ಬಿಡಿಎ ತೆಕ್ಕೆಗೆ 40 ಎಕರೆಗೂ ಅಧಿಕ ಆಸ್ತಿ


Team Udayavani, Mar 18, 2020, 3:08 AM IST

bda-tekke

ಬೆಂಗಳೂರು: ತನ್ನ ಸ್ವತ್ತಿನಲ್ಲಿ ನಿರ್ಮಿಸಿರುವ ಅನಧಿಕೃತ ಕಟ್ಟಡ, ಶೆಡ್‌ಗಳ ತೆರವು ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಡೆಸುತ್ತಿದ್ದು, ಮೂರು ವರ್ಷದಲ್ಲಿ ವಿವಿಧ ಕಡೆ ನೂರಾರು ಕೋಟಿ ರೂ. ಮೌಲ್ಯದ 40 ಎಕರೆಗೂ ಅಧಿಕ ಆಸ್ತಿ ವಶಕ್ಕೆ ಪಡೆದಿದೆ.

ನಗರದ ಹಲವೆಡೆ ಪ್ರಾಧಿಕಾರದ ಆಸ್ತಿಗಳಿದ್ದು, ಕೆಲ ಆಸ್ತಿಗಳು ಒತ್ತುವರಿಯಾಗಿವೆ. ಬಿಡಿಎ ಪೊಲೀಸ್‌ ದಳ ಸಹಕಾರದಲ್ಲಿ ಅಧಿಕಾರಿಗಳು ತೆರವು ಕಾರ್ಯ ನಡೆಸುತ್ತಿದ್ದು, 2017-18ನೇ ಸಾಲಿನಲ್ಲಿ ವಿವಿಧ ಬಡಾವಣೆಗಳಲ್ಲಿ 24.10 ಎಕರೆ, 2018-19ನೇ ಸಾಲಿನಲ್ಲಿ 12.24 ಎಕರೆ, 2019-20ನೇ ಸಾಲಿನಲ್ಲಿ 5 ಎಕರೆಗೂ ಅಧಿಕ ಜಾಗವನ್ನು ತೆರವುಗೊಳಿಸಿ ಪ್ರಾಧಿಕಾರದ ಸುಪರ್ದಿಗೆ ಪಡೆಯಲಾಗಿದೆ.

2017-18ನೇ ಸಾಲಿನಲ್ಲಿ ಎಚ್‌ಬಿಆರ್‌1ನೇ ಹಂತ, 5ನೇ ಬ್ಲಾಕ್‌ ಬಡಾವಣೆ, ವಿಶ್ವೇಶ್ವರಯ್ಯ ಬಡಾವಣೆ, ಬಿಟಿಎಂ 2ನೇ ಹಂತ, ಎಚ್‌ಎಸ್‌ಆರ್‌ 6ನೇ ಸೆಕ್ಟರ್‌, ಎಚ್‌ಎಸ್‌ಆರ್‌ 7ನೇ ಸೆಕ್ಟರ್‌, ಎಂಆರ್‌ಸಿಆರ್‌ ಬಡಾವಣೆ, ಬಿಟಿಎಂ ಲೇಔಟ್‌, ಎಚ್‌ಎಸ್‌ಆರ್‌ ಲೇಔಟ್‌, ಬನಶಂಕರಿ 6ನೇ ಹಂತ, ಸಾದರಮಂಗಲ ಮತ್ತು ಹೂಡಿ , ಜೆ.ಪಿ.ನಗರ 2ನೇ ಫೇಸ್‌ ಬಡಾವಣೆ, ಜ್ಞಾನಭಾರತಿ ಬಡಾವಣೆ, ಅರ್ಕಾವತಿ ಬಡಾವಣೆ , ರಾಜೀವ್‌ ಗಾಂಧಿ ಬಡಾವಣೆಗಳಲ್ಲಿ ಒತ್ತುವರಿಯಾದ ಹಲವು ಜಾಗವನ್ನು ಬಿಡಿಎ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

2018-19ರ ಸಾಲಿನಲ್ಲಿ ಎಚ್‌.ಎಸ್‌.ಆರ್‌ 1ನೇ ಸೆಕ್ಟರ್‌, ಸರ್‌.ಎಂ.ವಿಶ್ವೇಶ್ವರಯ್ಯ ಬಡಾವಣೆ, ಚಂದ್ರಾ ಬಡಾವಣೆ, ಬನಶಂಕರಿ 3ನೇ ಹಂತ , ಕೋರಮಂಗಲ 4ನೇ ಬ್ಲಾಕ್‌, ಎಸ್‌ಎಂವಿಎಲ್‌ 7ನೇ ಬ್ಲಾಕ್‌ಗಳಲ್ಲಿ ಒತ್ತುವರಿಯಾದ ಕೆಲವು ಜಾಗವನ್ನು ತೆರವುಗೊಳಿಸಿದ್ದಾರೆ.

2019-20ನೇ ಸಾಲಿನಲ್ಲಿ ರಾಜಾಜಿನಗರ ಕೈಗಾರಿಕಾ ಬಡಾವಣೆಯ (ಸಾಣೆಗುರುವನಹಳ್ಳಿ ಗ್ರಾಮ) 10 ಕೋಟಿ ರೂ. ಮೌಲ್ಯದ 8 ಸಾವಿರ ಅಡಿ ಜಾಗ ತೆರವು, ನಾಗರಭಾವಿ ಗ್ರಾಮದ 40 ಕೋಟಿ ರೂ. ಬೆಲೆಬಾಳುವ 24 ಗುಂಟೆ ಜಾಗ ತೆರವು, ನಾಗವಾರ ಗ್ರಾಮದ 300 ಕೋಟಿ ರೂ. ಬೆಲೆಬಾಳುವ ಜಾಗ ತೆರವು ಸೇರಿದಂತೆ ಹಲವು ಜಾಗಗಳನ್ನು ತೆರವುಗೊಳಿಸಿದ್ದಾರೆ.

ಪ್ರಭಾವಿಗಳಿಂದ ಒತ್ತುವರಿ?: ಬಿಡಿಎ ಹಲವಾರು ವರ್ಷಗಳಿಂದ ಒತ್ತುವರಿಯಾದ ಆಸ್ತಿಗಳನ್ನು ತೆರವುಗೊಳಿಸಿ ಜಾಗದಲ್ಲಿ ಪ್ರಾಧಿಕಾರದ ಬೋರ್ಡ್‌ ಹಾಕಲಾಗುತ್ತಿದೆ. ಆದರೂ, ಒತ್ತುವರಿ ತೆರವು ಇನ್ನೂ ಬಾಕಿ ಇದೆ. ಬಿಡಿಎ ಜಾಗವನ್ನು ಕೆಲ ಪ್ರಭಾವಿ ನಾಯಕರೇ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿವೆ. ಕೆಲ ಆಸ್ತಿಗಳನ್ನು ತೆರವುಗೊಳಿಸಲು ಅಧಿಕಾರಿಗಳು ಪರದಾಡಬೇಕಿದ್ದು, ಕಳೆದ 3 ವರ್ಷದಲ್ಲಿ ಒತ್ತುವರಿ ತೆರವು ಪ್ರಮಾಣ ಕಡಿಮೆಯಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ದೊಡ್ಡ ಕಾರ್ಯಾಚರಣೆಗೆ ಚಿಂತನೆ: ಮುಂದಿನ ದಿನಗಳಲ್ಲಿ 5 ಸಾವಿರ ಕೋಟಿ ರೂ. ಮೌಲ್ಯದಷ್ಟು ಒತ್ತುವರಿ ಯಾಗಿರುವ ಜಾಗವನ್ನು ಬಿಡಿಎ ವಶಪಡಿಸಿಕೊಳ್ಳುವ ಕಾರ್ಯಾಚರಣೆಗೆ ಚಿಂತನೆ ನಡೆಸಲಾಗಿದೆ. ಈ ಸಂಬಂಧ ಸರ್ವೇ ಹಾಗೂ ಸ್ಥಳ ಗುರುತಿಸುವ ಕಾರ್ಯ ನಡೆಯುತ್ತಿದೆ. ಹಂತ -ಹಂತವಾಗಿ ತೆರವು ಮಾಡಲಾಗುವುದು ಎಂದು ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒತ್ತುವರಿಯಾದ ಪ್ರಾಧಿಕಾರದ ಆಸ್ತಿ ಎಷ್ಟು ಎಂಬುದರ ಬಗ್ಗೆ ಸರ್ವೇ ನಡೆಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಒಂದು ತಿಂಗಳೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
-ಡಾ.ಜಿ.ಸಿ.ಪ್ರಕಾಶ್‌, ಬಿಡಿಎ ಆಯುಕ್ತ

* ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.