್ಲಿ ಪ್ಲೇಟ್‌ಲೆಟ್‌ ಬೇಡಿಕೆ ಹೆಚ್ಚಿರುವ ಕಾರಣ ಖಾಸಗಿ ರಕ್ತನಿಧಿ ಕೇಂದ್ರಗಳಲ್ಲಿ ಪ್ಲೇಟ್‌ಲೆಟ್‌ ಅನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. 50 ಎಂ.ಎಲ್‌ನ ಒಂದು ಯುನಿಟ್‌ಗೆ 600ರಿಂದ 1,000 ರೂ.ವರೆಗೂ ದರ ಪಡೆಯುತ್ತಿದ್ದು, ಖಾಸಗಿ ರಕ್ತನಿಧಿಗಳಲ್ಲಿ ಏಕ ದರ ಪಾಲನೆ ಮಾಡುತ್ತಿಲ್ಲ. ಅಲ್ಲದೆ ಒಮ್ಮೆಗೆ 40 ಸಾವಿರಕ್ಕೂ ಹೆಚ್ಚು ಪ್ಲೇಟ್‌ಲೆಟ್‌ ಲಭ್ಯವಾಗುವ ಸಿಂಗಲ್‌ ಡೋನರ್‌ ಪ್ಲೇಟ್‌ಲೆಟ್ಸ್‌ ಒಂದು ಯುನಿಟ್‌ಗೆ 10 ರಿಂದ 12 ಸಾವಿರ ರೂ.ಗಿಂತಲೂ ಹೆಚ್ಚು ದರ ಪಡೆಯುತ್ತಿದ್ದಾರೆ.

ಇನ್ನು ಖಾಸಗಿ ಆಸ್ಪತ್ರೆಗಳು ರಕ್ತನಿಧಿ ಕೇಂದ್ರದಿಂದ ತಂದು ತಮ್ಮಲ್ಲಿ ದಾಖಲಾದ ರೋಗಿಗಳಿಗೆ ನೀಡುವ ಪ್ಲೇಟ್‌ಲೆಟ್‌ಗೂ ದುಪ್ಪಟ್ಟು ದರ ವಿಧಿಸುತ್ತಿವೆ. ಇವೆಲ್ಲದಕ್ಕೂ ತಡೆ ಹಾಕಲು ಬಿಬಿಎಂಪಿ ಹಿರಿಯ ಆರೋಗ್ಯ ಅಧಿಕಾರಿಗಳು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿದ್ದು, ಖಾಸಗಿ ಆಸ್ಪತ್ರೆ ಹಾಗೂ ರಕ್ತ ನಿಧಿ ಕೇಂದ್ರಗಳಿಗೆ ಏಕರೂಪ ದರ ನಿಯಮ ಜಾರಿಗೊಳಿಸಿ ಅವುಗಳನ್ನು ನಿಯಂತ್ರಿಸಲು ಮನವಿ ಮಾಡಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?: ಪ್ಲೇಟ್‌ಲೆಟ್‌ ಖರೀದಿ ಮಾಡಿರುವವರು ತಮ್ಮ ವಾರ್ಡ್‌ನ ಆರೋಗ್ಯ ನಿರೀಕ್ಷಕ ಮೂಲಕ ವಲಯ ಆರೋಗ್ಯಾಧಿಕಾರಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಜತೆ ಖರೀದಿ ಮಾಡಿದ ಬಿಲ್‌ ಹಾಗೂ ರೋಗಿಯ ವೈದ್ಯಕೀಯ ದಾಖಲೆಗಳ ಒಂದು ಪ್ರತಿ ಹಾಗೂ ಬಿಬಿಎಂಪಿ ವ್ಯಾಪ್ತಿ ನಿವಾಸಿ ಎಂಬುದನ್ನು ದೃಢ ಪಡೆಸಲು ಗುರುತಿನಚೀಟಿ ಒಂದು ಇರಬೇಕು.

ನಗರದ ಯಾವುದೇ ಆಸ್ಪತ್ರೆ ಅಥವಾ ಖಾಸಗಿ ರಕ್ತನಿಧಿ ಕೇಂದ್ರಗಳಲ್ಲಿ ಪ್ರಸ್ತಕ ವರ್ಷ ಪ್ಲೇಟ್‌ಲೆಟ್‌ ಖರೀದಿ ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. “ಅರ್ಜಿಯು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಬಳಿ ಪರಿಶೀಲನೆಯಾಗಿ ಸದ್ಯ ಚಾಲ್ತಿ ಇರುವ ಮೆಡಿಕಲ್‌ ಬೋರ್ಡಿನಿಂದ ಅನುಮೋದನೆ ಪಡೆದು ಬಳಿಕ ರೋಗಿಯ ಖಾತೆಗೆ ಹಣ ಭರಿಸಲಾಗುತ್ತದೆ. ಈ ಪ್ರಕ್ರಿಯೆಗೆ 15 ದಿನಗಳಾಗಬಹುದು’ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್‌) ನಿರ್ಮಲಾ ಬುಗ್ಗಿ ತಿಳಿಸಿದರು.

ಬಡರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ 2017ರ ಮಾದರಿಯಲ್ಲಿಯೇ ರೋಗಿಗಳ ಪ್ಲೇಟ್‌ಲೆಟ್‌ ಖರೀದಿ ವೆಚ್ಚ ಭರಿಸುವಂತೆ ಆಯುಕ್ತರಿಗೆ ಆದೇಶಿಸಿದ್ದೇನೆ. ಎಲ್ಲಾ ಖಾಸಗಿ ರಕ್ತನಿಧಿ ಕೇಂದ್ರಗಳಲ್ಲೂ ಏಕರೂಪ ದರ ನಿಯಮ ಜಾರಿ ಕುರಿತು ಆರೋಗ್ಯ ಇಲಾಖೆ ಜತೆ ಚರ್ಚಿಸಲಾಗುತ್ತಿದೆ.
-ಗಂಗಾಬಿಕೆ, ಮೇಯರ್‌

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.