ಕ್ಯಾಬ್ ಚಾಲಕಗೆ ಥಳಿಸಿ ದರೋಡೆ
Team Udayavani, May 31, 2018, 10:13 AM IST
ನೆಲಮಂಗಲ: ಮಗಳನ್ನು ಶಾಲೆಗೆ ಸೇರಿಸುವ ಉದ್ದೇಶದಿಂದ ಮೂರು ದಿನಗಳಿಂದ ನಿರಂತರವಾಗಿ ಕಾರು ಓಡಿಸಿದ ಓಲಾ ಕ್ಯಾಬ್ ಚಾಲಕ ಸಂಪಾದಿಸಿದ್ದ 16 ಸಾವಿರ ರೂ. ಹಣದ ಜತೆಗೆ ವಾಹನವನ್ನೂ ದುಷ್ಕರ್ಮಿಗಳು ಕದ್ದೊಯ್ದ ಘಟನೆ ಮಾಚೋಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಓಲಾ ಕ್ಯಾಬ್ ಬುಕ್ ಮಾಡಿದ ಆರೋಪಿಗಳು, ಮಂಗಳವಾರ ರಾತ್ರಿ 12 ಗಂಟೆಗೆ ಕ್ಯಾಬ್ ಹತ್ತಿದ್ದಾರೆ. ನಂತರ ರಾತ್ರಿ 1 ಗಂಟೆಗೆ ನಿಗದಿಯಂತೆ ಮಾಚೋಹಳ್ಳಿಗೆ ಬಂದಿದ್ದು, ಇಳಿಯುವಾಗ ಕ್ಯಾಬ್ ಚಾಲಕ ಮಲ್ಲಿಕಾರ್ಜುನ್ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಮಾರಕಾಸ್ತ್ರ ತೋರಿಸಿ, ಜೀವ ಬೆದರಿಕೆ ಹಾಕಿ, 16,000 ರೂ.ನಗದು ಕಸಿದುಕೊಂಡು, ಚಾಲಕನನ್ನು ಕ್ಯಾಬ್ನಿಂದ ಕೆಳಗೆ ತಳ್ಳಿ ಕ್ಯಾಬ್ ತೆಗೆದುಕೊಂಡು ಪರಾರಿಯಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ