ಹಿಜಾಬ್‌ಗಾಗಿ ಪರೀಕ್ಷೆ ಬಹಿಷ್ಕರಿಸಿದರೆ ಮತ್ತೆ ಬರೆಯಲು ಅವಕಾಶವಿಲ್ಲ : ಬಿ.ಸಿ.ನಾಗೇಶ್ ಸೂಚನೆ

ಕಿರಿಕಿರಿ ಮಾಡಿದರೆ ಎದುರಿಸಲು ಪೊಲೀಸ್‌ ಇಲಾಖೆ ಸನ್ನದ್ಧ

Team Udayavani, Mar 27, 2022, 9:00 PM IST

ಹಿಜಾಬ್‌ಗಾಗಿ ಪರೀಕ್ಷೆ ಬಹಿಷ್ಕರಿಸಿದರೆ ಮತ್ತೆ ಬರೆಯಲು ಅವಕಾಶವಿಲ್ಲ : ಬಿ.ಸಿ.ನಾಗೇಶ್ ಸೂಚನೆ

8.74 ಲಕ್ಷ ವಿದ್ಯಾರ್ಥಿಗಳಿಗೆ 3444 ಪರೀಕ್ಷೆ ಕೇಂದ್ರ ಸ್ಥಾಪನೆ
ಬಾಗಲಕೋಟೆ : ರಾಜ್ಯಾದ್ಯಂತ ಮಾ.28ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಸುಮಾರು 8.74 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿಯೊಬ್ಬರಿಗೂ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಹೈಕೋರ್ಟ್‌ ನಿರ್ದೇಶನದಂತೆ ಎಲ್ಲರೂ ಸಮವಸ್ತ್ರದೊಂದಿಗೆ ಆಗಮಿಸಿ ಪರೀಕ್ಷೆ ಬರೆಯಬೇಕು. ಒಂದು ವೇಳೆ ಯಾರಾದರೂ ಬಹಿಷ್ಕಾರ ಮಾಡಿದರೆ ಅಂತವರಿಗಾಗಿ ಪ್ರತ್ಯೇಕ ಪರೀಕ್ಷೆ ನಡೆಸಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮವಸ್ತ್ರ ವಿಷಯದಲ್ಲಿ ಹೈಕೋರ್ಟ್‌ ಮೂರು ವಿಷಯ ಸ್ಪಷ್ಟವಾಗಿ ಹೇಳಿದೆ. ಇದನ್ನು ಯಾರೂ ಉಲ್ಲಂಘಿಸುವಂತಿಲ್ಲ. ಅಲ್ಲದೇ ಮಕ್ಕಳ ಶೈಕ್ಷಣಿಕ ಭವಿಷ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಒಂದು ಮುಖ್ಯ ಘಟ್ಟ. ಎಲ್ಲ ವಿದ್ಯಾರ್ಥಿಗಳೂ ಸಮವಸ್ತ್ರದೊಂದಿಗೆ ಪರೀಕ್ಷೆ ಎದುರಿಸಲಿದ್ದಾರೆ. ಎಲ್ಲೋ 100 ವಿದ್ಯಾರ್ಥಿಗಳು ಮಾತ್ರ ವಿರೋಧಿಸಿದ್ದು, ಅವರೂ ಪರೀಕ್ಷೆ ವಿಷಯದಲ್ಲಿ ವಿರೋಧ ಮಾಡಲ್ಲ ಎಂಬ ವಿಶ್ವಾಸವಿದೆ. ರಾಜ್ಯದಲ್ಲಿ 8.74 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅವರಿಗಾಗಿ 3444 ಪರೀಕ್ಷೆ ಕೇಂದ್ರ ಸ್ಥಾಪಿಸಲಾಗಿದೆ. 48 ಸಾವಿರ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಎರಡು ವರ್ಷ ಕೋವಿಡ್‌ ಸಮಸ್ಯೆ ಎದುರಿಸಿದ್ದು, ಈ ಬಾರಿಯೂ ಮುಂಜಾಗ್ರತಾ ಕ್ರಮವಾಗಿ ಕೊಠಡಿಗಳನ್ನು ಸಾನಿಟೈಜೇಶನ್‌ ಮಾಡಲಾಗಿದೆ. ಎಲ್ಲ ಸುರಕ್ಷತೆಗಳೊಂದಿಗೆ ಪರೀಕ್ಷೆ ಶಿಸ್ತುಬದ್ಧವಾಗಿ ನಡೆಯಲಿವೆ. ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಹಿಜಾಬ್‌ ವಿಷಯದಲ್ಲಿ ಶಿಕ್ಷಕರು, ಪರೀಕ್ಷೆ ಅಧೀಕ್ಷಕರು ಸಹಿತ ಅಧಿಕಾರಿಗಳಿಗೆ ಯಾವುದೇ ರೀತಿಯ ಕಿರಿಕಿರಿ ಮಾಡಿದರೆ ಅದನ್ನು ಎದುರಿಸಲು ಪೊಲೀಸ್‌ ಇಲಾಖೆ ಸಿದ್ಧವಿದೆ. ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಇರಲಿದೆ. ಹಿಜಾಬ್‌ ಧರಿಸುವವರು, ಶಾಲಾ ಆವರಣದವರೆಗೆ ಮಾತ್ರ ಹಾಕಿಕೊಂಡು ಬರಬಹುದು. ಪರೀಕ್ಷೆ ಕೊಠಡಿಯೊಳಗೆ ಸಮವಸ್ತ್ರದಲ್ಲೇ ಇರಬೇಕು. ಎಸ್ಸೆಸ್ಸೆಲ್ಸಿ ಮಕ್ಕಳು ಯಾವುದೇ ಭಯವಿಲ್ಲದೇ ಪರೀಕ್ಷೆ ಎದುರಿಸಬೇಕು.

ಇದನ್ನೂ ಓದಿ : ತಂದೆ ಮಕ್ಕಳ ನಡುವಿನ ಜಗಳ, ತಂದೆ ಸಾವಿನಲ್ಲಿ ಅಂತ್ಯ : ಕಿರಿಯ ಮಗಳು ಪೋಲೀಸರ ವಶಕ್ಕೆ

ಕೊರೊನಾ ಹಿನ್ನೆಲೆಯಲ್ಲಿ ಶೇ.80 ಪಠ್ಯಕ್ರಮ ಪೂರ್ಣಗೊಂಡಿದ್ದು, ಅದೇ ಪಠ್ಯಕ್ರಮ ಅನುಸಾರವಾಗಿ ಪ್ರಶ್ನೆ ಪತ್ರಿಕೆ ಇರಲಿವೆ. ಈ ಬಾರಿ ಆಯ್ಕೆ ಪ್ರಶ್ನೆಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಸಮವಸ್ತ್ರ ನಿಗದಿಯಾಗಿದೆ. ಆಯಾ ಖಾಸಗಿ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಬರಬೇಕು. ಬಾಹ್ಯ ಮತ್ತು ರಿಪಿಟರ್ ವಿದ್ಯಾರ್ಥಿಗಳಿಗೆ ಇದು ಅನ್ವಯಿಸಲ್ಲ. ರೆಗ್ಯೂಲರ್‌ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಂಹಿತೆ ಅನ್ವಯಿಸಲಿದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.