ಬಕ್ರೀದ್‌ ಬಂತು; ಕುರಿಗಳಿಗೆ ಬೇಡಿಕೆ ತಂತು


Team Udayavani, Aug 30, 2017, 11:29 AM IST

Kuri2.jpg

ಬೆಂಗಳೂರು: ಬಕ್ರೀದ್‌ ಹಬ್ಬ ಸಮೀಪಿಸಿದ್ದು, ರಾಜಧಾನಿಯಲ್ಲಿ ಕುರಿಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು… ಹೌದು, ಮುಸ್ಲಿಮರ ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿರುವ ಬಕ್ರೀದ್‌ಗೆ ನಾಲ್ಕು ದಿನ ಬಾಕಿ ಇರುವಂತೆ ಟಗರುಗಳಿಗೆ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಚಾಮರಾಜಪೇಟೆ, ಜೆಸಿ ನಗರ, ಫ್ರೆàಜರ್‌ ಟೌನ್‌ ದೊಡ್ಡಿ ಬಳಿ, ನೆಲಮಂಗಲ ಸೇರಿದಂತೆ ಹೊರವಲಯದಿಂದ ಕುರಿಗಳನ್ನು ತಂದು ಮಾರಾಟ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಜತೆಗೆ ಉತ್ತಮ ತಳಿಯ ಕುರಿ, ಮೇಕೆಗಳನ್ನು ಆನೇಕಲ್‌, ಮಾಲೂರು, ಹೊಸಕೋಟೆ, ಬನ್ನೂರು ಸಂತೆಗಳಿಗೂ ಹೋಗಿ ತರಲಾಗಿದೆ. ತೂಕ ಹಾಗೂ ತಳಿಯ ಮೇಲೆ ಅದಕ್ಕೆ ಬೆಲೆಯೂ ನಿಗದಿಯಾಗಿದೆ. ಈ ಬಾರಿ ತಮಿಳುನಾಡಿನಿಂದಲೂ ಹೆಚ್ಚಿನ ಪ್ರಮಾಣದಲ್ಲಿ ಕುರಿಗಳು ಬಂದಿವೆ. ಆದರೆ, ಮಳೆ ಕಾರಣದಿಂದ ವ್ಯಾಪಾರ ಸ್ವಲ್ಪ ಇಳಿಮುಖವಾಗಿದ್ದು, ಮಾರಾಟಗಾರರು ಕೊನೆಯ ಮೂರು ದಿನಗಳಲ್ಲಿ ಒಳ್ಳೆಯ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.

ಚಾಮರಾಜಪೇಟೆ ಈದ್ಗಾ ಮೈದಾನದ ಸಂತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕುರಿ ಮತ್ತು ಮೇಕೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತರಲಾಗಿದೆ. ಸತತವಾಗಿ ಸುರಿದ ಮಳೆ, ಜೊತೆಗೆ ಬೆಲೆ ಏರಿಕೆ ಬಿಸಿ ಇವೆಲ್ಲ ಕಾರಣಗಳಿಂದ ಇಲ್ಲಿವರೆಗೆ ನಿರೀಕ್ಷಿತ ಪ್ರಮಾಣದಲ್ಲಿ ವ್ಯಾಪರ ನಡೆದಿಲ್ಲ. ಆದರೆ, ಶನಿವಾರ ಬಕ್ರೀದ್‌ ಇದ್ದು, ಬುಧವಾರ, ಗುರುವಾರ ಮತ್ತು ಶುಕ್ರವಾರ ಒಳ್ಳೆಯ ವ್ಯಾಪಾರ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿ ವ್ಯಾಪಾರಿಗಳಿದ್ದಾರೆ.

ವಿಶೇಷ ಸಂತೆ: ಕಳೆದ 40 ವರ್ಷಗಳಿಂದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಕ್ರೀದ್‌ ಹಬ್ಬಕ್ಕೆ ವಿಶೇಷ ಸಂತೆ ನಡೆಯುತ್ತದೆ. ಹಬ್ಬ ಇನ್ನೂ ಒಂದು ತಿಂಗಳು ಇರುವಾಗಲೇ ಇಲ್ಲಿ ವ್ಯಾಪಾರ ಆರಂಭವಾಗಿರುತ್ತದೆ. ಇಲ್ಲಿಗೆ ನೆರೆಯ ತಮಿಳುನಾಡು ಮತ್ತು ಆಂಧ್ರಪ್ರದೇಶ ಮಾತ್ರವಲ್ಲದೆ ಶಿರಾ, ಮಂಡ್ಯ, ಮಳವಳ್ಳಿ, ಮದ್ದೂರು, ತುಮಕೂರು, ಚಿತ್ರದುರ್ಗ, ಸಿಂಧನೂರು, ಅಮಿನಗಡ ಮತ್ತಿತರ ಕಡೆಗಳಿಂದ ವಿವಿಧ ತಳಿಗಳ ಕುರಿ ಮತ್ತು ಮೇಕೆಗಳನ್ನು ತರಲಾಗುತ್ತದೆ. 

30 ಸಾವಿರ ಕುರಿ ಮಾರಾಟ ನಿರೀಕ್ಷೆ: ಸಂತೆ ಆರಂಭವಾಗಿ 15ಕ್ಕೂ ಹೆಚ್ಚು ದಿನ ಕಳೆದಿವೆ. ಪ್ರತಿ ದಿನ 500 ರಿಂದ 1 ಸಾವಿರ ಕುರಿಗಳಂತೆ ಈವರೆಗೆ 13ರಿಂದ 15 ಸಾವಿರ ಕುರಿಗಳು ಬಿಕರಿಯಾಗಿವೆ. ಕೊನೆಯ ಮೂರು ದಿನಗಳಲ್ಲಿ ವ್ಯಾಪರ ಹೆಚ್ಚಾಗುವ ಸಾಧ್ಯತೆಯಿದ್ದು, ಈ ಬಾರಿ ಅಂದಾಜು 25ರಿಂದ 30 ಸಾವಿರ ಕುರಿ ಮತ್ತು ಮೇಕೆಗಳು ಮಾರಾಟ ಆಗುವ ನಿರೀಕ್ಷೆಯಿದೆ. ತಮಿಳುನಾಡಿನಿಂದ 4ರಿಂದ 5 ಸಾವಿರ ಕುರಿಗಳು ಬಂದಿರಬಹುದು. ಕಳೆದ ವರ್ಷಕ್ಕಿಂತ ಬೆಲೆ ಸ್ವಲ್ಪ ಕಡಿಮೆ ಇದೆ.

ಅಲ್ಲದೇ ಮಳೆಯಲ್ಲಿ ನೆನೆದಿದ್ದರಿಂದ ಜ್ವರದಿಂದಾಗಿ ಕುರಿಗಳ ತೂಕ ಕಡಿಮೆ ಆಗುತ್ತದೆ. ಇದರಿಂದ ಬೆಲೆ ಮೇಲೆ ಹೊಡೆತ ಬೀಳುತ್ತದೆ. ಕಳೆದ ವರ್ಷ 10 ಸಾವಿರ ರೂ.ದಿಂದ 1 ಲಕ್ಷ ರೂ.ವರೆಗೆ ಬೆಲೆ ಇತ್ತು. ಆದರೆ, ಈ ಬಾರಿ 7 ಸಾವಿರ ರೂ.ದಿಂದ 80 ಸಾವಿರ ರೂ. ಮಾತ್ರ ಇದೆ ಎಂದು ಬೆಂಗಳೂರಿನ ವ್ಯಾಪಾರಿ ಮಹ್ಮದ್‌ ಮತೀನ್‌ ಹೇಳುತ್ತಾರೆ. ಇದೇ ರೀತಿ ಜೆಸಿ ನಗರ ರಸ್ತೆ, ಫ್ರೆàಜರ್‌ಟೌನ್‌ ದೊಡ್ಡಿ ಬಳಿಯೂ ಕುರಿ ಮತ್ತು ಮೇಕೆಗಳ ಮಾರಾಟ ಭರದಿಂದ ಸಾಗಿದ್ದು, ಹಬ್ಬಕ್ಕೆ “ಖುರ್ಬಾನಿ’ ನೀಡಲು ಮುಸ್ಲಿಂ ಬಾಂಧವರು ಕುರಿ ಮತ್ತು ಮೇಕೆಗಳನ್ನು ಖರೀದಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.