ಬಿಡಿ ಮನೆ ನಿರ್ಮಾಣಕ್ಕೆ ಮುಂದಾದ ಬಿಡಿಎ


Team Udayavani, Aug 10, 2018, 12:15 PM IST

bidi-mane.jpg

ಬೆಂಗಳೂರು: ಪರಿಸರ ಸ್ನೇಹಿ ವಿಲ್ಲಾಗಳತ್ತ ಚಿತ್ತಹರಿಸಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಇದೀಗ ಬಿಡಿ ಮನೆಗಳ (ಇಂಡಿಪೆಂಡೆಂಟ್‌ ಹೌಸ್‌) ನಿರ್ಮಾಣಕ್ಕೆ ಮುಂದಾಗಿದೆ.

ಆಲೂರಿನಲ್ಲಿ ನಿರ್ಮಿಸಿದ್ದ ವಿಲ್ಲಾಗಳಿಗೆ ಭಾರಿ ಬೇಡಿಕೆ ಬಂದಿದ್ದರಿಂದ ಮತ್ತಷ್ಟು ಉತ್ತೇಜನಗೊಂಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಗ್ರಾಹಕರ ಕೋರಿಕೆ ಮೆರೆಗೆ ಬಿಡಿ ಮನಗೆಳ ನಿರ್ಮಾಣಕ್ಕೆ ಚಿಂತನೆ ನಡೆಸಿದೆ. ಈ ಬಗ್ಗೆ ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಮುಂದಿನ ದಿನಗಳಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಮನೆಗಳು ತಲೆಎತ್ತಲಿವೆ.

ಆಲೂರಿನಲ್ಲಿ ಬಿಡಿಎ ಈ ಹಿಂದೆ 450 ವಿಲ್ಲಾಗಳನ್ನು ನಿರ್ಮಾಣ ಮಾಡಿತ್ತು. ಇದರಲ್ಲಿ 410 ಮಾರಾಟವಾಗಿವೆ. ಆಷಾಢದ ನಂತರ ಉಳಿದ ವಿಲ್ಲಾಗಳು ಮಾರಾಟವಾಗುವ ನಿರೀಕ್ಷೆ ಇದೆ. ಕಣಮಿಣಿಕೆ ಮತ್ತು ಕೋಮಘಟ್ಟಗಳಲ್ಲಿ ಬಿಡಿಎ ನಿರ್ಮಿಸಿದ್ದ ಅಪಾರ್ಟ್‌ ಮೆಂಟ್‌ಗಳಿಗೆ ಬೇಡಿಕೆ ಬಂದಿದ್ದು, ಇದರಿಂದಾಗಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಬಿಡಿ ಮನೆಗಳ ನಿರ್ಮಾಣಕ್ಕೆ ಬಿಡಿಎ ಮುಂದಡಿ ಇರಿಸಿದೆ. 

ತುಮಕೂರು ರಸ್ತೆ ಬಳಿ ದಾಸನಪುರ ಹೋಬಳಿಯ ಹುನ್ನಿಗೆರೆಯಲ್ಲಿನ 20 ಎಕರೆ ಪ್ರದೇಶದಲ್ಲಿ ನವೀನ ಮಾದರಿಯ 600 ಮನೆಗಳನ್ನು ನಿರ್ಮಿಸಲು ಪ್ರಾಧಿಕಾರ ತೀರ್ಮಾನಿಸಿದೆ. ಇಲ್ಲಿ ಒಂದು ಬಿಎಚ್‌ಕೆಯ 300, 3 ಬಿಎಚ್‌ಕೆಯ 200 ಮತ್ತು 4 ಬಿಎಚ್‌ಕೆಯ 100 ಮನೆಗಳ ನಿರ್ಮಾಣ ಮಾಡಲಿದೆ.

ಕಳೆದೆರಡು ವರ್ಷಗಳಲ್ಲಿ ಕಟ್ಟಡ ಸಾಮಗ್ರಿಗಳ ದರ ಹೆಚ್ಚಾಗಿದೆ. ಭೂಮಿ ಮೌಲ್ಯವೂ ದುಬಾರಿಯಾಗಿದೆ. ಹೀಗಾಗಿ ಆಲೂರಿಗಿಂತ ಇಲ್ಲಿ ದರ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯಕ್ಕೆ ದರ ಇನ್ನೂ ನಿಗದಿಯಾಗಿಲ್ಲ. ಬಡಾವಣೆಯ ಜಾಗದ ವೆಚ್ಚ ಹಾಗೂ ನಿರ್ಮಾಣ ವೆಚ್ಚ ಆಧರಿಸಿ ಬಿಡಿಎ ದರ ನಿಗದಿಪಡಿಸಲಿದೆ.

ಸೋಲಾರ್‌ ಪಾರ್ಕ್‌: ಬಿಡಿ ಮನೆಗಳ ನಿರ್ಮಾಣ ಪ್ರದೇಶದಲ್ಲಿ ಸೋಲಾರ್‌ ಪಾರ್ಕ್‌ ತಲೆ ಎತ್ತಲಿದೆ. ವಿದ್ಯುತ್‌ ಆಗಾಗ ಕೈ ಕೊಡುತ್ತಿರುವುದನ್ನು ಮನಗಂಡು ಸೋಲಾರ್‌ ಪಾರ್ಕ್‌ಗೆ ಆದ್ಯತೆ ನೀಡಲಾಗಿದೆ. ಜತೆಗೆ ಸುಸಜ್ಜಿತ ಪಾರ್ಕಿಂಗ್‌, ಆಟದ ಮೈದಾನ, ಉತ್ತಮ ರಸ್ತೆ ನಿರ್ಮಾಣಕ್ಕೂ ಒತ್ತು ನೀಡಲಾಗುತ್ತಿದೆ. ಗ್ರಾಹಕರಿಗೆ ಅಗತ್ಯ ವಸ್ತು ಕೊಳ್ಳಲು ತೊಂದರೆ ಆಗಬಾರದು ಎಂಬ ಉದ್ದೇಶದಿಂದ ನಿರ್ಮಾಣ ಪ್ರದೇಶದಲ್ಲಿ ಒಟ್ಟು 10 ಅಂಗಡಿಗಳನ್ನು ಬಿಡಿಎ ನಿರ್ಮಿಸಲಿದೆ.

ಎಲ್ಲ ವಸ್ತುಗಳು ಈ ಅಂಗಡಿಗಳಲ್ಲೇ ದೊರೆಯಲಿದ್ದು, ದಿನನಿತ್ಯದ ಆಗತ್ಯ ವಸ್ತುಗಳನ್ನು ಕೊಳ್ಳಲು ನಿವಾಸಿಗಳು ಬೇರೆಡೆ ಹೋಗುವ ಅಗತ್ಯ ಇರುವುದಿಲ್ಲ ಎಂದಿರುವ ಬಿಡಿಎ ಹಿರಿಯ ಅಧಿಕಾರಿಗಳು, ಎಲ್ಲ ವರ್ಗದವರಿಂದಲೂ ಬಿಡಿ ಮನೆಗಾಗಿ ಬೇಡಿಕೆ ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಸದಸ್ಯದಲ್ಲೆ ಚಾಲನೆ ಸಿಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಮೆಜೆಸ್ಟಿಕ್‌ನಿಂದ 24 ಕಿ.ಮೀ ದೂರ.: ಹುನ್ನಿಗೆರೆ ಪ್ರದೇಶವು ನೆಲಮಂಗಲದ ಆರ್‌ಟಿಒ ಕಚೇರಿಯಿಂದ 3.5 ಕಿ.ಮೀ, ಮೆಜೆಸ್ಟಿಕ್‌ ಬಸ್‌ ನಿಲ್ದಾಣದಿಂದ 24 ಕಿ.ಮೀ. ಹಾಗೂ ತುಮಕೂರು ರಸ್ತೆಯ ಅಗರವಾಲ್‌ ಭವನದಿಂದ 5 ಕಿ.ಮೀ. ಒಳಗೆ ಇದೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಿಂದ (ಬಿಐಇಸಿ) ಅಂದಾಜು 4 ಕಿ.ಮೀ ದೂರವಾಗಲಿದೆ. 

ಬಿಡಿ ಮನೆಗಳಿಗಾಗಿ ಗ್ರಾಹಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಿನ ದಿನಗಳಲ್ಲಿ ಮನೆಗಳ ನಿರ್ಮಾಣಕ್ಕೆ ಮುಂದಾಗಲಿದೆ.
-ಎನ್‌.ಜಿ.ಗೌಡಯ್ಯ, ಬಿಡಿಎ ಅಭಿಯಂತರ ಅಧಿಕಾರಿ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.