ನೆರೆ ಸಂತ್ರಸ್ತರಿಗೆ ಸ್ಪಂದಿಸುವ ಕೆಲಸವಾಗಲಿ


Team Udayavani, Oct 27, 2019, 3:05 AM IST

nere-santra

ಬೆಂಗಳೂರು: ರಾಷ್ಟ್ರಪಿತ ಮಹಾತ್ಮಾಗಾಂಧೀಜಿ, ಸುಭಾಷ್‌ ಚಂದ್ರಬೋಸ್‌, ವೀರ್‌ ಸಾವರ್ಕರ್‌ ಸೇರಿದಂತೆ ಯಾರ ಬಗ್ಗೆಯೂ ಟೀಕೆ-ಟಿಪ್ಪಣಿ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಬಹುರೂಪಿ ಪ್ರಕಾಶನ ಪ್ರಸ್‌ ಕ್ಲಬ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಆರ್‌.ಟಿ.ವಿಠuಲಮೂರ್ತಿ ಅವರ “ಇದೊಂಥರಾ ಆತ್ಮಕಥೆ’ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಇವತ್ತು ರಾಜ್ಯದ ಜನತೆ ಪ್ರವಾಹ ಸಂಕಷ್ಟದಿಂದ ನರಳುತ್ತಿರುವಾಗ ನಾವು ಅನಗತ್ಯ ವಿಚಾರ ಪ್ರಸ್ತಾಪ ಮಾಡಿಕೊಂಡು ಟೀಕೆ-ಟಿಪ್ಪಣಿಗಳಲ್ಲಿ ಕಾಲ ಕಳೆಯುವುದು ಎಷ್ಟು ಸರಿ.

ಜನತೆಯ ನೋವು ನಿವಾರಿಸಬೇಕಾದ ಕೆಲಸ ಜನಪ್ರತಿನಿಧಿಗಳಾದ ನಮ್ಮ ಮೇಲಿದೆ. ಅದು ಇಂದಿನ ಅಗತ್ಯ ಸಹ ಎಂದು ಪ್ರತಿಪಾದಿಸಿದರು. ನಮ್ಮ ದೇಶದ ಇತಿಹಾಸ ನೋಡಿದಾಗ ಯಾರು ಏನೇನು ಕೊಡುಗೆ ಕೊಟ್ಟಿದ್ದಾರೆ ಎಂಬುವುದು ಅರಿವಾಗುತ್ತದೆ. ಬರೀ ಟೀಕೆ ಮಾಡುವುದರಿಂದ ಈ ದೇಶದ ಜ್ವಲಂತ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದು ಹೇಳಿದರು.

ದೇಶದ ಇವತ್ತಿನ ಪರಿಸ್ಥಿತಿ ನೋಡಿದಾಗ ಎತ್ತ ಸಾಗುತ್ತಿದೆ ಎಂಬುವುದೇ ಅರಿವಿಗೆ ಬರುತ್ತಿಲ್ಲ. ಪಾಕಿಸ್ತಾನ-ಭಾರತ ವಿಭಜನೆ ವೇಳೆ ತೆಗೆದುಕೊಂಡ ತೀರ್ಮಾನಗಳು ಇನ್ನೂ ಬಗೆಹರಿದಿಲ್ಲ. ಕಾಶ್ಮೀರದಲ್ಲಿನ 370 ವಿಧಿ ರದ್ದುಪಡಿಸಿದ ಮೇಲೆ ಅಲ್ಲಿ ಯಾವ ಸ್ಥಿತಿ ನಿರ್ಮಾಣವಾಗಿದೆ. ಜನರು ಯಾವ ರೀತಿಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ ಎಂಬುವುದು ನಮ್ಮ ಕಣ್ಮುಂದೆ ಇದೆ ಎಂದರು.

ಈ ಹಿಂದೆ ದೇಶದಲ್ಲಿರುವ ಗುಡಿ ಕೈಗಾರಿಕೆಗಳಿಗೆ ಜೀವನೀಡಿ ಬಡವರ ಕೈಗೆ ಉದ್ಯೋಗ ನೀಡುವ ಹಿನ್ನೆಲೆಯಲ್ಲಿ ಗಾಂಧೀಜಿಯವರು ಸ್ವದೇಶಿ ಚಳುವಳಿಗೆ ಕರೆ ನೀಡಿದರು. ಆದರೆ ಈಗ ಕೇಂದ್ರ ಸರ್ಕಾರ ತನ್ನ ನೀತಿಗಳ ಮೂಲಕ ನಿರುದ್ಯೋಗ, ಉದ್ಯೋಗ ಕಡಿತ, ಆರ್ಥಿಕ ಸಂಕಷ್ಟ ತಂದೊಡ್ಡಿದೆ. ಯಾರಾದರೂ ಮಾತನಾಡಿದರೆ ಅವರ ವಿರುದ್ಧ ಎಫ್ಐಆರ್‌ ಹಾಕಿ , ಐಟಿ, ಇಡಿ, ಆದಾಯ ತೆರಿಗೆ ದಾಳಿ ಮಾಡಿಸಲಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತದಂತ ಸ್ಥಿತಿ ನಿರ್ಮಾಣವಾಗಿವೆ ಎಂದು ಹೇಳಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಪತ್ರಿಕೆಗಳ ಕೊಡುಗೆಯನ್ನು ಮರೆಯುವಂತಿಲ್ಲ.ಆದರೆ ಇಂದು ಮಾಧ್ಯಮ ಕ್ಷೇತ್ರ ಯಾವ ದಿಕ್ಕಿನಲ್ಲಿ ಹೋಗಬೇಕಿತ್ತೋ ಹೋಗುತ್ತಿಲ್ಲ. ಮಾಧ್ಯಮಗಳು ಯಾವ ವಿಚಾರಕ್ಕೆ ಒತ್ತು ಕೊಡಬೇಕು, ಯಾವ ವಿಚಾರಕ್ಕೆ ಒತ್ತು ಕೊಡಬಾರದು ಎಂಬುದರ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದರು. ಮೌಲ್ಯಾಧಾರಿತ, ವಸ್ತು ನಿಷ್ಠ, ವರದಿಗಳು ಇತ್ತೀಚೆಗೆ ಕಣ್ಮರೆಯಾಗುತ್ತಿವೆ. ಈಗಿನ ಸ್ಥಿತಿಯಲ್ಲಿ ಪತ್ರಿಕಾರಂಗ ಎಚ್ಚರಿಕೆಯಿಂದ ಕೆಲಸ ಮಾಡಬೇಕು.

ಏಕೆಂದರೆ, ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸಿರುವಾಗ ಮಾಧ್ಯಮಗಳ ಪಾತ್ರ ದೊಡ್ಡದು ಎಂದು ತಿಳಿಸಿದರು. ಸಾಹಿತಿ ಡಾ.ವಿಜಯಮ್ಮ ಪುಸ್ತಕದ ಕುರಿತು ಮಾತನಾಡಿದರು. ಆರ್‌.ಟಿ.ವಿಠಲಮೂರ್ತಿ ಸ್ವಾಗತ ಕೋರಿದರು. ಬಹುರೂಪಿ ಪ್ರಕಾಶನದ ಜಿ.ಎನ್‌.ಮೋಹನ್‌ ಪ್ರಸ್ತಾವಿಕ ಭಾಷಣ ಮಾಡಿದರು. ಹಿರಿಯ ಪತ್ರಕರ್ತ ಎಸ್‌.ರಾಜಶೇಖರ್‌ ಕಾರ್ಯಕ್ರಮ ನಿರೂಪಿಸಿದರು.

ಐಟಿ ದಾಳಿ ನಿಮ್ಮ ಮೇಲೆ ಆಗುತ್ತಂತೆ ಎಂದು ಮಾಧ್ಯಮದವರು ಕೇಳುತ್ತಾರೆ. ನಾನು ಆದರೆ ಆಗಲಿ. ನನಗೇನು ಭಯ ಇಲ್ಲ. ನನ್ನ ಮನೆಯ ಮೇಲೆ ದಾಳಿ ನಡೆದರೆ ಯಡಿಯೂರಪ್ಪ ಅವರ ದಾಖಲೆ ಸಿಗುತ್ತದೆ ಎಂದು ಹೇಳಿದ್ದೇನೆ. ಇನ್ನೇನು ಹೇಳಲಿ. ನನಗೇನು ಭಯ ಇಲ್ಲ.
-ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.