ಬಿಡಿಎ: ಅಕ್ರಮ ಕಟ್ಟಡ ಸಕ್ರಮಕ್ಕೆ ಚಾಲನೆ


Team Udayavani, Jan 3, 2021, 1:14 PM IST

ಬಿಡಿಎ: ಅಕ್ರಮ ಕಟ್ಟಡ ಸಕ್ರಮಕ್ಕೆ ಚಾಲನೆ

ಬೆಂಗಳೂರು: ಬಿಡಿಎ ಸ್ವಾಧೀನಪಡಿಸಿಕೊಂಡ ಜಾಗದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಕಟ್ಟಡಗಳನ್ನು ಸಕ್ರಮಗೊಳಿಸುವ ಮೂಲಕ ಮರುಮಂಜೂರಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಕಾಯ್ದೆ 1976ರ ಕಲಂ 38 (ಸಿ) ತಿದ್ದುಪಡಿಗೊಳಿಸಿ ಹೊಸದಾಗಿ ಕಲಂ 38 (ಡಿ) ಜಾರಿಗೊಳಿಸಿ ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಈಗ ಅದರ ಮುಂದುವರಿದಭಾಗವಾಗಿ ಭೂಸ್ವಾಧೀನಕ್ಕೊಳಪಟ್ಟ ಜಮೀನಿನಲ್ಲಿನಅನಧಿಕೃತ ಕಟ್ಟಡಗಳನ್ನು ಸರ್ಕಾರದ ಸುಗ್ರೀವಾಜ್ಞೆ ದಿನಾಂಕದಿಂದ 12 ವರ್ಷಗಳ ಹಿಂದೆ ವಾಸಯೋಗ್ಯ ಮನೆಗಳನ್ನು ನಿರ್ಮಿಸಿದ್ದಲ್ಲಿ ಮರುಮಂಜೂರಾತಿ ವ್ಯಾಪ್ತಿಯಲ್ಲಿ ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ.

ಮೊದಲ ಹಂತದಲ್ಲಿ ಪಿಳ್ಳಣ್ಣ ಗಾರ್ಡನ್‌ 3ನೇ ಹಂತದ ಬಡಾವಣೆಯಲ್ಲಿ 783 ಅನಧಿಕೃತ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪೈಕಿ 516 ಅನಧಿಕೃತ ಕಟ್ಟಡದಾರರಿಗೆಡಿಮಾಂಡ್‌ ನೋಟಿಸ್‌ ಜಾರಿಗೊಳಿಸಲಾಗಿದೆ. ಆರ್‌ಎಂವಿ ಬಡಾವಣೆಯಲ್ಲಿ 160 ಅನಧಿಕೃತ ಕಟ್ಟಡದಾರರು ಮತ್ತುಎಚ್‌ಆರ್‌ಬಿಆರ್‌ ಬಡಾವಣೆಯಲ್ಲಿ 41 ಅನಧಿಕೃತ ಕಟ್ಟಡ  ದಾರರಿಗೆ ಡಿಮಾಂಡ್‌ ನೋಟಿಸ್‌ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ : ಮುಂದಿನ ಚುನಾವಣೆಯಲ್ಲಿ 140 ಶಾಸಕರ ಗೆಲುವಿನ ಗುರಿ, ರಾಜ್ಯದಲ್ಲಿ ಶೀಘ್ರ ಪ್ರವಾಸ: ಬಿಎಸ್ ವೈ

ಪೂರ್ವ ವಿಭಾಗಕ್ಕೆ ಸಂಬಂಧಪಟ್ಟಂತೆ ಎಚ್‌ಎಸ್‌ಆರ್‌ಬಡಾವಣೆಯಲ್ಲಿ 555 ಅನಧಿಕೃತ ಕಟ್ಟಡ ಗುರುತಿಸಿದ್ದು,ಈ ಪೈಕಿ 113 ಅನಧಿಕೃತ ಕಟ್ಟಡದಾರರಿಗೆ ಡಿಮಾಂಡ್‌ನೋಟಿಸ್‌ ಜಾರಿಗೊಳಿಸಲಾಗಿದೆ. ಉಳಿದ ಬಡಾವಣೆಗಳಿಗೆ ಹಂತ-ಹಂತವಾಗಿ ನೋಟಿಸ್‌ ಜಾರಿಗೊಳಿಸುವ ಪ್ರಕ್ರಿಯೆಚಾಲ್ತಿಯಲ್ಲಿದೆ. ಈ ಬಡಾವಣೆಗಳ ಬಗ್ಗೆ ಪ್ರಾಧಿಕಾರದಕಂದಾಯ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳಸಹಯೋಗದೊಂದಿಗೆ ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳ ಮಾಲಿಕರಿಗೆ ತಿಳಿವಳಿಕೆ ಪತ್ರ ಜಾರಿಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಿ :

ನಿಗದಿತ ಅರ್ಜಿ ನಮೂನೆಯೊಂದಿಗೆ ಜಮೀನಿನ ಮೂಲ ಖಾತೆದಾರರಿಂದ ಖರೀದಿಸಲ್ಪಟ್ಟ ಕಂದಾಯ ನಿವೇಶನಗಳಲ್ಲಿನ ಕಟ್ಟಡದ ಕ್ರಯಪತ್ರಗಳ ದೃಢೀಕೃತ ಪ್ರತಿ, ಜಮೀನಿನ ಮೂಲ ಖಾತೆದಾರರಿಂದ ಖರೀದಿಸಲ್ಪಟ್ಟ ಕಂದಾಯ ನಿವೇಶನದಲ್ಲಿನ ಕಟ್ಟಡ ಕ್ರಯಪತ್ರಗಳ ಇತ್ತೀಚಿನವರೆಗಿನ ನಮೂನೆ-15ರಲ್ಲಿ ಮೂಲಋಣಭಾರ ಪ್ರಮಾಣಪತ್ರ, ನಿಗದಿತ ನಮೂನೆಯಲ್ಲಿ ಇತ್ತೀಚಿನ ಭಾವಚಿತ್ರ/ ಮಾದರಿ ಸಹಿ ದೃಢೀಕರಣ ಪತ್ರ (ಗೆಜೆಟೆಡ್‌ ಅಧಿಕಾರಿ ದೃಢೀಕರಣ), ಸ್ವ-ಪ್ರಮಾಣಪತ್ರ (ನೋಟರಿ ದೃಢೀಕೃತ), ಇತ್ತೀಚಿನ ಕಂದಾಯ ರಸೀದಿ, ಖಾತಾ ದೃಢೀಕರಣ ಪತ್ರ, ಖಾತಾ ನಕಲು ಪ್ರತಿ,ಮಂಜೂರಾದ ಕಟ್ಟಡದ ನಕ್ಷೆ, ನೀರಿನ ಸಂಪರ್ಕ ಕಾರ್ಯಾದೇಶ, ವಿದ್ಯುತ್‌ ಸಂಪರ್ಕ ಕಾರ್ಯಾದೇಶ, ವಾಸದ ವಿಳಾಸಕ್ಕೆ ಪುರಾವೆ (ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಇತರೆ) ಈ ಎಲ್ಲಾ ದಾಖಲಾತಿಗಳೊಂದಿಗೆ ಹಾಗೂ ನಿಗದಿತ ಶುಲ್ಕವನ್ನು ಕಡ್ಡಾಯವಾಗಿ ಆನ್‌ಲೈನ್‌ ಮೂಲಕ ಪಾವತಿಸತಕ್ಕದ್ದು ಎಂದು ಬಿಡಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.